Homeಕರ್ನಾಟಕಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

- Advertisement -
- Advertisement -

ತಾವು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು ಬಿಬಿಎಂಪಿ ಪೌರಕಾರ್ಮಿಕರು ಎಐಸಿಸಿಟಿಯು ನೇತೃತ್ವದ ‘ಬಿಬಿಎಂಪಿ ಪೌರಕಾರ್ಮಿಕರ ಸಂಘ’ದ ಅಡಿಯಲ್ಲಿ ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಪೌರ ಕಾರ್ಮಿಕರ ಈ ಧರಣಿಯು ಅಕ್ಟೋಬರ್ 9 ರಂದು ಪ್ರಾರಂಭವಾಗಿದ್ದು, ಇಂದಿನ ಮೂರನೆ ಹಂತದ ಜಾಥಾವೂ ಬಿಬಿಎಂಪಿ ವಲಯ ಕಚೇರಿಯಲ್ಲಿ ಮುಕ್ತಾಯಗೊಂಡಿತು. ನೂರಾರು ಪೌರಕಾರ್ಮಿಕರು ತಮ್ಮ ಹಕ್ಕುಗಳಿಗೆ ಒತ್ತಾಯಿಸಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪೌರಕಾರ್ಮಿಕರಾಗಿ ದುಡಿಯುತ್ತಿರುವ ಚಾಲಕರು, ಸಹಾಯಕರು ಸೇರಿದಂತೆ ಎಲ್ಲ ಪೌರಕಾರ್ಮಿಕರ ಕೆಲಸವನ್ನು ಖಾಯಂಗೊಳಿಸಲು, ಕನಿಷ್ಠ ವೇತನವನ್ನು ಹೆಚ್ಚಳ ಮಾಡಲು, ಉಚಿತ ವಸತಿ ಮತ್ತು ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಲು ಮತ್ತು ಇತರೆ ಸಾಮಾಜಿಕ-ಆರ್ಥಿಕ ಹಕ್ಕೊತ್ತಾಯಗಳನ್ನು ಪೌರಕಾರ್ಮಿಕರು ಸರ್ಕಾರದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ:  ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಅಂಗಡಿಯವರು, ಮನೆಯವರು ಮತ್ತು ಬಿಬಿಎಂಪಿ ಅಧಿಕಾರಿಗಳು ತಮ್ಮೊಂದಿಗೆ ಗೌರವದಿಂದ ಮಾತನಾಡಬೇಕು. ಬಹುತೇಕ ಪೌರಕಾರ್ಮಿಕರು ಮಹಿಳೆಯರಾಗಿದ್ದು ಮತ್ತು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರನ್ನು ಕೀಳಾಗಿ ಪರಿಗಣಿಸುವುದು ಸಹಜವಾಗಿ ಬಿಟ್ಟಿದೆ” ಎಂದು ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪೌರಕಾರ್ಮಿಕರು ಸಮಾಜಕ್ಕೆ ಬಹುಮುಖ್ಯ ಸೇವೆಯನ್ನು ಒದಗಿಸುತ್ತಿದ್ದರೂ, ಲೈಂಗಿಕ ಕಿರುಕುಳ ಮತ್ತು ಜಾತಿ ದೌರ್ಜನ್ಯ ತಪ್ಪಿದ್ದಲ್ಲ. ಮತ್ತೊಂದೆಡೆಗೆ ಕುಡಿಯುವ ನೀರು, ಶೌಚಾಲಯ, ಸುರಕ್ಷತಾ ಸಲಕರಣೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ ಘನತೆಯುತ್ತ ಕೆಲಸದ ವಾತಾವರಣವನ್ನು ಕಲ್ಪಿಸಲು ಬಿಬಿಎಂಪಿ ವಿಫಲವಾಗಿದೆ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪೌರಕಾರ್ಮಿಕರ ಕಾಳಜಿಗಳು ಮತ್ತು ಬೇಡಿಕೆಗಳಿಗೆ ಪರಿಹಾರ ನೀಡುವುದಾಗಿ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ಅವರು ಆಶ್ವಾಸನೆಯನ್ನು ನೀಡಿದ್ದಾರೆ. ಕೊರೊನಾ ಸಾಂಕ್ರಾಮಿಕಕ್ಕೆ ಬಲಿಯಾದ ಪೌರಕಾರ್ಮಿಕರ ಕುಟುಂಬದವರಿಗೆ ಪರಿಹಾರವನ್ನು ಈ ಕೂಡಲೇ ನೀಡಲಾಗುವುದು ಮತ್ತು ಪೌರಕಾರ್ಮಿಕರ ಇತರ ಬೇಡಿಕೆಗಳನ್ನು ಈಡೇರಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಪೌರ ಕಾರ್ಮಿಕರ ಈ ಜಾಥಾವೂ ಅಕ್ಟೋಬರ್‌ 9, 2021 ರಂದು ಪ್ರಾರಂಭವಾಗಿತ್ತು. ಈಗಾಗಲೇ ಮಹದೇವಪುರ, ಆರ್‌.ಆರ್‌. ನಗರ ಮತ್ತು ಪೂರ್ವ ವಲಯದಲ್ಲಿ ಜಾಥಾ ನಡೆದಿದೆ. ಬೆಂಗಳೂರಿನಲ್ಲಿರುವ ಇತರ ಪೌರಕಾರ್ಮಿಕರನ್ನು ತಲುಪುವ ಪ್ರಯತ್ನವಾಗಿ ಈ ಜಾಥಾವನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ‘ಹಸಿ ಕಸ – ಒಣ ಕಸ ಬೇರ್ಪಡಿಸಿ ಕೊಡಿ’ ಎಂದ ಪೌರ ಕಾರ್ಮಿಕನ ಮೇಲೆ ಹಲ್ಲೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...