Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...