Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...