Homeಮುಖಪುಟಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ಆಕ್ಟ್-1978: ಘನತೆ ಮತ್ತು ನ್ಯಾಯಕ್ಕಾಗಿ ಸಿಡಿದೇಳಿ ಎನ್ನುವ ಸಿನಿಮಾ

ಭ್ರಷ್ಟ ವ್ಯವಸ್ಥೆಯಿಂದ ನೊಂದ ಹೆಣ್ಣುಮಗಳೊಬ್ಬಳು ತನಗೆ ತಿಳಿದ ದಾರಿಯಲ್ಲಿ ಸಿಡಿದೇಳುವ ಸಣ್ಣ ಕಥಾ ಎಳೆಯಿಟ್ಟುಕೊಂಡು ಒಂದು ಜನಪ್ರಿಯ ಸಿನಿಮಾ ಮಾಡಬಹುದು ಎನ್ನುವುದನ್ನು ಆಕ್ಟ್-1978 ಚಿತ್ರತಂಡ ತೋರಿಸಿಕೊಟ್ಟಿದೆ.

- Advertisement -
- Advertisement -

‘ಬಡವನ ಸಿಟ್ಟು ದವಡೆಗೆ ಮೂಲ’, ‘ಬಡವ ನೀನ್ ಮಡಗಿದಂಗೆ ಇರು’ ಎನ್ನುವ ಗಾದೆಗಳು ಜನಸಾಮಾನ್ಯರ ನಡುವೆ ಜನಪ್ರಿಯವಾಗಿವೆ. ವ್ಯವಸ್ಥೆಯ ಬಗ್ಗೆ ಜನರ ಆಕ್ರೋಶ ವ್ಯಕ್ತಪಡಿಸಲು, ಹೋರಾಟ ನಡೆಸಲು ಬಿಡದ ವಿದ್ಯಮಾನವನ್ನು ಈ ಗಾದೆಗಳು ಪ್ರತಿನಿಧಿಸಿದರೂ, ‘ಬಡವರ ಸಿಟ್ಟು ರಟ್ಟೆಗೆ ಬಂದ್ರೆ ಸರ್ಕಾರಗಳು ಪೀಸ್, ಪೀಸ್’ ಎಂಬ ಹೋರಾಟದ ಸ್ಲೋಗನ್ ಕೂಡ ಒಂದು ಮಟ್ಟಕ್ಕೆ ಜನಪ್ರಿಯವೇ. ಸಿನಿಮಾವೊಂದು ಈ ಸ್ಲೋಗನ್‌ ಅನ್ನು ಪ್ರತಿನಿಧಿಸಬಹುದೇ? ಜನಸಾಮಾನ್ಯರು, ಬಡವರು ತಮ್ಮ ಅನ್ಯಾಯಗಳ ವಿರುದ್ಧ ಸಿಡಿದೆದ್ದರೆ ಏನಾಗಬಹುದು? ಅಂತಹ ಶೋಧನೆಯ ಚಿತ್ರ ಆಕ್ಟ್-1978.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಹಲವು ತಿಂಗಳುಗಳ ಲಾಕ್ಡೌನ್ ನಂತರ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿರುವ ಹೊಸ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಯೊಂದಿಗೆ ಇಂದು ಬಿಡುಗಡೆಯಾಗಿರುವ ಆಕ್ಟ್-1978 ಚಿತ್ರ ಹಲವು ಕಾರಣಗಳಿಗಾಗಿ ಗಮನ ಸೆಳೆಯುತ್ತದೆ. ಭ್ರಷ್ಟ ವ್ಯವಸ್ಥೆಯಿಂದ ನೊಂದ ಹೆಣ್ಣುಮಗಳೊಬ್ಬಳು ತನಗೆ ತಿಳಿದ ದಾರಿಯಲ್ಲಿ ಸಿಡಿದೇಳುವ ಸಣ್ಣ ಕಥಾ ಎಳೆಯಿಟ್ಟುಕೊಂಡು ಒಂದು ಜನಪ್ರಿಯ ಸಿನಿಮಾ ಮಾಡಬಹುದು ಎನ್ನುವುದನ್ನು ಆಕ್ಟ್-1978 ಚಿತ್ರತಂಡ ತೋರಿಸಿಕೊಟ್ಟಿದೆ.

ನಮ್ಮ ವ್ಯವಸ್ಥೆಯಲ್ಲಿ ನೂರಾರು ಸಮಸ್ಯೆಗಳಿವೆ. ಬಡತನ, ಜಾತಿಪದ್ದತಿ, ಪ್ರಾದೇಶಿಕ ಅಸಮಾನತೆ, ಧಾರ್ಮಿಕ ತಾರತಮ್ಯ, ಭ್ರಷ್ಟಾಚಾರ, ಖಾಸಗೀಕರಣ, ರೈತ-ಕಾರ್ಮಿಕರ ಬೆವರಿನ ಲೂಟಿ, ನಾಡು ನುಡಿಯ ಅವಹೇಳನ ಹೀಗೆ ಪಟ್ಟಿ ಬೆಳೆಯುತ್ತಲೇ ಇದೆ. ಈ ಸಮಸ್ಯೆಗಳ ನಡುವೆ ನೊಂದ ರೈತನ ಹಿನ್ನೆಲೆಯಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲುತ್ತದೆ.

ಒಂದು ಕಡೆ ಬೆಳೆದ ಬೆಳೆಗೆ ಬೆಲೆ ಸಿಗದೇ ತಮ್ಮ ಕುಟುಂಬಕ್ಕಾದರೂ ಪರಿಹಾರ ಸಿಗಲಿ ಎಂದು ತೆಂಗಿನ ಮರದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ತಂದೆ. ಇನ್ನೊಂದು ಕಡೆ ಸರ್ಕಾರಿ ವ್ಯವಸ್ಥೆಯ ನಿರ್ಲಕ್ಷ್ಯದಿಂದಾಗಿ ರಸ್ತೆ ಅಪಘಾತದಲ್ಲಿ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿರುವ ಗಂಡ. ಈ ನಡುವೆ ತನಗೆ ನ್ಯಾಯಯುತವಾಗಿ ಸಿಗಬೇಕಾದ ಪರಿಹಾರ ಹಣಕ್ಕಾಗಿ ಕಚೇರಿಗಳಿಂದ ಕಚೇರಿಗಳಿಗೆ ಅಲೆಯುತ್ತಿರುವ ತುಂಬು ಗರ್ಭಿಣಿ ಕಥಾನಾಯಕಿ. ಯಾವುದೇ ಕಾರಣಕ್ಕೂ ಲಂಚ ನೀಡಿ ಭ್ರಷ್ಟ ವ್ಯವಸ್ಥೆಯಲ್ಲಿ ಭಾಗಿಯಾಗುವುದಿಲ್ಲ ಎಂಬುವ ನೈತಿಕ ಸಿಟ್ಟು. ಇದರಿಂದ ಹತಾಶಳಾಗಿ, ತನ್ನದಲ್ಲದ ತಪ್ಪಿಗೆ 14 ವರ್ಷ ಜೈಲು ಶಿಕ್ಷೆ ಅನುಭವಿಸಿ ಮೌನಿಯಾಗಿರುವ ರೈತ ಮುದುಕನ ಜೊತೆ ಸೇರಿ, ಸರ್ಕಾರಕ್ಕೆ ಹೇಗೆ ತಲೆನೋವಾಗುತ್ತಾಳೆ ಎಂಬ ಕಥಾಹಂದರದ ಆಕ್ಟ್-1978, ಹೋಸ್ಟೇಜ್ ಡ್ರಾಮಾ ಸಿನೆಮಾಗಳಿಗೆ ಹೊಸ ಸೇರ್ಪಡೆಯಾಗಿದೆ.

ಈ ಸಿನಿಮಾ ನೋಡುವ ವೀಕ್ಷಕನಿಗೆ ಸರ್ಕಾರಿ ಕಚೇರಿಗಳಲ್ಲಿ ತಮಗಾದ ಕೆಟ್ಟ ಅನುಭವಗಳು ನೆನಪಿಗೆ ಬರಬಹುದು. ಆದರೆ ನಮ್ಮ ಜನರು ಅಸಾಮಾನ್ಯ ತಾಳ್ಮೆಯುಳ್ಳವರು. ಅದಕ್ಕೆ ಚಿತ್ರದಲ್ಲಿಯೂ ಒಂದು ಉದಾಹರಣೆಯಿದೆ. 22 ನೇ ವಯಸ್ಸಿಗೆ ಒಂದಷ್ಟು ಲಂಚ ಕೊಟ್ಟು ಅಡೆಂಡರ್ ಆಗಿ ಕೆಲಸಕ್ಕೆ ಸೇರುವ ಬೆಂಜಮಿನ್ ತನಗೆ 37 ವರ್ಷವಾದರೂ ಸಹ ತನ್ನ ಹುದ್ದೆ ಪರ್ಮನೆಂಟ್ ಆಗುತ್ತದೆ ಎಂಬ ಆಸೆಯಿಟ್ಟುಕೊಂಡು ಹಿರಿಯ ಅಧಿಕಾರಿಗೆ ತನಗೆ ಬರುವ ಸಂಬಳದಲ್ಲಿ 25% ಲಂಚ ಕೊಡುತ್ತಿರುತ್ತಾನೆ. ಆದರೆ ಕಥಾನಾಯಕಿ ವಿದ್ಯಾವಂತೆ ಗೀತಾ (ಯಜ್ಞಶೆಟ್ಟಿ) ಮಾತ್ರ ತಾನು ಎನ್ ಸಿ ಸಿಯಲ್ಲಿದ್ದಾಗ ಪ್ರತಿಜ್ಞೆ ಮಾಡಿದಂತೆ ಲಂಚಕೊಡಲೊಲ್ಲಳು, ಮಾತ್ರವಲ್ಲ ಅದೇ ಆದರ್ಶಗಳನ್ನು ಉಳಿಸಿಕೊಂಡು ಬಂದಿರುವವಳು. ತನಗಾದ ನೋವು ಮತ್ತು ಅನ್ಯಾಯಕ್ಕೆ ನ್ಯಾಯ ಪಡೆಯಲು ತೀವ್ರ ಹೆಜ್ಜೆ ಇಟ್ಟು, ಬಾಂಬ್ ಕಟ್ಟಿಕೊಂಡು, ಬಂದೂಕು ಹಿಡಿದು, ತನಗೆ ಅನ್ಯಾಯ ಮಾಡಿದ ಸರ್ಕಾರಿ ನೌಕರರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡು ವ್ಯವಸ್ಥೆಯೊಂದಿಗೆ ಸಂಪರ್ಕ ಸಾಧಿಸಿ ಜಡಗಟ್ಟಿದ ವ್ಯವಸ್ಥೆಗೆ ಚುರುಕು ಮುಟ್ಟಿಸಬಲ್ಲಳು.

ಹತಾಶಗೊಂಡ ಜನ ಯಾವ ಮಟ್ಟಕ್ಕೂ ಹೋಗಬಲ್ಲರು ಎಂಬುದನ್ನು ಸಿನಿಮಾ ಸೂಚ್ಯವಾಗಿ ಹೇಳುತ್ತದೆ. ಹಾಗೆಯೇ ಪ್ರತಿಯೊಬ್ಬರೂ (ಲಂಚ ಕೊಡುವವರು, ಪಡೆಯುವವರು) ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಅಭಿಲಾಷೆ. ಸಾಮಾನ್ಯ ಜನರ ನೋವನ್ನು, ಆಕ್ರೋಶವನ್ನು ಹಿರಿತೆರೆಮೇಲೆ ತರುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ ಎಂದೇ ಹೇಳಬಹುದು. ಕೊನೆಯವರೆಗೂ ಕುತೂಹಲ ಕಾಯ್ದುಕೊಳ್ಳುವ ಚಿತ್ರದ ಮೊದಲಾರ್ಧದಲ್ಲಿ ಕಚಗುಳಿ ಇಡುವ ಹಾಸ್ಯ ಕೂಡ ಮುದ ನೀಡುತ್ತವೆ. ಗಾಂಧಿ ವೇಷಧಾರಿಯ ಪ್ರತಿಭಟನೆಯನ್ನು ಸಮಾಜ ನಿರ್ಲಕ್ಷಿಸುವುದು, ಮಾಧ್ಯಮಗಳು ಬಾಯಿಗೆ ಬಂದಂತೆ ಸಂದರ್ಭವನ್ನು ತಿರುಚುವುದು ಇವೆಲ್ಲವೂ ಚಿತ್ರದಲ್ಲಿ ಸೂಚ್ಯವಾಗಿ ಅಡಕಗೊಂಡಿದೆ.

ಹರಿವು ಮತ್ತು ನಾತಿಚರಾಮಿ ಚಿತ್ರಗಳ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಮಂಸೋರೆ ತಾನೊಬ್ಬ ಸಮರ್ಥ ಕಮರ್ಷಿಯಲ್ ಸಿನಿಮಾ ನಿರ್ದೇಶಕನೂ ಹೌದು ಎಂಬುದನ್ನು ಆಕ್ಟ್ 1978 ಚಿತ್ರದ ಮೂಲಕ ತೋರಿಸಿಕೊಟ್ಟಿದ್ದಾರೆ. ಬೆಲ್ ಬಾಟಂ ಚಿತ್ರಕಥೆ ಮೂಲಕ ಮನೆಮಾತಾಗಿರುವ ಯುವ ಬರಹಗಾರ ದಯಾನಂದ್ ಟಿ.ಕೆ ಮತ್ತು ವೀರು ಮಲ್ಲಣರವರ ಚಿತ್ರಕಥೆ ಮತ್ತು ಸಂಭಾಷಣೆ ಚಿತ್ರಕ್ಕೆ ಜೀವತುಂಬಿದೆ. ‘I Need Respect’ ಎನ್ನುವ ಡೈಲಾಗ್ ಚಿತ್ರದ ಧ್ಯೇಯವಾಕ್ಯವೂ ಅನಿಸುತ್ತದೆ. ಯಜ್ಞಶೆಟ್ಟಿ, ಬಿ.ಸುರೇಶ್, ಪ್ರಮೋದ್ ಶೆಟ್ಟಿ, ಅಚ್ಯುತ್ ರವರ ಅಭಿನಯ ಗಮನಸೆಳೆಯುತ್ತದೆ.

ಚಿತ್ರ ದ್ವಿತಿಯಾರ್ಧದಲ್ಲಿ ಸ್ವಲ್ಪ ಎಳೆದಂತೆ ಭಾಸವಾಗುತ್ತದೆ. ಭ್ರಷ್ಟಾಚಾರ ಕೇವಲ ಸರ್ಕಾರಿ ಕಚೇರಿಗಳಲ್ಲಿ ಮಾತ್ರವಿದೆ ಎಂಬ ಸರಳ ನಿರೂಪಣೆ, ಇಡೀ ಆಡಳಿತ ವ್ಯವಸ್ಥೆಯನ್ನು ಅದಕ್ಕೆ ಲಿಂಕ್ ಮಾಡಲು ಸಾಧ್ಯವಾಗದಿರುವುದು, ಕಾರ್ಪೋರೆಟ್ ಸಂಸ್ಥೆಗಳು ಈ ಭ್ರಷ್ಟಾಚಾರಕ್ಕೆ ಕಾರಣವಾಗಿರುವ ಅಂಶವನ್ನು ನಿಭಾಯಿಸಲು ಸಾಧ್ಯವಾಗದಿರುವುದು, ಭಾರತದಂತಹ ಶ್ರೇಣೀಕೃತ ವ್ಯವಸ್ಥೆಯಲ್ಲಿ ಮೇಲ್ ಸ್ತರದ ಹುದ್ದೆಗಳಲ್ಲಿ ಇರುವ ಜಾತಿ ತಾರತಮ್ಯ ಮತ್ತು ಅದು ಸೃಷ್ಟಿಸಿರುವ ತೀವ್ರ ಭ್ರಷ್ಟಾಚಾರ ಇವುಗಳ ಬಗ್ಗೆ ಅಷ್ಟು ಎಚ್ಚರ ವಹಿಸದೆ ಹೋಗಿರುವುದು ಇಂತಹ ಸಂಗತಿಗಳು ಕಥಾಹಂದರವನ್ನು ತೆಳುವಾಗಿಸಿ ಇನ್ನಷ್ಟು ಪರಿಣಾಮಕಾರಿಯಾಗುವ ಅವಕಾಶವನ್ನು ಈ ಚನಲಚಿತ್ರ ಕೈಚೆಲ್ಲಿದೆ ಅನ್ನಿಸದೆ ಇರದು.

ಈ ಎಲ್ಲವನ್ನು ಒಂದೇ ಚಿತ್ರದಲ್ಲಿ ತರಲು ಸಾಧ್ಯವಿಲ್ಲ ಎನ್ನುವ ಅರಿವಿರುತ್ತಲೇ, ಇದರಲ್ಲಿ ಕೆಲವಾದರೂ ಸೇರಿದರೆ ಚಿತ್ರ ಮತ್ತಷ್ಟು ಸಮಗ್ರವಾಗುತ್ತಿತ್ತು. ಒಟ್ಟಿನಲ್ಲಿ ಜನಮುಖಿ ಕಥಾಹಂದರವುಳ್ಳ ಚಿತ್ರವೊಂದನ್ನು ಕಮರ್ಷಿಯಲ್ ಆಯಾಮದಲ್ಲಿ ತರಲು, ಲಾಕ್‌ಡೌನ್ ನಂತರ ಪ್ರೇಕ್ಷಕರಿಗೆ ಉತ್ತಮ ಕನ್ನಡ ಚಿತ್ರ ನೀಡಲು ಚಿತ್ರತಂಡ ಯಶಸ್ವಿಯಾಗಿದೆ.


ಇದನ್ನೂ ಓದಿ: ’ಆಕ್ಟ್-1978’ ಚಿತ್ರ: ಸಾಮಾಜಿಕ ಜಾಗೃತಿ ಮೂಡಿಸುವ ಪೋಸ್ಟರ್‌ಗಳು ವೈರಲ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...