Homeಮುಖಪುಟಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತವೆ.

- Advertisement -
- Advertisement -

ಮೊದಲಿಗೆ ಕೋವಿಡ್ ಅವಾಂತರಗಳಿಂದ ಬೇಸತ್ತು ಒಂದಷ್ಟು ಕಾಲದ ನಂತರ ಸಿನೆಮಾ ಥಿಯೇಟರ್ ಗಳಿಗೆ ಹೋಗುವಂತಾದ ಖುಷಿಯನ್ನ ಎಲ್ಲರೂ ಹಂಚಿಕೊಳ್ಳೋಣ. ಆಕ್ಟ್-1978 ಸಿನೆಮಾ, ಬಹಳ ಹಿಂದೆ ಕನ್ನಡದಲ್ಲೇ ಬಂದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ನಿಷ್ಕರ್ಷ’, ಆ ಸಿನೆಮಾಗೆ ಸ್ಫೂರ್ತಿಯಾಗಿದ್ದ ಅಮೆರಿಕನ್ ಚಲನಚಿತ್ರ ‘ಡೈ ಹಾರ್ಡ್’ ಇಂತಹ ಹೋಸ್ಟೇಜ್ ಡ್ರಾಮ ಸಿನೆಮಾಗಳ ಪ್ರಕಾರಕ್ಕೆ ಸೇರಿದರೂ, ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುವ ‘ಕಾರಣ’ದಿಂದಾಗಿ ವಿಭಿನ್ನ ಕಥಾವಸ್ತು ಹೊಂದಿದೆ. ಸಿನೆಮಾದ ಮೂಲ ಉದ್ದೇಶವೇ ಚಿಂತನೆಗಳನ್ನ ಹೆಚ್ಚಿಸುವುದಾದ್ದರಿಂದ, ಆ ನಿಟ್ಟಿನಲ್ಲಿ ಆಕ್ಟ್-1978 ಗೆದ್ದಿದೆಯಾ? ಮುಂದೆ ನೋಡೋಣ…

ಮೊದಲಿಗೆ ಹಿಂಸೆಯನ್ನ ಹೋರಾಟದ ಪ್ರಕ್ರಿಯೆಗಳಿಗೆ ಬಳಸೋದು, ಹಾಗೆ ಬಳಸುವಂತೆ ಪ್ರಚೋದಿಸುವುದು ಸರಿಯೇ ಎಂಬ ಪ್ರಶ್ನೆ ಎದುರಾಗುವುದು ಸಹಜ. ತುಂಬು ಗರ್ಭಿಣಿಯ ಪಾತ್ರ ಸೃಷ್ಟಿಸಿ, ಆಕೆಯ ಮೂಲಕ ಕಥೆ ಹೇಳಿ, ಪ್ರೇಕ್ಷಕನನ್ನ ಭಾವನಾತ್ಮಕವಾಗಿ ಹಿಡಿದಿಡುವ ಪ್ರಯತ್ನ ಸಮಂಜಸವಾದುದಲ್ಲ.

ಸರ್ಕಾರಿ ಕಚೇರಿಯೊಂದರಲ್ಲಿ ನಡೆಯುವ ಕಥೆ, ಆ ಕಚೇರಿಯ ನೌಕರರ ಭ್ರಷ್ಟತೆಯನ್ನು ಅನಾವರಣಗೊಳಿಸುತ್ತಾ, ಅವರ ಮೇಲ್ದರ್ಜೆಯ ಅಧಿಕಾರಿಗಳನ್ನೂ ಒಳಗೊಂಡಂತೆ ಹೇಗೆ ಇವರೆಲ್ಲಾ ಭ್ರಷ್ಟ ಸಮಾಜದ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂಬುದನ್ನ ತೋರಿಸುತ್ತಾ ಸಾಗುತ್ತದೆ.

ಕಥಾನಾಯಕಿ ಅಮಾಯಕಳೇನಲ್ಲ. ಎನ್ ಸಿ ಸಿ ಯಲ್ಲಿ ತರಬೇತಿ ಪಡೆದಿರುವಾಕೆ. ಆದರೆ ಆಕೆ ಸನ್ನಿವೇಶಗಳನ್ನ ಎದುರಿಸುವ ರೀತಿಯಲ್ಲಿ ಕಟ್ಟಿಕೊಟ್ಟಿರುವ ಚಿತ್ರಣ ತಡವರಿಸಿದಂತಿದೆ. ಉದಾಹರಣೆಗೆ ಆಕೆ ಒಂದೇ ಟ್ರಿಗರ್ ಗೆ ಶೂಟ್ ಮಾಡುವಾಗ ಇರುವ ಪಕ್ವತೆಗೂ, ತನ್ನ ಬೇಡಿಕೆ ಇಡುವಾಗ ತೋರಿಸುವ ಅಮಾಯಕತೆಗೂ, ಬಹಳವೇ ಅಂತರವಿದೆ.

ಮಹಾತ್ಮ ಗಾಂಧಿಯ ಹೋಲಿಕೆಯನ್ನು ಬಳಕೆ ಮಾಡಿರುವುದು, ಸಣ್ಣ ಸಣ್ಣ ಅರ್ಥಗಳನ್ನ ಹೊಸೆಯುವಿಕೆಗೆ ಸಹಾಯವಾಗಿದೆ, ಪ್ರತೀ ಸರ್ಕಾರಿ ಕಚೇರಿಯ ಎದುರು ಹೀಗೊಂದು ಪ್ರಜ್ಞೆ ಸದಾ ಜಾಗೃತವಾಗಿದ್ದರೆ ಎಷ್ಟು ಚೆಂದವಿತ್ತು ಅನ್ನುವ ಹಾಗೆ.

ಇನ್ನು, ಕ್ರಿಶ್ಚಿಯನ್ ಮುಸ್ಲಿಂ ಧರ್ಮದಾರಿ ಪಾತ್ರಗಳನ್ನ ಕಾಮಿಡಿ ಪೀಸುಗಳನ್ನಾಗಿಸುವ ಟ್ರೆಂಡ್ ಇತ್ತೀಚಿಗೆ ಬೆಳೆಯುತ್ತಿರುವುದು ಅಪಾಯಕಾರಿ ಸಂಗತಿ. ಈ ಸಿನಿಮಾದಲ್ಲಿ ಬೆಂಜಮಿನ್ ಪಾತ್ರಧಾರಿಯನ್ನು ಹಾಸ್ಯ ಮಾಡುವುದು ಕನಿಷ್ಠ ಎಂಬಂತೆ ಬಳಕೆಯಾದರೂ ಬಹುಸಂಖ್ಯಾತ ಧಾರ್ಮಿಕವಾದ ಯಜಮಾನ್ಯ ಸಾಧಿಸುತ್ತಿರುವ ಸಮಯದಲ್ಲಿ ಅದು ಕಾಣುವ ರೀತಿ ಸಮಸ್ಯಾತ್ಮಕವಾದದ್ದು.

ಯಜ್ಞಾಶೆಟ್ಟಿಯವರು ಒಬ್ಬ ಗರ್ಭಿಣಿ ಸ್ತ್ರೀ ಹೇಗೆ ನೆಡೆಯುತ್ತಾಳೆ, ಹೇಗೆ ನೋವನ್ನು ಅನುಭವಿಸುತ್ತಾಳೆ ಎನ್ನುವ ರೀತಿಗಳನ್ನು ಬಹಳ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ, ಡೈಲಾಗ್ ಹೇಳುವಾಗ ಒಂದಷ್ಟು ಹೆಚ್ಚಿನ ಶ್ರಮ ಹಾಕಿದ್ದರೆ ನಟನೆ ಇನ್ನೂ ಆಪ್ತವಾಗಿರುತ್ತಿತ್ತು. ಸಂಚಾರಿ ವಿಜಯ್, ಅವಿನಾಶ್, ಅಚ್ಚುತ್ , ಶ್ರುತಿ, ಇವರೆಲ್ಲರೂ ಕಡಿಮೆ ಸಮಯದಲ್ಲಿಯೇ ಬಂದರೂ , ಯಜ್ಞಾಶೆಟ್ಟಿಯವರನ್ನೂ ಮರೆಸುವಂತೆ ಕಾಣುತ್ತಾರೆ.
ಇದೆಲ್ಲದರ ಹೊರತಾಗಿ ಸಿನೆಮಾ ಕಡೆಗಾಣಿಸುವಂಥಹ ಪ್ರಯತ್ನವಾ?  ಖಂಡಿತಾ ಇಲ್ಲ….

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತದೆ. ಆದರೆ ವಿಷಯವನ್ನು ಕಟ್ಟುವಾಗ ಇನ್ನಷ್ಟು ಗಂಭೀರತೆ ಅವಶ್ಯಕವಾಗಿತ್ತು ಅನ್ನುವುದೂ ನಿಜ.

ಈ ವಿಷಯಾಧಾರಿತ ಸಿನೆಮಾಗಳು, ಸಾಮಾನ್ಯ ಕಮರ್ಷಿಯಲ್ ಸಿನೆಮಾಗಳಿಗಿಂತ ತುಸು ಹೆಚ್ಚಾಗಿಯೇ ಸಿನೆಮಾ ಗ್ರಾಮರ್ ಅನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗೆ ಪ್ರಯೋಗಿಸಿದ ಮತ್ತಷ್ಟು ಫೈನ್ ಟ್ಯೂನ್ ಚಿತ್ರಗಳು ಹೆಚ್ಚಾಗಿ ಬಂದರೆ, ನಾವುಗಳು (ಕನ್ನಡ ಸಿನೆಮಾದವರು) ಇನ್ನೂ ಹೆಚ್ಚಿಗೆ ಬೆಳೆಯಬಹುದು, ಸಿನೆಮಾ ಕ್ಷೇತ್ರವನ್ನ ಒಂದು ಚರ್ಚಾ ಮಾಧ್ಯಮವನ್ನಾಗಿ ಬಳಸಿಕೊಳ್ಳಬಹುದು.


ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...