Homeಮುಖಪುಟದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

ದೇಶದಾದ್ಯಂತ ಉತ್ತಮ ಮುಂಗಾರು ಮಳೆಯಾದರೂ ಆಹಾರ ಧಾನ್ಯಗಳ ಬೆಲೆ ಏರಿಕೆ!

- Advertisement -
- Advertisement -

ಉತ್ತಮ ಮುಂಗಾರು ಹಾಗೂ ಖಾರಿಫ್ ಮತ್ತು ರಬಿ ಬೆಳೆಗಳ ಉತ್ತಮ ಇಳುವರಿಯ ಹೊರತಾಗಿಯು, ಆಹಾರ ಧಾನ್ಯಗಳು, ಖಾದ್ಯ ತೈಲ ಮತ್ತು ತರಕಾರಿಗಳ ಬೆಲೆಗಳು ಕಳೆದ ಎರಡು ತಿಂಗಳುಗಳಲ್ಲಿ ಭಾರಿ ಏರಿಕೆಯಾಗಿವೆ ಎಂದು ಸರ್ಕಾರ ಮತ್ತು ಮಾರುಕಟ್ಟೆಯ ಅಂಕಿಅಂಶಗಳು ತಿಳಿಸಿವೆ. ಹೆಚ್ಚಿನ ಆಹಾರ ಬೆಲೆಗಳಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳಿವೆ. ದೇಶದಾದ್ಯಂತ

ದೇಶದ ಪ್ರತಿ ಎರಡು ಕುಟುಂಬಗಳಲ್ಲಿ ಒಂದು ಕುಟುಂಬ ಖಾದ್ಯ ತೈಲ ಬೆಲೆಗಳ ಏರಿಕೆಯನ್ನು ನಿಭಾಯಿಸಲು ಕಷ್ಟ ಪಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್‌ನ ಸಮೀಕ್ಷೆಯು ಹೇಳಿದೆ. ಹಾಗಾಗಿ ಈ ಕುಟುಂಬಗಳು ತಮ್ಮ ಬಳಕೆಯನ್ನು ಕಡಿಮೆ ಮಾಡಲು ಮತ್ತು ಅಗ್ಗದ ಬ್ರಾಂಡ್‌ಗಳ ಖಾದ್ಯ ತೈಲವನ್ನು ಖರೀದಿಸುವಂಗಾಗಿದೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದಾದ್ಯಂತ ಹಬ್ಬಗಳು ಆಚರಣೆಯಾಗುತ್ತಿರುವ ಋತುವಿನ ವೇಳೆ ಹಣದುಬ್ಬರದ ಒತ್ತಡವು ಕುಟುಂಬಗಳ ಬಜೆಟ್ ಮೇಲೆ ಬೀರುತ್ತಿವೆ. ಹಬ್ಬದ ಋತುವಿನ ನಂತರ ಭಾರತವು ಮದುವೆಯ ಋತುವಿಗೆ ಹೊರಳುತ್ತಿದ್ದು, ಖಾದ್ಯ ತೈಲ ಮತ್ತು ಆಹಾರ ಧಾನ್ಯಗಳ ಬೆಲೆ ಹೆಚ್ಚಿರುವುದು ದೇಶದ ಕುಟುಂಬದ ಬಜೆಟ್‌ಗಳನ್ನು ತಗ್ಗಿಸುತ್ತದೆ ಎಂದು ವರದಿಯು ಹೇಳಿದೆ.

ಅದಾಗ್ಯೂ, ಸರ್ಕಾರವು ಹಣದುಬ್ಬರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ. ಹಣದುಬ್ಬರ ಕಡಿಮೆ ಮಾಡುವ ಉಪಕ್ರಮವಾಗಿ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಸರಣಿಯನ್ನು ಪ್ರಾರಂಭಿಸಿದ್ದು, ಭಾರತ್ ಆಟಾ, ಅಕ್ಕಿ ಮತ್ತು ಬೇಳೆಯನ್ನು ಗ್ರಾಹಕರಿಗೆ ಅಗ್ಗದ ದರದಲ್ಲಿ ನೇರ ಮಾರಾಟಕ್ಕೆ ಮುಂದಾಗಿದೆ. ಇದಲ್ಲದೆ, ಬೆಲೆಯನ್ನು ತಗ್ಗಿಸಲು ದೇಶಾದ್ಯಂತ 100ಕ್ಕೂ ಹೆಚ್ಚು ಕೇಂದ್ರಗಳಿಗೆ ಈರುಳ್ಳಿ ಮತ್ತು ಟೊಮೆಟೊದಂತಹ ಅಗ್ಗದ ತರಕಾರಿಗಳನ್ನು ಸರಬರಾಜು ಮಾಡುತ್ತಿದೆ.

ಸರ್ಕಾರದ ಈ ಮಧ್ಯ ಪ್ರವೇಶ ಪ್ರಭಾವ ಬೀರಲು ಪ್ರಾರಂಭಿಸಿದ್ದು, ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿವೆ ಎಂದು ಸರ್ಕಾರದ ವರದಿಗಳು ಉಲ್ಲೇಖಿಸಿವೆ. ಆದರೆ ಉತ್ತರ ಭಾರತದಾದ್ಯಂತ ಮುಂಬರುವ ಮದುವೆಯ ಋತುವಿನ ಕಾರಣಕ್ಕೆ ಆಹಾರ ಧಾನ್ಯಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿ ನೀತಿಯ ಬಗ್ಗೆ ಸರ್ಕಾರದ ದೃಷ್ಟಿಕೋನವು ಅವ್ಯವಸ್ಥೆಯನ್ನು ಸೃಷ್ಟಿಸಿದೆ ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೃಷಿ ಮಾರುಕಟ್ಟೆಯ “ಅಕಾಲಿಕ ಮತ್ತು ಅನಗತ್ಯ” ನಿಯಂತ್ರಣದ ಕಾರಣಕ್ಕೆ ಪೂರೈಕೆಯ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ, ಪೂರೈಕೆಯ ನಿರ್ಬಂಧಗಳನ್ನು ಸರಾಗಗೊಳಿಸುವ ಬದಲು ಸರ್ಕಾರವು ಬಿಕ್ಕಟ್ಟನ್ನು ನಿರ್ವಹಿಸಲು ಪ್ರಯತ್ನಿಸುತ್ತಿದೆ” ಎಂದು ಕೃಷಿ ಸರಕುಗಳ ತಜ್ಞ ಆರ್‌ಎಸ್ ರಾಣಾ ಹೇಳಿದ್ದಾರೆ.

“ಆಂತರಿಕವಾಗಿ ಬೆಲೆಗಳನ್ನು ಕಡಿಮೆ ಮಾಡಲು ಮೊದಲು ಅವರು ರಫ್ತುಗಳ ಮೇಲೆ ನಿಷೇಧವನ್ನು ಹಾಕಿದರು ಮತ್ತು ವಿವಿಧ ಪ್ರಮುಖ ತರಕಾರಿಗಳ ಮೇಲೆ ಸಂಗ್ರಹ ಮಿತಿಗಳನ್ನು ವಿಧಿಸಿದರು. ಆದರೆ ಇದು ರೈತರ ಹಿತಾಸಕ್ತಿಯನ್ನು ಪ್ರತಿಧ್ವನಿಸಲಿಲ್ಲ. ಇದರಿಂದಾಗಿ ಪೂರೈಕೆಯ ಮೇಲೆ ಪರಿಣಾಮ ಬೀರಿತು” ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶ ಮೂಲದ ಸರಕು ತಜ್ಞ ಅಜಯ್ ಜೈನ್ ಮಾತನಾಡಿ, “ಮೆಕ್ಕೆಜೋಳ, ಅಕ್ಕಿ ಮತ್ತು ಕಬ್ಬಿನಂತಹ ಪ್ರಮುಖ ಬೆಳೆಗಳನ್ನು ಎಥೆನಾಲ್ ಉತ್ಪಾದನೆಗೆ ನೀಡಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ಮಹಾರಾಷ್ಟ್ರ | ಸೀಟು ಹಂಚಿಕೆ ಒಪ್ಪಂದಕ್ಕಿಂತ 2 ಹೆಚ್ಚುವರಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...