Homeಮುಖಪುಟಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಕನ್ನಡದ ಅಪರೂಪದ ಹೋಸ್ಟೇಜ್ ಡ್ರಾಮ ಸಿನೆಮಾ ಆಕ್ಟ್-1978 ಗೆದ್ದಿದೆಯೇ?

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತವೆ.

- Advertisement -
- Advertisement -

ಮೊದಲಿಗೆ ಕೋವಿಡ್ ಅವಾಂತರಗಳಿಂದ ಬೇಸತ್ತು ಒಂದಷ್ಟು ಕಾಲದ ನಂತರ ಸಿನೆಮಾ ಥಿಯೇಟರ್ ಗಳಿಗೆ ಹೋಗುವಂತಾದ ಖುಷಿಯನ್ನ ಎಲ್ಲರೂ ಹಂಚಿಕೊಳ್ಳೋಣ. ಆಕ್ಟ್-1978 ಸಿನೆಮಾ, ಬಹಳ ಹಿಂದೆ ಕನ್ನಡದಲ್ಲೇ ಬಂದ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ನಿಷ್ಕರ್ಷ’, ಆ ಸಿನೆಮಾಗೆ ಸ್ಫೂರ್ತಿಯಾಗಿದ್ದ ಅಮೆರಿಕನ್ ಚಲನಚಿತ್ರ ‘ಡೈ ಹಾರ್ಡ್’ ಇಂತಹ ಹೋಸ್ಟೇಜ್ ಡ್ರಾಮ ಸಿನೆಮಾಗಳ ಪ್ರಕಾರಕ್ಕೆ ಸೇರಿದರೂ, ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುವ ‘ಕಾರಣ’ದಿಂದಾಗಿ ವಿಭಿನ್ನ ಕಥಾವಸ್ತು ಹೊಂದಿದೆ. ಸಿನೆಮಾದ ಮೂಲ ಉದ್ದೇಶವೇ ಚಿಂತನೆಗಳನ್ನ ಹೆಚ್ಚಿಸುವುದಾದ್ದರಿಂದ, ಆ ನಿಟ್ಟಿನಲ್ಲಿ ಆಕ್ಟ್-1978 ಗೆದ್ದಿದೆಯಾ? ಮುಂದೆ ನೋಡೋಣ…

ಮೊದಲಿಗೆ ಹಿಂಸೆಯನ್ನ ಹೋರಾಟದ ಪ್ರಕ್ರಿಯೆಗಳಿಗೆ ಬಳಸೋದು, ಹಾಗೆ ಬಳಸುವಂತೆ ಪ್ರಚೋದಿಸುವುದು ಸರಿಯೇ ಎಂಬ ಪ್ರಶ್ನೆ ಎದುರಾಗುವುದು ಸಹಜ. ತುಂಬು ಗರ್ಭಿಣಿಯ ಪಾತ್ರ ಸೃಷ್ಟಿಸಿ, ಆಕೆಯ ಮೂಲಕ ಕಥೆ ಹೇಳಿ, ಪ್ರೇಕ್ಷಕನನ್ನ ಭಾವನಾತ್ಮಕವಾಗಿ ಹಿಡಿದಿಡುವ ಪ್ರಯತ್ನ ಸಮಂಜಸವಾದುದಲ್ಲ.

ಸರ್ಕಾರಿ ಕಚೇರಿಯೊಂದರಲ್ಲಿ ನಡೆಯುವ ಕಥೆ, ಆ ಕಚೇರಿಯ ನೌಕರರ ಭ್ರಷ್ಟತೆಯನ್ನು ಅನಾವರಣಗೊಳಿಸುತ್ತಾ, ಅವರ ಮೇಲ್ದರ್ಜೆಯ ಅಧಿಕಾರಿಗಳನ್ನೂ ಒಳಗೊಂಡಂತೆ ಹೇಗೆ ಇವರೆಲ್ಲಾ ಭ್ರಷ್ಟ ಸಮಾಜದ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂಬುದನ್ನ ತೋರಿಸುತ್ತಾ ಸಾಗುತ್ತದೆ.

ಕಥಾನಾಯಕಿ ಅಮಾಯಕಳೇನಲ್ಲ. ಎನ್ ಸಿ ಸಿ ಯಲ್ಲಿ ತರಬೇತಿ ಪಡೆದಿರುವಾಕೆ. ಆದರೆ ಆಕೆ ಸನ್ನಿವೇಶಗಳನ್ನ ಎದುರಿಸುವ ರೀತಿಯಲ್ಲಿ ಕಟ್ಟಿಕೊಟ್ಟಿರುವ ಚಿತ್ರಣ ತಡವರಿಸಿದಂತಿದೆ. ಉದಾಹರಣೆಗೆ ಆಕೆ ಒಂದೇ ಟ್ರಿಗರ್ ಗೆ ಶೂಟ್ ಮಾಡುವಾಗ ಇರುವ ಪಕ್ವತೆಗೂ, ತನ್ನ ಬೇಡಿಕೆ ಇಡುವಾಗ ತೋರಿಸುವ ಅಮಾಯಕತೆಗೂ, ಬಹಳವೇ ಅಂತರವಿದೆ.

ಮಹಾತ್ಮ ಗಾಂಧಿಯ ಹೋಲಿಕೆಯನ್ನು ಬಳಕೆ ಮಾಡಿರುವುದು, ಸಣ್ಣ ಸಣ್ಣ ಅರ್ಥಗಳನ್ನ ಹೊಸೆಯುವಿಕೆಗೆ ಸಹಾಯವಾಗಿದೆ, ಪ್ರತೀ ಸರ್ಕಾರಿ ಕಚೇರಿಯ ಎದುರು ಹೀಗೊಂದು ಪ್ರಜ್ಞೆ ಸದಾ ಜಾಗೃತವಾಗಿದ್ದರೆ ಎಷ್ಟು ಚೆಂದವಿತ್ತು ಅನ್ನುವ ಹಾಗೆ.

ಇನ್ನು, ಕ್ರಿಶ್ಚಿಯನ್ ಮುಸ್ಲಿಂ ಧರ್ಮದಾರಿ ಪಾತ್ರಗಳನ್ನ ಕಾಮಿಡಿ ಪೀಸುಗಳನ್ನಾಗಿಸುವ ಟ್ರೆಂಡ್ ಇತ್ತೀಚಿಗೆ ಬೆಳೆಯುತ್ತಿರುವುದು ಅಪಾಯಕಾರಿ ಸಂಗತಿ. ಈ ಸಿನಿಮಾದಲ್ಲಿ ಬೆಂಜಮಿನ್ ಪಾತ್ರಧಾರಿಯನ್ನು ಹಾಸ್ಯ ಮಾಡುವುದು ಕನಿಷ್ಠ ಎಂಬಂತೆ ಬಳಕೆಯಾದರೂ ಬಹುಸಂಖ್ಯಾತ ಧಾರ್ಮಿಕವಾದ ಯಜಮಾನ್ಯ ಸಾಧಿಸುತ್ತಿರುವ ಸಮಯದಲ್ಲಿ ಅದು ಕಾಣುವ ರೀತಿ ಸಮಸ್ಯಾತ್ಮಕವಾದದ್ದು.

ಯಜ್ಞಾಶೆಟ್ಟಿಯವರು ಒಬ್ಬ ಗರ್ಭಿಣಿ ಸ್ತ್ರೀ ಹೇಗೆ ನೆಡೆಯುತ್ತಾಳೆ, ಹೇಗೆ ನೋವನ್ನು ಅನುಭವಿಸುತ್ತಾಳೆ ಎನ್ನುವ ರೀತಿಗಳನ್ನು ಬಹಳ ಚೆನ್ನಾಗಿ ಅಭ್ಯಾಸ ಮಾಡಿದ್ದಾರೆ, ಡೈಲಾಗ್ ಹೇಳುವಾಗ ಒಂದಷ್ಟು ಹೆಚ್ಚಿನ ಶ್ರಮ ಹಾಕಿದ್ದರೆ ನಟನೆ ಇನ್ನೂ ಆಪ್ತವಾಗಿರುತ್ತಿತ್ತು. ಸಂಚಾರಿ ವಿಜಯ್, ಅವಿನಾಶ್, ಅಚ್ಚುತ್ , ಶ್ರುತಿ, ಇವರೆಲ್ಲರೂ ಕಡಿಮೆ ಸಮಯದಲ್ಲಿಯೇ ಬಂದರೂ , ಯಜ್ಞಾಶೆಟ್ಟಿಯವರನ್ನೂ ಮರೆಸುವಂತೆ ಕಾಣುತ್ತಾರೆ.
ಇದೆಲ್ಲದರ ಹೊರತಾಗಿ ಸಿನೆಮಾ ಕಡೆಗಾಣಿಸುವಂಥಹ ಪ್ರಯತ್ನವಾ?  ಖಂಡಿತಾ ಇಲ್ಲ….

ಹೊಡಿ ಬಡಿ, ಅಬ್ಬರಿಸುವ ಡೈಲಾಗ್ ಗಳನ್ನೇ ಪ್ರತಿನಿಧಿಸುವ ಸಿನಿಮಾಗಳು ರಾಶಿರಾಶಿಯಾಗಿ ಮೂಡುವ ಸಮಯದಲ್ಲಿ, ವಿಷಯಾಧಾರಿತವಾದ ಇಂಥಹ ಪ್ರಯತ್ನಗಳು ಒಂದಷ್ಟು ಕುತೂಹಲ ಹುಟ್ಟಿಸುತ್ತದೆ. ಆದರೆ ವಿಷಯವನ್ನು ಕಟ್ಟುವಾಗ ಇನ್ನಷ್ಟು ಗಂಭೀರತೆ ಅವಶ್ಯಕವಾಗಿತ್ತು ಅನ್ನುವುದೂ ನಿಜ.

ಈ ವಿಷಯಾಧಾರಿತ ಸಿನೆಮಾಗಳು, ಸಾಮಾನ್ಯ ಕಮರ್ಷಿಯಲ್ ಸಿನೆಮಾಗಳಿಗಿಂತ ತುಸು ಹೆಚ್ಚಾಗಿಯೇ ಸಿನೆಮಾ ಗ್ರಾಮರ್ ಅನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗೆ ಪ್ರಯೋಗಿಸಿದ ಮತ್ತಷ್ಟು ಫೈನ್ ಟ್ಯೂನ್ ಚಿತ್ರಗಳು ಹೆಚ್ಚಾಗಿ ಬಂದರೆ, ನಾವುಗಳು (ಕನ್ನಡ ಸಿನೆಮಾದವರು) ಇನ್ನೂ ಹೆಚ್ಚಿಗೆ ಬೆಳೆಯಬಹುದು, ಸಿನೆಮಾ ಕ್ಷೇತ್ರವನ್ನ ಒಂದು ಚರ್ಚಾ ಮಾಧ್ಯಮವನ್ನಾಗಿ ಬಳಸಿಕೊಳ್ಳಬಹುದು.


ಇದನ್ನೂ ಓದಿ: ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...