Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...