Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...