Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....