Homeಕರ್ನಾಟಕಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ 'ಆಕ್ಟ್- 1978’

ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ಲಾಕ್‌ಡೌನ್ ಘೋಷಣೆಯಾಗಿ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಅನ್‌ಲಾಕ್ 5.0ದಲ್ಲಿ ಚಿತ್ರಮಂದಿರಗಳ ರೀಒಪನ್‌ಗೆ ಅವಕಾಶ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡದ ಬಹು ನಿರೀಕ್ಷಿತ ಚಿತ್ರ ಆಕ್ಟ್- 1978 ತೆರೆಗೆ ಬರಲು ಸಜ್ಜಾಗಿದೆ.

ಲಾಕ್‌ಡೌನ್‌ನಿಂದ ಸುಮಾರು ಏಳು ತಿಂಗಳ ನಂತರ ಸಿನಿಮಾಗಳು ಪ್ರರ್ದಶವಾಗುತ್ತಿದ್ದು, ಆಕ್ಟ್- 1978 ಸಿನಿಮಾವನ್ನು ನೇರವಾಗಿ ಥಿಯೇಟರ್ ನಲ್ಲಿಯೇ ರಿಲೀಸ್ ಮಾಡಲು ಚಿತ್ರತಂಡ ತಯಾರಾಗಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರವನ್ನು ನೀಡಲಾಗಿದ್ದು ಚಿತ್ರದ ನಿರ್ದೇಶಕ ಮಂಸೋರೆ ನವೆಂಬರ್ 2 ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಪೋಸ್ಟರ್‌ಗಳು ಭಾರಿ ಹವಾ ಕ್ರಿಯೇಟ್ ಮಾಡಿವೆ. ಚಿತ್ರದ ಪೋಸ್ಟರ್‌ನಲ್ಲಿ ನಟಿ ಯಜ್ಞಾ ಶೆಟ್ಟಿ ಕುತೂಹಲ ಮೂಡಿಸುವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿಯ ಕೈಯಲ್ಲಿ ಪಿಸ್ತೂಲ್ ಮತ್ತು ವಾಕಿ ಟಾಕಿ ಹಿಡಿದು, ಬಾಂಬ್ ಕಟ್ಟಿಕೊಂಡಿರುವ ಚಿತ್ರ ನಿಜಕ್ಕೂ ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Nathicharami filmmaker's next gets a U certificate | Kannada Movie News - Times of India

ಇನ್ನು ಇತ್ತಿಚೇಗೆ (ಅ.25) ಬಿಡುಗಡೆಯಾದ ಚಿತ್ರದ “ತೇಲಾಡೋ ಮುಗಿಲೇ” ಲಿರಿಕಲ್ ಸಾಂಗ್ ಜನರ ಮೆಚ್ಚುಗೆ ಗಳಿಸಿವೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್‌ ಬಿಡುಗಡೆ ಮಾಡಿದ ಈ ಹಾಡು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದಾರೆ.

’ಮೊದಲು ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿ ನಂತರ ಒಟಿಟಿ  ವೇದಿಕೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ’. ಜೊತೆಗೆ ನವೆಂಬರ್ 2 ರಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಚಿತ್ರ ನಿರ್ದೇಶಕ ಮಂಸೋರೆ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಚಿತ್ರ ಬಿಡುಗಡೆ ಬಗ್ಗೆ ಇದ್ದ ಗೊಂದಲಗಳನ್ನು ನಿವಾರಿಸಿದ್ದಾರೆ.

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ನಿರ್ದೇಶಕ ಮಂಸೋರೆ

ಚಿತ್ರಕ್ಕೆ ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್ ಹೀಗೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...