Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...