Homeಮುಖಪುಟಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತವೆ.

- Advertisement -
- Advertisement -

ಮೊದಲಿಗೆ ಕೋವಿಡ್ ಅವಾಂತರಗಳಿಂದ ಬೇಸತ್ತು ಒಂದಷ್ಟು ಕಾಲದ ನಂತರ ಸಿನೆಮಾ ಥಿಯೇಟರ್ ಗಳಿಗೆ ಹೋಗುವಂತಾದ ಖುಷಿಯನ್ನ ಎಲ್ಲರೂ ಹಂಚಿಕೊಳ್ಳೋಣ. ಆಕ್ಟ್-1978 ಸಿನೆಮಾ, ಬಹಳ ಹಿಂದೆ ಕನ್ನಡದಲ್ಲೇ ಬಂದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ನಿಷ್ಕರ್ಷ’, ಆ ಸಿನೆಮಾಗೆ ಸ್ಫೂರ್ತಿಯಾಗಿದ್ದ ಅಮೆರಿಕನ್ ಚಲನಚಿತ್ರ ‘ಡೈ ಹಾರ್ಡ್’ ಇಂತಹ ಹೋಸ್ಟೇಜ್ ಡ್ರಾಮ ಸಿನೆಮಾಗಳ ಪ್ರಕಾರಕ್ಕೆ ಸೇರಿದರೂ, ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುವ ‘ಕಾರಣ’ದಿಂದಾಗಿ ವಿಭಿನ್ನ ಕಥಾವಸ್ತು ಹೊಂದಿದೆ. ಸಿನೆಮಾದ ಮೂಲ ಉದ್ದೇಶವೇ ಚಿಂತನೆಗಳನ್ನ ಹೆಚ್ಚಿಸುವುದಾದ್ದರಿಂದ, ಆ ನಿಟ್ಟಿನಲ್ಲಿ ಆಕ್ಟ್-1978 ಗೆದ್ದಿದೆಯಾ? ಮುಂದೆ ನೋಡೋಣ…

ಮೊದಲಿಗೆ ಹಿಂಸೆಯನ್ನ ಹೋರಾಟದ ಪ್ರಕ್ರಿಯೆಗಳಿಗೆ ಬಳಸೋದು, ಹಾಗೆ ಬಳಸುವಂತೆ ಪ್ರಚೋದಿಸುವುದು ಸರಿಯೇ ಎಂಬ ಪ್ರಶ್ನೆ ಎದುರಾಗುವುದು ಸಹಜ. ತುಂಬು ಗರ್ಭಿಣಿಯ ಪಾತ್ರ ಸೃಷ್ಟಿಸಿ, ಆಕೆಯ ಮೂಲಕ ಕಥೆ ಹೇಳಿ, ಪ್ರೇಕ್ಷಕನನ್ನ ಭಾವನಾತ್ಮಕವಾಗಿ ಹಿಡಿದಿಡುವ ಪ್ರಯತ್ನ ಸಮಂಜಸವಾದುದಲ್ಲ.

ಸರ್ಕಾರಿ ಕಚೇರಿಯೊಂದರಲ್ಲಿ ನಡೆಯುವ ಕಥೆ, ಆ ಕಚೇರಿಯ ನೌಕರರ ಭ್ರಷ್ಟತೆಯನ್ನು ಅನಾವರಣಗೊಳಿಸುತ್ತಾ, ಅವರ ಮೇಲ್ದರ್ಜೆಯ ಅಧಿಕಾರಿಗಳನ್ನೂ ಒಳಗೊಂಡಂತೆ ಹೇಗೆ ಇವರೆಲ್ಲಾ ಭ್ರಷ್ಟ ಸಮಾಜದ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂಬುದನ್ನ ತೋರಿಸುತ್ತಾ ಸಾಗುತ್ತದೆ.

ಕಥಾನಾಯಕಿ ಅಮಾಯಕಳೇನಲ್ಲ. ಎನ್ ಸಿ ಸಿ ಯಲ್ಲಿ ತರಬೇತಿ ಪಡೆದಿರುವಾಕೆ. ಆದರೆ ಆಕೆ ಸನ್ನಿವೇಶಗಳನ್ನ ಎದುರಿಸುವ ರೀತಿಯಲ್ಲಿ ಕಟ್ಟಿಕೊಟ್ಟಿರುವ ಚಿತ್ರಣ ತಡವರಿಸಿದಂತಿದೆ. ಉದಾಹರಣೆಗೆ ಆಕೆ ಒಂದೇ ಟ್ರಿಗರ್ ಗೆ ಶೂಟ್ ಮಾಡುವಾಗ ಇರುವ ಪಕ್ವತೆಗೂ, ತನ್ನ ಬೇಡಿಕೆ ಇಡುವಾಗ ತೋರಿಸುವ ಅಮಾಯಕತೆಗೂ, ಬಹಳವೇ ಅಂತರವಿದೆ.

ಮಹಾತ್ಮ ಗಾಂಧಿಯ ಹೋಲಿಕೆಯನ್ನು ಬಳಕೆ ಮಾಡಿರುವುದು, ಸಣ್ಣ ಸಣ್ಣ ಅರ್ಥಗಳನ್ನ ಹೊಸೆಯುವಿಕೆಗೆ ಸಹಾಯವಾಗಿದೆ, ಪ್ರತೀ ಸರ್ಕಾರಿ ಕಚೇರಿಯ ಎದುರು ಹೀಗೊಂದು ಪ್ರಜ್ಞೆ ಸದಾ ಜಾಗೃತವಾಗಿದ್ದರೆ ಎಷ್ಟು ಚೆಂದವಿತ್ತು ಅನ್ನುವ ಹಾಗೆ.

ಇನ್ನು, ಕ್ರಿಶ್ಚಿಯನ್ ಮುಸ್ಲಿಂ ಧರ್ಮದಾರಿ ಪಾತ್ರಗಳನ್ನ ಕಾಮಿಡಿ ಪೀಸುಗಳನ್ನಾಗಿಸುವ ಟ್ರೆಂಡ್ ಇತ್ತೀಚಿಗೆ ಬೆಳೆಯುತ್ತಿರುವುದು ಅಪಾಯಕಾರಿ ಸಂಗತಿ. ಈ ಸಿನಿಮಾದಲ್ಲಿ ಬೆಂಜಮಿನ್ ಪಾತ್ರಧಾರಿಯನ್ನು ಹಾಸ್ಯ ಮಾಡುವುದು ಕನಿಷ್ಠ ಎಂಬಂತೆ ಬಳಕೆಯಾದರೂ ಬಹುಸಂಖ್ಯಾತ ಧಾರ್ಮಿಕವಾದ ಯಜಮಾನ್ಯ ಸಾಧಿಸುತ್ತಿರುವ ಸಮಯದಲ್ಲಿ ಅದು ಕಾಣುವ ರೀತಿ ಸಮಸ್ಯಾತ್ಮಕವಾದದ್ದು.

ಯಜ್ಞಾಶೆಟ್ಟಿಯವರು ಒಬ್ಬ ಗರ್ಭಿಣಿ ಸ್ತ್ರೀ ಹೇಗೆ ನೆಡೆಯುತ್ತಾಳೆ, ಹೇಗೆ ನೋವನ್ನು ಅನುಭವಿಸುತ್ತಾಳೆ ಎನ್ನುವ ರೀತಿಗಳನ್ನು ಬಹಳ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ, ಡೈಲಾಗ್ ಹೇಳುವಾಗ ಒಂದಷ್ಟು ಹೆಚ್ಚಿನ ಶ್ರಮ ಹಾಕಿದ್ದರೆ ನಟನೆ ಇನ್ನೂ ಆಪ್ತವಾಗಿರುತ್ತಿತ್ತು. ಸಂಚಾರಿ ವಿಜಯ್, ಅವಿನಾಶ್, ಅಚ್ಚುತ್ , ಶ್ರುತಿ, ಇವರೆಲ್ಲರೂ ಕಡಿಮೆ ಸಮಯದಲ್ಲಿಯೇ ಬಂದರೂ , ಯಜ್ಞಾಶೆಟ್ಟಿಯವರನ್ನೂ ಮರೆಸುವಂತೆ ಕಾಣುತ್ತಾರೆ.
ಇದೆಲ್ಲದರ ಹೊರತಾಗಿ ಸಿನೆಮಾ ಕಡೆಗಾಣಿಸುವಂಥಹ ಪ್ರಯತ್ನವಾ?  ಖಂಡಿತಾ ಇಲ್ಲ….

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತದೆ. ಆದರೆ ವಿಷಯವನ್ನು ಕಟ್ಟುವಾಗ ಇನ್ನಷ್ಟು ಗಂಭೀರತೆ ಅವಶ್ಯಕವಾಗಿತ್ತು ಅನ್ನುವುದೂ ನಿಜ.

ಈ ವಿಷಯಾಧಾರಿತ ಸಿನೆಮಾಗಳು, ಸಾಮಾನ್ಯ ಕಮರ್ಷಿಯಲ್ ಸಿನೆಮಾಗಳಿಗಿಂತ ತುಸು ಹೆಚ್ಚಾಗಿಯೇ ಸಿನೆಮಾ ಗ್ರಾಮರ್ ಅನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗೆ ಪ್ರಯೋಗಿಸಿದ ಮತ್ತಷ್ಟು ಫೈನ್ ಟ್ಯೂನ್ ಚಿತ್ರಗಳು ಹೆಚ್ಚಾಗಿ ಬಂದರೆ, ನಾವುಗಳು (ಕನ್ನಡ ಸಿನೆಮಾದವರು) ಇನ್ನೂ ಹೆಚ್ಚಿಗೆ ಬೆಳೆಯಬಹುದು, ಸಿನೆಮಾ ಕ್ಷೇತ್ರವನ್ನ ಒಂದು ಚರ್ಚಾ ಮಾಧ್ಯಮವನ್ನಾಗಿ ಬಳಸಿಕೊಳ್ಳಬಹುದು.


ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...