Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...