Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...