Homeಚಳವಳಿಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಶಾಲೆಗಳಿಗೆ ನುಗ್ಗಿ, ಅಪ್ರಾಪ್ತ ಮಕ್ಕಳ ವಿಡಿಯೋ ಮಾಡಿ, ಪ್ರಶ್ನೆ ಕೇಳಿ, ವಿಡಿಯೋ ಮಾಡಲು ಓಡಿಸಿಕೊಂಡು ಹೋಗುತ್ತಿರುವ ವರದಿಗಾರರು ಮತ್ತು ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಂಧನೂರಿನ ಮಕ್ಕಳ ಹಕ್ಕುಗಳ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ.

ಇಂದು ಸಿಂಧನೂರಿನ ತಹಶೀಲ್ದಾರ್ ಕಚೇರಿ ಎದರು ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ ವ್ಯಕ್ತಿ, ಅಧಿಕಾರಿಗಳು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಆವರಣ ಹಾಗೂ ಕೊಠಡಿಗಳಿಗೆ ಅಕ್ರಮ ಮತ್ತು ದುರುದ್ದೇಶಪೂರ್ವಕವಾಗಿ ನುಗ್ಗಿ ಮಕ್ಕಳಿಂದ ಬಲವಂತವಾಗಿ ಹೇಳಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಿದ್ದಲ್ಲದೇ, ಅವರನ್ನು ಬೆನ್ನಟ್ಟಿ ಪೀಡಿಸಿದ ಘಟನೆಗಳು ನಡೆದಿವೆ. ಇದು ಮಕ್ಕಳ ಮನೋವಿಶ್ವಾಸ ಕುಗ್ಗಿಸಿ ಅವರನ್ನು ಶಾಲೆಯಿಂದ ಹೊರಗುಳಿಯುವಂತೆ ಮಾಡುವ ದುರುದ್ದೇಶವಾಗಿದ್ದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು AICCTU ಸಂಚಾಲಕಾದ ನಾಗರಾಜ್ ಪೂಜಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಸಮುದಾಯಕ್ಕೆ ಸೇರಿದ ಮಕ್ಕಳು ಎನ್ನುವ ಕಾರಣಕ್ಕೆ, ಕಳೆದ ಮೂರ‍್ನಾಲ್ಕು ದಿನಗಳಿಂದ ಹಾಡಹಗಲಲ್ಲೇ ಶಾಲೆಗೆ ಬರುವ ಮಕ್ಕಳನ್ನು ಹೆದರಿಸುವ, ಬೆದರಿಸುವ, ಅವರಿಗೆ ಮುಜುಗರ ಉಂಟುಮಾಡುವ, ಮಾನಸಿಕ ಸ್ಥೈರ್ಯ ಕುಗ್ಗಿಸುವ, ಕಿರುಕುಳ ನೀಡುವ, ಶಾಲೆಗೆ ಹೊರಗುಳಿಯುವಂತೆ ಮಾಡುವ ದುರುದ್ದೇಶದ ಘಟನೆಗಳು ನಡೆದಾಗ್ಯೂ ಮಕ್ಕಳ ಹಕ್ಕುಗಳ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡಿ, ಜನರ ತೆರಿಗೆ ದುಡ್ಡಿನಲ್ಲಿ ಅಭಿಯಾನ ಮಾಡುವ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗದಿರುವುದು ಸಂವಿಧಾನಬಾಹಿರ ಮತ್ತು ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ವಿವಾದ ಶುರುವಾಗುತ್ತಿದ್ದಂತೆ ಕಳೆದ ಕೆಲವು ದಿನಗಳಿಂದ ಮಕ್ಕಳ ಹಿತಾಸಕ್ತಿಯನ್ನೇ ಮರೆತು, ಮಕ್ಕಳ ಇಚ್ಛೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು, ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಡಲಾಗಿದೆ. ಅಲ್ಲದೇ ಏನೂ ತಿಳಿಯದ ಮುಗ್ದ ಮುಕ್ಕಳನ್ನು ದುರ್ಬಳಕೆ ಮಾಡಿಕೊಂಡು ಪ್ರಚೋದನಕಾರಿಯಾದ ಮಾತುಗಳನ್ನು ಹೇಳಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದ್ದು ಇದು ಆಯಾ ಜಿಲ್ಲಾಡಳಿತಗಳ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಮಹಿಳಾ ಒಕ್ಕೂಟದ ವಿರುಪಮ್ಮ, ಹೇಳಿದ್ದಾರೆ.

ಈ ಎಲ್ಲಾ ಕೃತ್ಯಗಳು ಬಾಲನ್ಯಾಯ ಕಾಯ್ದೆ 2015ರ ಉಲ್ಲಂಘನೆಯಾಗಿದೆ. ಭಾರತ ಸಂವಿಧಾನ ಮತ್ತು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಬೆಂಬಲ ನೀಡುವುದಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಅಂದರೆ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂದು ಖಚಿತಪಡಿಸುವುದು ಆಯೋಗದ ಕರ್ತವ್ಯವಾಗಿದೆ. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಅಡೆ-ತಡೆ ಉಂಟುಮಾಡುತ್ತಿರುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಯೋಗ ಮುಂದಾಗಬೇಕೆಂದು ಆಗ್ರಹಿಸಲಾಯಿತು.

ಕಳೆದ ಕೆಲವು ದಿನಗಳಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗಿವೆ ಎಂಬ ಬಗ್ಗೆ ವರದಿ ತರಿಸಿಕೊಂಡು, ಶಾಲೆಗಳಲ್ಲಿ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೇ ವಿದ್ಯಾರ್ಥಿಗಳ ಘನತೆ ಎತ್ತಿ ಹಿಡಿದು ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಪ್ರತಿಭಟನಾಕರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಈರಮ್ಮ, ರಂಗಮ್ಮ, ಮಾಳಮ್ಮ, ಇಂದ್ರಮ್ಮ, ಅಮರಮ್ಮ, ಗ್ಯಾನಮ್ಮ, ದೇವಮ್ಮ, ಮರಿಯಮ್ಮ, ದಲಿತ ಮುಖಂಡ ಮಹಾದೇವ ಧುಮತಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಕ.ಕೊ.ಸೌ.ವೇದಿಕೆಯ ಸಮ್ಮದ್ ಚೌದ್ರಿ, ಬಸವರಾಜ ಬೆಳಗುರ್ಕಿ, ಬಸಯ್ಯ ಬಡಿಗೇರ, ಶ್ರೀನಿವಾಸ ಬುಕ್ಕನಹಟ್ಟಿ, ಮಲ್ಲಿಕಾರ್ಜುನ ಕುರುಗೋಡು, ಆರ್.ಎಚ್.ಕಲಮಂಗಿ ಸೇರಿದಂತೆ ಇನ್ನಿತರರಿದ್ದರು.


ಇದನ್ನೂ ಓದಿ: ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...