Homeಕರ್ನಾಟಕಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ 'ಆಕ್ಟ್- 1978’

ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ಲಾಕ್‌ಡೌನ್ ಘೋಷಣೆಯಾಗಿ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಅನ್‌ಲಾಕ್ 5.0ದಲ್ಲಿ ಚಿತ್ರಮಂದಿರಗಳ ರೀಒಪನ್‌ಗೆ ಅವಕಾಶ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡದ ಬಹು ನಿರೀಕ್ಷಿತ ಚಿತ್ರ ಆಕ್ಟ್- 1978 ತೆರೆಗೆ ಬರಲು ಸಜ್ಜಾಗಿದೆ.

ಲಾಕ್‌ಡೌನ್‌ನಿಂದ ಸುಮಾರು ಏಳು ತಿಂಗಳ ನಂತರ ಸಿನಿಮಾಗಳು ಪ್ರರ್ದಶವಾಗುತ್ತಿದ್ದು, ಆಕ್ಟ್- 1978 ಸಿನಿಮಾವನ್ನು ನೇರವಾಗಿ ಥಿಯೇಟರ್ ನಲ್ಲಿಯೇ ರಿಲೀಸ್ ಮಾಡಲು ಚಿತ್ರತಂಡ ತಯಾರಾಗಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರವನ್ನು ನೀಡಲಾಗಿದ್ದು ಚಿತ್ರದ ನಿರ್ದೇಶಕ ಮಂಸೋರೆ ನವೆಂಬರ್ 2 ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಪೋಸ್ಟರ್‌ಗಳು ಭಾರಿ ಹವಾ ಕ್ರಿಯೇಟ್ ಮಾಡಿವೆ. ಚಿತ್ರದ ಪೋಸ್ಟರ್‌ನಲ್ಲಿ ನಟಿ ಯಜ್ಞಾ ಶೆಟ್ಟಿ ಕುತೂಹಲ ಮೂಡಿಸುವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿಯ ಕೈಯಲ್ಲಿ ಪಿಸ್ತೂಲ್ ಮತ್ತು ವಾಕಿ ಟಾಕಿ ಹಿಡಿದು, ಬಾಂಬ್ ಕಟ್ಟಿಕೊಂಡಿರುವ ಚಿತ್ರ ನಿಜಕ್ಕೂ ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Nathicharami filmmaker's next gets a U certificate | Kannada Movie News - Times of India

ಇನ್ನು ಇತ್ತಿಚೇಗೆ (ಅ.25) ಬಿಡುಗಡೆಯಾದ ಚಿತ್ರದ “ತೇಲಾಡೋ ಮುಗಿಲೇ” ಲಿರಿಕಲ್ ಸಾಂಗ್ ಜನರ ಮೆಚ್ಚುಗೆ ಗಳಿಸಿವೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್‌ ಬಿಡುಗಡೆ ಮಾಡಿದ ಈ ಹಾಡು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದಾರೆ.

’ಮೊದಲು ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿ ನಂತರ ಒಟಿಟಿ  ವೇದಿಕೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ’. ಜೊತೆಗೆ ನವೆಂಬರ್ 2 ರಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಚಿತ್ರ ನಿರ್ದೇಶಕ ಮಂಸೋರೆ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಚಿತ್ರ ಬಿಡುಗಡೆ ಬಗ್ಗೆ ಇದ್ದ ಗೊಂದಲಗಳನ್ನು ನಿವಾರಿಸಿದ್ದಾರೆ.

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ನಿರ್ದೇಶಕ ಮಂಸೋರೆ

ಚಿತ್ರಕ್ಕೆ ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್ ಹೀಗೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...