Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...