Homeಕರ್ನಾಟಕಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ 'ಆಕ್ಟ್- 1978’

ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ಲಾಕ್‌ಡೌನ್ ಘೋಷಣೆಯಾಗಿ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಅನ್‌ಲಾಕ್ 5.0ದಲ್ಲಿ ಚಿತ್ರಮಂದಿರಗಳ ರೀಒಪನ್‌ಗೆ ಅವಕಾಶ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡದ ಬಹು ನಿರೀಕ್ಷಿತ ಚಿತ್ರ ಆಕ್ಟ್- 1978 ತೆರೆಗೆ ಬರಲು ಸಜ್ಜಾಗಿದೆ.

ಲಾಕ್‌ಡೌನ್‌ನಿಂದ ಸುಮಾರು ಏಳು ತಿಂಗಳ ನಂತರ ಸಿನಿಮಾಗಳು ಪ್ರರ್ದಶವಾಗುತ್ತಿದ್ದು, ಆಕ್ಟ್- 1978 ಸಿನಿಮಾವನ್ನು ನೇರವಾಗಿ ಥಿಯೇಟರ್ ನಲ್ಲಿಯೇ ರಿಲೀಸ್ ಮಾಡಲು ಚಿತ್ರತಂಡ ತಯಾರಾಗಿದೆ. ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿ ‘ಯು’ ಪ್ರಮಾಣ ಪತ್ರವನ್ನು ನೀಡಲಾಗಿದ್ದು ಚಿತ್ರದ ನಿರ್ದೇಶಕ ಮಂಸೋರೆ ನವೆಂಬರ್ 2 ಕ್ಕೆ ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಪೋಸ್ಟರ್‌ಗಳು ಭಾರಿ ಹವಾ ಕ್ರಿಯೇಟ್ ಮಾಡಿವೆ. ಚಿತ್ರದ ಪೋಸ್ಟರ್‌ನಲ್ಲಿ ನಟಿ ಯಜ್ಞಾ ಶೆಟ್ಟಿ ಕುತೂಹಲ ಮೂಡಿಸುವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿಯ ಕೈಯಲ್ಲಿ ಪಿಸ್ತೂಲ್ ಮತ್ತು ವಾಕಿ ಟಾಕಿ ಹಿಡಿದು, ಬಾಂಬ್ ಕಟ್ಟಿಕೊಂಡಿರುವ ಚಿತ್ರ ನಿಜಕ್ಕೂ ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Nathicharami filmmaker's next gets a U certificate | Kannada Movie News - Times of India

ಇನ್ನು ಇತ್ತಿಚೇಗೆ (ಅ.25) ಬಿಡುಗಡೆಯಾದ ಚಿತ್ರದ “ತೇಲಾಡೋ ಮುಗಿಲೇ” ಲಿರಿಕಲ್ ಸಾಂಗ್ ಜನರ ಮೆಚ್ಚುಗೆ ಗಳಿಸಿವೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್‌ ಬಿಡುಗಡೆ ಮಾಡಿದ ಈ ಹಾಡು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಇದು ಸಿನಿಮಾವಲ್ಲ, ಹೆಣ್ತನದ ಮುಖಾಮುಖಿ ನಾತಿಚರಾಮಿ

ಚಿತ್ರದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಮಂಸೋರೆ, ’ಆಕ್ಟ್-1978 ಸಿನಿಮಾ ಸಾಮಾಜಿಕ ಜವಾಬ್ದಾರಿ ಹೊಂದಿರುವ ಮತ್ತು ಮಹಿಳಾ ಕೇಂದ್ರಿತ ಚಲನಚಿತ್ರ. ಸಾಮಾಜಿಕ ಹೋರಾಟಗಳಲ್ಲಿ ಮಹಿಳೆಯ ಪಾತ್ರವನ್ನು ಬಿಂಬಿಸುವ ಚಿತ್ರ ಇದು’ ಎಂದಿದ್ದಾರೆ.

’ಮೊದಲು ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿ ನಂತರ ಒಟಿಟಿ  ವೇದಿಕೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುತ್ತದೆ’. ಜೊತೆಗೆ ನವೆಂಬರ್ 2 ರಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಚಿತ್ರ ನಿರ್ದೇಶಕ ಮಂಸೋರೆ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಚಿತ್ರ ಬಿಡುಗಡೆ ಬಗ್ಗೆ ಇದ್ದ ಗೊಂದಲಗಳನ್ನು ನಿವಾರಿಸಿದ್ದಾರೆ.

ರಾಷ್ಟ ಪ್ರಶಸ್ತಿ ಪುರಸ್ಕೃತ ಹರಿವು ಮತ್ತು ನಾತಿಚರಾಮಿ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಕ್ಕೆ ತಾವೊಬ್ಬ ಭರವಸೆಯ ನಿರ್ದೇಶಕ ಎಂದು ಸಾಬೀತು ಮಾಡಿರುವ ನಿರ್ದೇಶಕ ಮಂಸೋರೆ ಅವರ ಮತ್ತೊಂದು ಬಹು ನಿರೀಕ್ಷಿತ ಮಹಿಳಾ ಕೇಂದ್ರಿತ ಚಿತ್ರ ಆಕ್ಟ್- 1978.

ನಿರ್ದೇಶಕ ಮಂಸೋರೆ

ಚಿತ್ರಕ್ಕೆ ಬೆಲ್ ಬಾಟಂ ಖ್ಯಾತಿಯ ಟಿ.ಕೆ.ದಯಾನಂದ್ ಚಿತ್ರಕಥೆ, ಸಂಭಾಷಣೆ ಬರೆದಿದ್ದು, ದೇವರಾಜ್ .ಆರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯಜ್ಞಾ ಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಶ್ರುತಿ, ದತ್ತಣ್ಣ, ಸಂಚಾರಿ ವಿಜಯ್ ಹೀಗೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...