Homeಕರ್ನಾಟಕಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

- Advertisement -
- Advertisement -

ತಾವು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು ಬಿಬಿಎಂಪಿ ಪೌರಕಾರ್ಮಿಕರು ಎಐಸಿಸಿಟಿಯು ನೇತೃತ್ವದ ‘ಬಿಬಿಎಂಪಿ ಪೌರಕಾರ್ಮಿಕರ ಸಂಘ’ದ ಅಡಿಯಲ್ಲಿ ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಪೌರ ಕಾರ್ಮಿಕರ ಈ ಧರಣಿಯು ಅಕ್ಟೋಬರ್ 9 ರಂದು ಪ್ರಾರಂಭವಾಗಿದ್ದು, ಇಂದಿನ ಮೂರನೆ ಹಂತದ ಜಾಥಾವೂ ಬಿಬಿಎಂಪಿ ವಲಯ ಕಚೇರಿಯಲ್ಲಿ ಮುಕ್ತಾಯಗೊಂಡಿತು. ನೂರಾರು ಪೌರಕಾರ್ಮಿಕರು ತಮ್ಮ ಹಕ್ಕುಗಳಿಗೆ ಒತ್ತಾಯಿಸಿ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪೌರಕಾರ್ಮಿಕರಾಗಿ ದುಡಿಯುತ್ತಿರುವ ಚಾಲಕರು, ಸಹಾಯಕರು ಸೇರಿದಂತೆ ಎಲ್ಲ ಪೌರಕಾರ್ಮಿಕರ ಕೆಲಸವನ್ನು ಖಾಯಂಗೊಳಿಸಲು, ಕನಿಷ್ಠ ವೇತನವನ್ನು ಹೆಚ್ಚಳ ಮಾಡಲು, ಉಚಿತ ವಸತಿ ಮತ್ತು ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಲು ಮತ್ತು ಇತರೆ ಸಾಮಾಜಿಕ-ಆರ್ಥಿಕ ಹಕ್ಕೊತ್ತಾಯಗಳನ್ನು ಪೌರಕಾರ್ಮಿಕರು ಸರ್ಕಾರದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ:  ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

“ಅಂಗಡಿಯವರು, ಮನೆಯವರು ಮತ್ತು ಬಿಬಿಎಂಪಿ ಅಧಿಕಾರಿಗಳು ತಮ್ಮೊಂದಿಗೆ ಗೌರವದಿಂದ ಮಾತನಾಡಬೇಕು. ಬಹುತೇಕ ಪೌರಕಾರ್ಮಿಕರು ಮಹಿಳೆಯರಾಗಿದ್ದು ಮತ್ತು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರನ್ನು ಕೀಳಾಗಿ ಪರಿಗಣಿಸುವುದು ಸಹಜವಾಗಿ ಬಿಟ್ಟಿದೆ” ಎಂದು ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪೌರಕಾರ್ಮಿಕರು ಸಮಾಜಕ್ಕೆ ಬಹುಮುಖ್ಯ ಸೇವೆಯನ್ನು ಒದಗಿಸುತ್ತಿದ್ದರೂ, ಲೈಂಗಿಕ ಕಿರುಕುಳ ಮತ್ತು ಜಾತಿ ದೌರ್ಜನ್ಯ ತಪ್ಪಿದ್ದಲ್ಲ. ಮತ್ತೊಂದೆಡೆಗೆ ಕುಡಿಯುವ ನೀರು, ಶೌಚಾಲಯ, ಸುರಕ್ಷತಾ ಸಲಕರಣೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ ಘನತೆಯುತ್ತ ಕೆಲಸದ ವಾತಾವರಣವನ್ನು ಕಲ್ಪಿಸಲು ಬಿಬಿಎಂಪಿ ವಿಫಲವಾಗಿದೆ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪೌರಕಾರ್ಮಿಕರ ಕಾಳಜಿಗಳು ಮತ್ತು ಬೇಡಿಕೆಗಳಿಗೆ ಪರಿಹಾರ ನೀಡುವುದಾಗಿ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತರಾದ ಶಿಲ್ಪಾ ಅವರು ಆಶ್ವಾಸನೆಯನ್ನು ನೀಡಿದ್ದಾರೆ. ಕೊರೊನಾ ಸಾಂಕ್ರಾಮಿಕಕ್ಕೆ ಬಲಿಯಾದ ಪೌರಕಾರ್ಮಿಕರ ಕುಟುಂಬದವರಿಗೆ ಪರಿಹಾರವನ್ನು ಈ ಕೂಡಲೇ ನೀಡಲಾಗುವುದು ಮತ್ತು ಪೌರಕಾರ್ಮಿಕರ ಇತರ ಬೇಡಿಕೆಗಳನ್ನು ಈಡೇರಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಪೌರ ಕಾರ್ಮಿಕರ ಈ ಜಾಥಾವೂ ಅಕ್ಟೋಬರ್‌ 9, 2021 ರಂದು ಪ್ರಾರಂಭವಾಗಿತ್ತು. ಈಗಾಗಲೇ ಮಹದೇವಪುರ, ಆರ್‌.ಆರ್‌. ನಗರ ಮತ್ತು ಪೂರ್ವ ವಲಯದಲ್ಲಿ ಜಾಥಾ ನಡೆದಿದೆ. ಬೆಂಗಳೂರಿನಲ್ಲಿರುವ ಇತರ ಪೌರಕಾರ್ಮಿಕರನ್ನು ತಲುಪುವ ಪ್ರಯತ್ನವಾಗಿ ಈ ಜಾಥಾವನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ‘ಹಸಿ ಕಸ – ಒಣ ಕಸ ಬೇರ್ಪಡಿಸಿ ಕೊಡಿ’ ಎಂದ ಪೌರ ಕಾರ್ಮಿಕನ ಮೇಲೆ ಹಲ್ಲೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....