Homeಕರೋನಾ ತಲ್ಲಣಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ಡ್ರೈ ರನ್ ಎಂದರೇನು?: ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಮೂರು ಲೋಪಗಳು

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ.

- Advertisement -
- Advertisement -

ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ದೇಶದ 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ಲಸಿಕೆ ತಾಲೀಮು ಆರಂಭವಾಗಿದೆ. ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯದ ಅಂಗವಾಗಿ ದೇಶದಲ್ಲಿ ಈ ತಾಲೀಮು ನಡೆಯುತ್ತಿದೆ.

ಮೊದಲ ತಾಲೀಮು, ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ನಾಲ್ಕು ರಾಜ್ಯಗಳಲ್ಲಿ ಡಿಸೆಂಬರ್ 28, 29 ರಂದು ನಡೆದಿದೆ. ಈ ಪ್ರಯೋಗದಲ್ಲಿ ಮೂರು ಪ್ರಮುಖ ಲೋಪಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಎರಡನೇ ಹಂತದ ತಾಲೀಮಿನಲ್ಲಿ ನಡೆದಿದೆ.

ಡ್ರೈ ರನ್ ಎಂದರೇನು?

ಲಸಿಕೆ ಹೇಗೆ ಕೊಡಬೇಕೆಂದು ಪೂರ್ವತಯಾರಿ ನಡೆಸಿ ತಾಲೀಮು ನಡೆಸುವುದನ್ನು ಡ್ರೈ ರನ್ ಎನ್ನುತ್ತಾರೆ. ಲಸಿಕೆ ತಾಲೀಮಿನಲ್ಲಿ ನೈಜ್ಯ ಲಸಿಕೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಲಸಿಕೆ ವಿತರಣೆ ಯೋಜನೆಯ ಎಲ್ಲ ಪ್ರಕ್ರಿಯೆಗಳು ನಡೆಯಲಿದೆ. ಲಸಿಕೆ ಸಂಗ್ರಹಣೆ ವ್ಯವಸ್ಥೆ, ದಾಖಲೆಗಳ ಪರಿಶೀಲನೆ, ಲಸಿಕೆ ಸಾಗಣಿಕೆ, ಭದ್ರತೆ, ಮೆಲಧಿಕಾರಿಗಳಿಗೆ ವರದಿ ಒಪ್ಪಿಸುವುದು. ಲಸಿಕೆ ವಿತರಣೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಪರೀಕ್ಷಿಸಲು ಈ ಡ್ರೈ ರನ್ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ಲಸಿಕೆ ತಾಲೀಮು ನಡೆಸಲು ಸುಮಾರು 96,000 ವ್ಯಾಕ್ಸಿನೇಟರ್‌ಗಳಿಗೆ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಪೈಕಿ 2,360 ಮಂದಿಗೆ ರಾಷ್ಟ್ರೀಯ ತರಬೇತುದಾರರ ತರಬೇತಿ ಕೇಂದ್ರದಲ್ಲಿ ಮತ್ತು 57,000 ಕ್ಕೂ ಹೆಚ್ಚು ಜನರಿಗೆ ಜಿಲ್ಲಾ ಮಟ್ಟದಲ್ಲಿ 719 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ.

ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳ 16 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಒಂದು ಕೇಂದ್ರ, ತಾಲೂಕು ಮಟ್ಟದಲ್ಲಿ ಒಂದು ಮತ್ತು ಗ್ರಾಮೀಣ ಮಟ್ಟದಲ್ಲಿ ಒಂದೊಂದು ಪ್ರಾಥಮಿಕ ಕೇಂದ್ರಗಳಲ್ಲಿ ಪ್ರಯೋಗ ನಡೆಯಲಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಮೊದಲ ಲಸಿಕೆ ತಾಲೀಮು (ಡ್ರೈ ರನ್) ಅಸ್ಸಾಂ, ಆಂಧ್ರಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳ ತಲಾ ನಾಲ್ಕು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಇದಾಗಿತ್ತು. ಅಂದರೆ 16 ಕೇಂದ್ರಗಳಲ್ಲಿ 1,600 ಜನರಿಗೆ ಲಸಿಕೆ ಹಾಕುವ ಪ್ರಯೋಗ. ಈ ಸಣ್ಣ ಪ್ರಮಾಣದ ಸಂಖ್ಯೆಯಿದ್ದರೂ ಹಲವು ಲೋಪಗಳು ಕಂಡುಬಂದಿದ್ದವು.

ಮೊದಲ ಡ್ರೈ ರನ್‌ನಲ್ಲಿ ಕಂಡು ಬಂದ ಲೋಪಗಳು:

1. ದೂರದ ಗ್ರಾಮಗಳ ಪಿನ್‌ಕೋಡ್ ಸಂಖ್ಯೆ ಕೊ-ವಿನ್ ಪ್ಲಾಟ್‌ಫಾರಂಗೆ ಸರಿಯಾಗಿ ಹೊಂದಾಣಿಕೆ ಆಗದೇ ಇದ್ದಿದ್ದು. ಕೊ-ವಿನ್  ವ್ಯವಸ್ಥೆ ಲಸಿಕಾ ಕಾರ್ಯಕ್ರಮದ ಮಹತ್ತರ ಡಿಜಿಟಲ್ ವ್ಯವಸ್ಥೆಯಾಗಿದ್ದು, ಅದು ಇಡೀ ಲಸಿಕಾ ಕಾರ್ಯಕ್ರಮವನ್ನು ಟ್ರ್ಯಾಕ್ ಮಾಡುತ್ತಿರುತ್ತದೆ. ಮೊದಲ ಡ್ರೈ ರನ್‌ನಲ್ಲಿ ಕೊ-ವಿನ್ ದೂರದ ಗ್ರಾಮಗಳ ಪಿನ್‌ಕೋಡ್ ಮ್ಯಾಪಿಂಗ್‌ನಲ್ಲಿ ವಿಫಲವಾದ ನಂತರ, ಆರೋಗ್ಯಾಧಿಕಾರಿಗಳು ಮ್ಯಾನುವಲ್ ಆಗಿ ಪಿನ್‌ಕೋಡ್ ದಾಖಲಿಸಿದ್ದರು. ಈಗ ಎರಡನೇ  ತಾಲೀಮಿನಲ್ಲಿ ಸಾಫ್ಟ್‌ವೇರ್ ಅನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎನ್ನಲಾಗಿದೆ.

Image
PC: ANI

2. ಲಸಿಕೆ ನೀಡುವಾಗ ಅಥವಾ ನೀಡಿದ ನಂತರ ಸಂಭವಿಸಬಹುದಾದ ಅಹಿತಕರ ಘಟನೆ ಅಥವಾ ಅಡ್ಡ ಪರಿಣಾಮಗಳನ್ನು ಆಗಲೇ (ರಿಯಲ್ ಟೈಮ್‌ನಲ್ಲಿ) ದಾಖಲಿಸಿಕೊಳ್ಳಲು ಆಗದೇ ಇದ್ದುದು. ಇಂತಹ ಘಟನೆಗಳು ಇಡೀ ಸೆಷನ್ ಮುಗಿದ ನಂತರವಷ್ಟೇ (ಮೊದಲ ಹಂತದಲ್ಲಿ 100 ಜನರಿಗೆ ಲಸಿಕೆ ನೀಡಿದ ನಂತರ) ಕೊ-ವಿನ್‌ಗೆ ಒಮ್ಮೆಲೇ ಅಪ್‌ಲೋಡ್ ಆಗುತ್ತಿದ್ದವು.

3. ಲಸಿಕಾ ತಂಡಕ್ಕೆ ಸಿಕ್ಕಿರುವ ಅಸಮರ್ಪಕ ತರಬೇತಿ. ಕೆಲವು ಕಡೆ ಐವರ ಲಸಿಕಾ ತಂಡದಲ್ಲಿ, ಯಾರು ಯಾವ ಕೆಲಸ ಮಾಡಬೇಕು ಎಂಬುದೇ ಗೊಂದಲಮಯವಾಗಿತ್ತು.

ಒಬ್ಬ ಪ್ರಿಸೈಡಿಂಗ್ ಆಫೀಸರ್ ಮತ್ತು ನಾಲ್ಕು ವ್ಯಾಕಿನೇಟರ್‌ಗಳ ನಡುವೆ ಸಾಕಷ್ಟು ಗೊಂದಲವಿತ್ತು. ಯಾರು ವ್ಯಾಕಿನೇಟರ್, ಯಾರು ಪ್ರಿಸೈಡಿಂಗ್ ಆಫೀಸರ್ ಎಂಬ ಗೊಂದಲವೂ ಮೂಡಿದ ಪ್ರಕರಣಗಳು ನಡೆದಿವೆ.  ಈ ಹಿನ್ನೆಲೆ ಎರಡನೇ ತಾಲೀಮಿಗೆ ತಯಾರಾಗಿರುವ ತಂಡಗಳಿಗೆ ಸರಿಯದ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.


ಇದನ್ನೂ ಓದಿ: ಸೆಪ್ಟಂಬರ್‌ ತಿಂಗಳವರೆಗೆ ಕೇಂದ್ರ ಸರ್ಕಾರ ಮಾಡಿದ ಒಟ್ಟು ಸಾಲ 107.04 ಲಕ್ಷ ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...