Homeಮುಖಪುಟಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಕಾಯ್ದೆ ವಿರೋಧಿ ಮೋದಿ ಸರ್ಕಾರದ ಕಾಯ್ದೆ ತಿದ್ದುಪಡಿಗಳು!

ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು.

- Advertisement -
- Advertisement -

ಪ್ರಧಾನಿಯಾಗಿ 4 ತಿಂಗಳ ನಂತರ ಸೆಪ್ಟೆಂಬರ್ 29, 2014ರಂದು ನರೇಂದ್ರ ಮೋದಿಯವರು ಅಮೆರಿಕದ ನ್ಯೂಯಾರ್ಕಿನ ಮ್ಯಾಡಿಸನ್ ಸ್ಕೇರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಅಂದು ಅವರು ‘ಹಿಂದಿನ ಸರ್ಕಾರವು ಹೊಸ ಹೊಸ ಕಾನೂನನ್ನು ತರುವುದರಲ್ಲಿ ಸಂತೋಷ ಕಾಣುತ್ತಿತ್ತು. ನಾನು ಪ್ರತಿದಿನವೂ ಒಂದೊಂದು ಅಪ್ರಸ್ತುತ ಕಾನೂನನ್ನು ತೆಗೆದುಹಾಕಲಿದ್ದೇನೆ’ ಎಂದು ಘೋಷಿಸಿದ್ದರು. ಅದೇ ವೇಗದಲ್ಲಿ ಹೊರಟಿದ್ದರೆ ಈ ಹೊತ್ತಿಗೆ ದೇಶದಲ್ಲಿ ಒಂದು ಕಾನೂನೂ ಇರಬಾರದಿತ್ತು. ಆದರೆ ಕಾನೂನುಗಳಿವೆ ಮಾತ್ರವಲ್ಲಾ, ಅಂತಹ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ. ಕಾನೂನುಗಳನ್ನು ಅಪ್‍ಡೇಟ್ ಮಾಡಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳಬಹುದಾದರೂ, ಕಾನೂನುಗಳನ್ನು ತೆಗೆಯಲಾಗಿಲ್ಲ.

ಇಡೀ ಬೆಳವಣಿಗೆಯನ್ನು ಗಮನಿಸಿದರೆ ಬಿಜೆಪಿ ಪ್ರತಿಪಾದಿಸುವ ಚಿಂತನೆಯ ಮೂಲ ಅರ್ಥವಾಗುತ್ತದೆ. ರೂಲ್ ಆಫ್ ಲಾ ಎಂಬೊಂದು ಮಾತಿದೆ. ಅಂದರೆ ಯಾರು ಆಳುತ್ತಿರುವರೋ ಅವರು ಹೇಳಿದಂತೆ ದೇಶ ನಡೆಯುವುದಿಲ್ಲ, ಹಾಗೆ ಮಾಡಿದರೆ ಅದು ರಾಜಪ್ರಭುತ್ವವಾಗಿಬಿಡುತ್ತದೆ; ಬದಲಿಗೆ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನೀತಿಯ ಕುರಿತಾಗಿ ಹೇಳಲ್ಪಡುವ ಮಾತು ಅದು. ಆದರೆ, ಪ್ರಜಾಪ್ರಭುತ್ವವು ವಿಸ್ತರಣೆಯಾದಂತೆಲ್ಲಾ ಅಷ್ಟೇ ಕಾನೂನುಗಳೂ ಸಾಲವು ಎಂದಾಯಿತು. ಶೋಷಿತರ ಪರವಾಗಿ, ಅವರ ಹಕ್ಕುಗಳನ್ನು ಕಾಪಾಡುವ ಕೆಲವು ಕಾನೂನುಗಳ ಅಗತ್ಯ ಕಾಣಿಸಿಕೊಂಡಿತು. ದೌರ್ಜನ್ಯಗಳನ್ನು ತಡೆಯಲು ‘ಎಲ್ಲರೂ ಸಮಾನರು’ ಎಂದಷ್ಟೇ ಹೇಳಿದರೆ ಸಾಲದು; ಏಕೆಂದರೆ ‘ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದಾಕ್ಷಣ ದೌರ್ಜನ್ಯಕ್ಕೊಳಗಾಗುವವರು, ದುಡಿಯುವ ಕಾರ್ಮಿಕರು ಆ ಕಾನೂನಿನಡಿಯಲ್ಲಿ ಪ್ರಬಲರ ಎದುರು ಗೆಲ್ಲುವುದು ಸುಲಭವಲ್ಲ. ಹೀಗಾಗಿಯೇ ಮಹಿಳೆಯರ, ದಲಿತರ, ಕಾರ್ಮಿಕರ ಹಾಗೂ ಭೂಮಿ ನಂಬಿ ಬದುಕುತ್ತಿದ್ದ ರೈತರ ಪರವಾದ ಕೆಲವು ಕಾನೂನುಗಳು ಬಂದವು.

Photo Courtesy: BankExamToday

ಮೋದಿಯವರು ಉಲ್ಲೇಖಿಸಿದ ‘ಅವರ ಹಿಂದಿನ ಸರ್ಕಾರಗಳು’ ತಂದ ಮಾಹಿತಿ ಹಕ್ಕಿನ ಕಾಯ್ದೆ, ಅರಣ್ಯ ಕಾಯ್ದೆ, ಭೂ ಸ್ವಾಧೀನ ನಡೆದಾಗ ಪರಿಹಾರ ನೀಡುವ ಕಾಯ್ದೆಯಂತಹ ಹಲವು ಕಾಯ್ದೆಗಳು ವಾಸ್ತವದಲ್ಲಿ ಈ ರೀತಿ ಶೋಷಿತರ ಪರವಾಗಿ ಬಂದಂಥವು. ಅದೇ ರೀತಿಯಾಗಿ ಪರಿಸರ ಸಂಬಂಧಿ ಕಾನೂನುಗಳು ಸಹಾ ಕಟ್ಟುನಿಟ್ಟಾದ ರೂಪದಲ್ಲಿ ಬಂದವು. ಇವೆಲ್ಲವೂ ಸಹಾ ದಮನಿತ ಅಥವಾ ಆಸಕ್ತ ಜನಸಾಮಾನ್ಯರ ಹೋರಾಟಗಳ ಕಾರಣದಿಂದ ಸರ್ಕಾರಗಳು ಜಾರಿಗೆ ತರಲೇಬೇಕಾಗಿ ಬಂದಿತ್ತು ಎಂಬುದನ್ನೂ ಮರೆಯಲಾಗದು.

ಆದರೆ, ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಇಂತಹ ಕಾನೂನುಗಳು ಅಪಥ್ಯವೆನಿಸಲು ಅವರ ಹಿತಾಸಕ್ತಿ, ಅವರು ಪ್ರತಿನಿಧಿಸುವ ಸಮುದಾಯ/ವರ್ಗಗಳ ಹಿತಾಸಕ್ತಿಯೇ ಕಾರಣವಾಗಿದ್ದವು. ಹಾಗಾಗಿ ಅವರು ದಿನಕ್ಕೊಂದು ಕಾನೂನು ಕಿತ್ತುಹಾಕುವ ಮಾತನ್ನಾಡಿದ್ದರು. ಆ ಕಾನೂನುಗಳನ್ನು ತೆಗೆದುಬಿಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಮತ್ತು ಕಾನೂನು ತಜ್ಞರು ಅವರಿಗೆ ಹೇಳಿರಬೇಕು. ಹಾಗಾಗಿ ಅವನ್ನು ಮೂಲಆಶಯಗಳಿಗೆ ವಿರುದ್ಧವಾಗಿ ತಿರುಚಲು ಅವರು ಆದೇಶ ಕೊಟ್ಟಂತಿದೆ. ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಕಾನೂನುಗಳು ಮೊದಲು ಅವರ ಕಣ್ಣಿಗೆ ಬಿದ್ದಿದ್ದವು. ಅವುಗಳನ್ನು ಬದಲಿಸಲು ಶುರು ಮಾಡಿ ಮೊದಲ ಅವಧಿಯಲ್ಲಿ ಹಿಂಜರಿಯಬೇಕಾಗಿ ಬಂದಿತ್ತು. ಅದಕ್ಕಿಂತ ಮೊದಲು ಭೂಸ್ವಾಧೀನ ಮಾಡಿಕೊಂಡಾಗ ನ್ಯಾಯಯುತ ಪರಿಹಾರ ಕಲ್ಪಿಸಬೇಕೆನ್ನುವ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರಲು ಹೊರಟಿದ್ದರು. ಅದನ್ನು ದೇಶಾದ್ಯಂತ ನಡೆದ ಪ್ರತಿಭಟನೆಗಳು ಹಿಮ್ಮೆಟ್ಟಿಸಿದ್ದವು..

Photo Courtesy: The Indian Express

ಇದೀಗ ಎರಡನೆಯ ಬಾರಿಗೆ ಗೆದ್ದು ಬಂದ ನಂತರ, ಸರಣಿ ಕಾನೂನು ತಿದ್ದುಪಡಿಗಳಿಗೆ ಮುಂದಾಗಿದ್ದಾರೆ. ಅದಕ್ಕಾಗಿ ಅವರು ಬಳಸಿಕೊಂಡಿದ್ದು ಕೊರೊನಾ ಸಂದರ್ಭದ ನಿರ್ಬಂಧಗಳನ್ನು. ಆಗ ಯಾರೂ ದನಿಯೆತ್ತದ ಸನ್ನಿವೇಶವಿರುತ್ತದೆ; ಪ್ರತಿಭಟನೆಗಳಿಗೂ ಅವಕಾಶವಿರುವುದಿಲ್ಲ, ಹಾಗಾಗಿ ಜನರ ವಿರುದ್ಧವಾಗಿ ತಿದ್ದುಪಡಿಗಳನ್ನು ಹೊರಟರು. ಅದೇ ಸಂದರ್ಭದಲ್ಲಿ ಕೊರೊನಾ ನಿರ್ಬಂಧಗಳಿಂದ ಶಾಸನಸಭೆಗಳೂ ನಡೆಯುತ್ತಿರಲಿಲ್ಲವಾದ್ದರಿಂದ ಸುಗ್ರೀವಾಜ್ಞೆಯ ಮೂಲಕ ಅದನ್ನು ಸಾಧಿಸಿದರು. ಇದೀಗ ಮತ್ತೆ ಸಂಸತ್ತು ಮತ್ತು ವಿಧಾನಮಂಡಲಗಳು ಅಧಿವೇಶನಗೊಳ್ಳುತ್ತಿವೆಯಾದ್ದರಿಂದ ಎಲ್ಲೆಡೆ ಅವುಗಳಿಗೆ ವಿರೋಧ ಬರುವುದು ಖಚಿತವಾಗಿದೆ. ಬಿಜೆಪಿಯ ಮಿತ್ರ ಪಕ್ಷ ಅಕಾಲಿದಳದ ಸಚಿವೆ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಲ್ಲದೇ ಇಡೀ ಅಕಾಲಿ ದಳವೆ ಎನ್‌ಡಿಎಯಿಂದ ಹೊರಬಂದಿದೆ. ಅಂದರೆ ಪಂಜಾಬಿನ ರೈತ ಹೋರಾಟದ ಬಿಸಿ ಅವರಿಗೆ ತಟ್ಟುತ್ತಿದೆ ಎಂದಾಯಿತು.

ಹೀಗಿದ್ದೂ ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದ ಅಣತಿಯ ಮೇರೆಗೆ ಕಾನೂನುಗಳ ಬದಲಾವಣೆಗೆ ಶುರು ಹಚ್ಚಿಕೊಂಡಿದೆ. ಇದನ್ನು ವಿರೋಧಿಸಿ ರಾಜ್ಯದ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತರು ಅವರುಗಳ ಬೆನ್ನಿಗೆ ನಿಲ್ಲಬೇಕಿದೆ.


ಇದನ್ನೂ ಒದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...