Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...