Homeಕರ್ನಾಟಕಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ 'ಆಕ್ಟ್- 1978’

ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ಲಾಕ್‌ಡೌನ್ ಘೋಷಣೆಯಾಗಿ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಅನ್‌ಲಾಕ್ 5.0ದಲ್ಲಿ ಚಿತ್ರಮಂದಿರಗಳ ರೀಒಪನ್‌ಗೆ ಅವಕಾಶ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡದ ಬಹು ನಿರೀಕ್ಷಿತ ಚಿತ್ರ ಆಕ್ಟ್- 1978 ತೆರೆಗೆ ಬರಲು ಸಜ್ಜಾಗಿದೆ.

ಲಾಕ್‌ಡೌನ್‌ನಿಂದ ಸುಮಾರು ಏಳು ತಿಂಗಳ ನಂತರ ಸಿನಿಮಾಗಳು ಪ್ರರ್ದಶವಾಗುತ್ತಿದ್ದು, ಆಕ್ಟ್- 1978 ಸಿನಿಮಾವನ್ನು ನೇರವಾಗಿ ಥಿಯೇಟರ್ ನಲ್ಲಿಯೇ ರಿಲೀಸ್ ಮಾಡಲು ಚಿತ್ರತಂಡ ತಯಾರಾಗಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರವನ್ನು ನೀಡಲಾಗಿದ್ದು ಚಿತ್ರದ ನಿರ್ದೇಶಕ ಮಂಸೋರೆ ನವೆಂಬರ್ 2 ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಪೋಸ್ಟರ್‌ಗಳು ಭಾರಿ ಹವಾ ಕ್ರಿಯೇಟ್ ಮಾಡಿವೆ. ಚಿತ್ರದ ಪೋಸ್ಟರ್‌ನಲ್ಲಿ ನಟಿ ಯಜ್ಞಾ ಶೆಟ್ಟಿ ಕುತೂಹಲ ಮೂಡಿಸುವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿಯ ಕೈಯಲ್ಲಿ ಪಿಸ್ತೂಲ್ ಮತ್ತು ವಾಕಿ ಟಾಕಿ ಹಿಡಿದು, ಬಾಂಬ್ ಕಟ್ಟಿಕೊಂಡಿರುವ ಚಿತ್ರ ನಿಜಕ್ಕೂ ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Nathicharami filmmaker's next gets a U certificate | Kannada Movie News - Times of India

ಇನ್ನು ಇತ್ತಿಚೇಗೆ (ಅ.25) ಬಿಡುಗಡೆಯಾದ ಚಿತ್ರದ “ತೇಲಾಡೋ ಮುಗಿಲೇ” ಲಿರಿಕಲ್ ಸಾಂಗ್ ಜನರ ಮೆಚ್ಚುಗೆ ಗಳಿಸಿವೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್‌ ಬಿಡುಗಡೆ ಮಾಡಿದ ಈ ಹಾಡು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದಾರೆ.

’ಮೊದಲು ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿ ನಂತರ ಒಟಿಟಿ  ವೇದಿಕೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ’. ಜೊತೆಗೆ ನವೆಂಬರ್ 2 ರಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಚಿತ್ರ ನಿರ್ದೇಶಕ ಮಂಸೋರೆ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಚಿತ್ರ ಬಿಡುಗಡೆ ಬಗ್ಗೆ ಇದ್ದ ಗೊಂದಲಗಳನ್ನು ನಿವಾರಿಸಿದ್ದಾರೆ.

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ನಿರ್ದೇಶಕ ಮಂಸೋರೆ

ಚಿತ್ರಕ್ಕೆ ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್ ಹೀಗೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...