Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...