Homeಮುಖಪುಟಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಒದಗಿಸಲು ಕಾಯ್ದೆ: ತೇಜಸ್ವಿ ಯಾದವ್ ಭರವಸೆ

ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಒದಗಿಸಲು ಕಾಯ್ದೆ: ತೇಜಸ್ವಿ ಯಾದವ್ ಭರವಸೆ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ಘೋಷಣೆ ಮಾಡಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್, ಬಿಹಾರದಲ್ಲಿ ಆರ್‌ಜೆಡಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ಖಚಿತಪಡಿಸುವ ಕಾಯ್ದೆ ತರಲಾಗುವುದು ಎಂದಿದ್ದಾರೆ.

ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರಸ್ತಾವಿತ ಕಾಯ್ದೆಯನ್ನು ಪರಿಚಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. “ಎನ್‌ಡಿಎಗೆ 20 ವರ್ಷಗಳಲ್ಲಿ ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗಿಲ್ಲ. ನಾವು ಅಧಿಕಾರಕ್ಕೆ ಬಂದ 20 ದಿನಗಳಲ್ಲಿ ಕಾಯ್ದೆ ಜಾರಿಗೆ ತರುತ್ತೇವೆ ಮತ್ತು 20 ತಿಂಗಳೊಳಗೆ ಅದರ ಅನುಷ್ಠಾನವನ್ನು ಖಚಿತಪಡಿಸುತ್ತೇವೆ” ಎಂದು ಹೇಳಿದ್ದಾರೆ.

“2020ರ ವಿಧಾನಸಭಾ ಚುನಾವಣೆಯಲ್ಲೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದೆವು. ನಮ್ಮ ಮಹಾ ಮೈತ್ರಿಕೂಟ ಸರ್ಕಾರದ 17 ತಿಂಗಳ ಆಡಳಿತದಲ್ಲಿ ಐದು ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗಿದೆ. ಹಾಗಾದರೆ, ನಮಗೆ ಐದು ವರ್ಷಗಳ ಪೂರ್ಣ ಅವಧಿ ಸಿಕ್ಕಿದ್ದರೆ ಏನಾಗುತ್ತಿತ್ತು ಎಂದು ಊಹಿಸಿ” ಎಂದಿದ್ದಾರೆ.

ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮತದಾರರನ್ನು ಸೆಳೆಯಲು ವಿರೋಧ ಪಕ್ಷಗಳ ಮೈತ್ರಿಕೂಟ ಈಗಾಗಲೇ ಜನರಿಗೆ ಹಲವು ಭರವಸೆಗಳನ್ನು ನೀಡಿದೆ. ಈ ಪೈಕಿ “ಚುನಾವಣೆಗೆ ಮುನ್ನ ನಾನು ಮಾಡಲಿರುವ ಹಲವು ಘೋಷಣೆಗಳಲ್ಲಿ ಇದು ಮೊದಲನೆಯದು” ಎಂದು ಅವರು ಹೇಳಿದರು.

ಬಿಹಾರದಲ್ಲಿ ಸರ್ಕಾರ ಉದ್ಯೋಗಿಗಳಿಲ್ಲದ ಮನೆಗಳೇ ಇರಬಾರದು. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಜನರಿಗೆ ನೀಡಿರುವ ವಾಗ್ದಾನಗಳ ದೊಡ್ಡ ಪಟ್ಟಿಯಲ್ಲಿ ಇದು ಮತ್ತೊಂದು ಭರವಸೆಯಾಗಿದೆ. ಚುನಾವಣೆಗೆ ಮುನ್ನ ನಾನು ಮಾಡಲಿರುವ ಹಲವು ಘೋಷಣೆಗಳಲ್ಲಿ ಇದು ಮೊದಲನೆಯದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ನಿತೀಶ್ ಕುಮಾರ್ ಸರ್ಕಾರ ಘೋಷಣೆ ಮಾಡಿದಂತೆ ಬಿಹಾರದ ಜನರಿಗೆ ನಿರುದ್ಯೋಗ ಭತ್ಯೆ ನೀಡುವುದಕ್ಕಿಂತ ಉದ್ಯೋಗ ಒದಗಿಸುವುದು ನಮ್ಮ ಆದ್ಯತೆ. ಬಿಹಾರಕ್ಕೆ 75 ವರ್ಷದ ಮುಖ್ಯಮಂತ್ರಿ ಅಗತ್ಯವಿಲ್ಲ ಎಂದಿದ್ದಾರೆ.

ತೇಜಸ್ವಿಯ ಯಾದವ್ ಅವರ ಘೋಷಣೆಯನ್ನು ಚುನಾವಣೆಗೆ ಮುನ್ನ ಕಲ್ಯಾಣ ಯೋಜನೆಗಳ ಮೂಲಕ ಆಡಳಿತಾರೂಢ ಎನ್‌ಡಿಎ ಸರ್ಕಾರ ಮಾಡಿರುವ ಕಸರತ್ತಿಗೆ ತಿರುಗೇಟು ಎಂದು ಹೇಳಲಾಗ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಘೋಷಣೆ ಮಾಡಿರುವ ಬಿಹಾರದ ಮಹಿಳಾ ಉದ್ಯಮಿಗಳಿಗೆ ತಲಾ 10,000 ರೂ.ಗಳನ್ನು ನೀಡುವ ಸರ್ಕಾರದ ಉಪಕ್ರಮವು ಮಹಿಳಾ ಮತದಾರರನ್ನು ಆಡಳಿತ ಮೈತ್ರಿಕೂಟದ ಕಡೆಗೆ ಆಕರ್ಷಿಸಿದೆ ಎಂದು ವರದಿಗಳು ಹೇಳಿವೆ.

ಸೆಪ್ಟೆಂಬರ್ 27ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ಮಹಿಳೆಯರಿಗಾಗಿ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ವ-ಉದ್ಯೋಗ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಅಲ್ಲದೆ, ರಾಜ್ಯದ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಲಾ 10,000 ರೂ.ಗಳನ್ನು ವರ್ಗಾಯಿಸಿದ್ದಾರೆ.

ಇದಲ್ಲದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಅಕ್ಟೋಬರ್ 3 ರಂದು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ 2,500 ಕೋಟಿ ರೂ.ಗಳನ್ನು ವರ್ಗಾಯಿಸಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯಡಿಯಲ್ಲಿ ತಲಾ 10,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಿದ್ದಾರೆ.

ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...