Homeಕರ್ನಾಟಕಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ 'ಆಕ್ಟ್- 1978’

ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ಲಾಕ್‌ಡೌನ್ ಘೋಷಣೆಯಾಗಿ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಅನ್‌ಲಾಕ್ 5.0ದಲ್ಲಿ ಚಿತ್ರಮಂದಿರಗಳ ರೀಒಪನ್‌ಗೆ ಅವಕಾಶ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡದ ಬಹು ನಿರೀಕ್ಷಿತ ಚಿತ್ರ ಆಕ್ಟ್- 1978 ತೆರೆಗೆ ಬರಲು ಸಜ್ಜಾಗಿದೆ.

ಲಾಕ್‌ಡೌನ್‌ನಿಂದ ಸುಮಾರು ಏಳು ತಿಂಗಳ ನಂತರ ಸಿನಿಮಾಗಳು ಪ್ರರ್ದಶವಾಗುತ್ತಿದ್ದು, ಆಕ್ಟ್- 1978 ಸಿನಿಮಾವನ್ನು ನೇರವಾಗಿ ಥಿಯೇಟರ್ ನಲ್ಲಿಯೇ ರಿಲೀಸ್ ಮಾಡಲು ಚಿತ್ರತಂಡ ತಯಾರಾಗಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರವನ್ನು ನೀಡಲಾಗಿದ್ದು ಚಿತ್ರದ ನಿರ್ದೇಶಕ ಮಂಸೋರೆ ನವೆಂಬರ್ 2 ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಪೋಸ್ಟರ್‌ಗಳು ಭಾರಿ ಹವಾ ಕ್ರಿಯೇಟ್ ಮಾಡಿವೆ. ಚಿತ್ರದ ಪೋಸ್ಟರ್‌ನಲ್ಲಿ ನಟಿ ಯಜ್ಞಾ ಶೆಟ್ಟಿ ಕುತೂಹಲ ಮೂಡಿಸುವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿಯ ಕೈಯಲ್ಲಿ ಪಿಸ್ತೂಲ್ ಮತ್ತು ವಾಕಿ ಟಾಕಿ ಹಿಡಿದು, ಬಾಂಬ್ ಕಟ್ಟಿಕೊಂಡಿರುವ ಚಿತ್ರ ನಿಜಕ್ಕೂ ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Nathicharami filmmaker's next gets a U certificate | Kannada Movie News - Times of India

ಇನ್ನು ಇತ್ತಿಚೇಗೆ (ಅ.25) ಬಿಡುಗಡೆಯಾದ ಚಿತ್ರದ “ತೇಲಾಡೋ ಮುಗಿಲೇ” ಲಿರಿಕಲ್ ಸಾಂಗ್ ಜನರ ಮೆಚ್ಚುಗೆ ಗಳಿಸಿವೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್‌ ಬಿಡುಗಡೆ ಮಾಡಿದ ಈ ಹಾಡು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದಾರೆ.

’ಮೊದಲು ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿ ನಂತರ ಒಟಿಟಿ  ವೇದಿಕೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ’. ಜೊತೆಗೆ ನವೆಂಬರ್ 2 ರಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಚಿತ್ರ ನಿರ್ದೇಶಕ ಮಂಸೋರೆ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಚಿತ್ರ ಬಿಡುಗಡೆ ಬಗ್ಗೆ ಇದ್ದ ಗೊಂದಲಗಳನ್ನು ನಿವಾರಿಸಿದ್ದಾರೆ.

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ನಿರ್ದೇಶಕ ಮಂಸೋರೆ

ಚಿತ್ರಕ್ಕೆ ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್ ಹೀಗೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...