Homeಚಳವಳಿಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಶಾಲೆಗಳಿಗೆ ನುಗ್ಗಿ, ಅಪ್ರಾಪ್ತ ಮಕ್ಕಳ ವಿಡಿಯೋ ಮಾಡಿ, ಪ್ರಶ್ನೆ ಕೇಳಿ, ವಿಡಿಯೋ ಮಾಡಲು ಓಡಿಸಿಕೊಂಡು ಹೋಗುತ್ತಿರುವ ವರದಿಗಾರರು ಮತ್ತು ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಂಧನೂರಿನ ಮಕ್ಕಳ ಹಕ್ಕುಗಳ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ.

ಇಂದು ಸಿಂಧನೂರಿನ ತಹಶೀಲ್ದಾರ್ ಕಚೇರಿ ಎದರು ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ ವ್ಯಕ್ತಿ, ಅಧಿಕಾರಿಗಳು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಆವರಣ ಹಾಗೂ ಕೊಠಡಿಗಳಿಗೆ ಅಕ್ರಮ ಮತ್ತು ದುರುದ್ದೇಶಪೂರ್ವಕವಾಗಿ ನುಗ್ಗಿ ಮಕ್ಕಳಿಂದ ಬಲವಂತವಾಗಿ ಹೇಳಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಿದ್ದಲ್ಲದೇ, ಅವರನ್ನು ಬೆನ್ನಟ್ಟಿ ಪೀಡಿಸಿದ ಘಟನೆಗಳು ನಡೆದಿವೆ. ಇದು ಮಕ್ಕಳ ಮನೋವಿಶ್ವಾಸ ಕುಗ್ಗಿಸಿ ಅವರನ್ನು ಶಾಲೆಯಿಂದ ಹೊರಗುಳಿಯುವಂತೆ ಮಾಡುವ ದುರುದ್ದೇಶವಾಗಿದ್ದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು AICCTU ಸಂಚಾಲಕಾದ ನಾಗರಾಜ್ ಪೂಜಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಸಮುದಾಯಕ್ಕೆ ಸೇರಿದ ಮಕ್ಕಳು ಎನ್ನುವ ಕಾರಣಕ್ಕೆ, ಕಳೆದ ಮೂರ‍್ನಾಲ್ಕು ದಿನಗಳಿಂದ ಹಾಡಹಗಲಲ್ಲೇ ಶಾಲೆಗೆ ಬರುವ ಮಕ್ಕಳನ್ನು ಹೆದರಿಸುವ, ಬೆದರಿಸುವ, ಅವರಿಗೆ ಮುಜುಗರ ಉಂಟುಮಾಡುವ, ಮಾನಸಿಕ ಸ್ಥೈರ್ಯ ಕುಗ್ಗಿಸುವ, ಕಿರುಕುಳ ನೀಡುವ, ಶಾಲೆಗೆ ಹೊರಗುಳಿಯುವಂತೆ ಮಾಡುವ ದುರುದ್ದೇಶದ ಘಟನೆಗಳು ನಡೆದಾಗ್ಯೂ ಮಕ್ಕಳ ಹಕ್ಕುಗಳ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡಿ, ಜನರ ತೆರಿಗೆ ದುಡ್ಡಿನಲ್ಲಿ ಅಭಿಯಾನ ಮಾಡುವ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗದಿರುವುದು ಸಂವಿಧಾನಬಾಹಿರ ಮತ್ತು ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ವಿವಾದ ಶುರುವಾಗುತ್ತಿದ್ದಂತೆ ಕಳೆದ ಕೆಲವು ದಿನಗಳಿಂದ ಮಕ್ಕಳ ಹಿತಾಸಕ್ತಿಯನ್ನೇ ಮರೆತು, ಮಕ್ಕಳ ಇಚ್ಛೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು, ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಡಲಾಗಿದೆ. ಅಲ್ಲದೇ ಏನೂ ತಿಳಿಯದ ಮುಗ್ದ ಮುಕ್ಕಳನ್ನು ದುರ್ಬಳಕೆ ಮಾಡಿಕೊಂಡು ಪ್ರಚೋದನಕಾರಿಯಾದ ಮಾತುಗಳನ್ನು ಹೇಳಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದ್ದು ಇದು ಆಯಾ ಜಿಲ್ಲಾಡಳಿತಗಳ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಮಹಿಳಾ ಒಕ್ಕೂಟದ ವಿರುಪಮ್ಮ, ಹೇಳಿದ್ದಾರೆ.

ಈ ಎಲ್ಲಾ ಕೃತ್ಯಗಳು ಬಾಲನ್ಯಾಯ ಕಾಯ್ದೆ 2015ರ ಉಲ್ಲಂಘನೆಯಾಗಿದೆ. ಭಾರತ ಸಂವಿಧಾನ ಮತ್ತು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಬೆಂಬಲ ನೀಡುವುದಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಅಂದರೆ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂದು ಖಚಿತಪಡಿಸುವುದು ಆಯೋಗದ ಕರ್ತವ್ಯವಾಗಿದೆ. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಅಡೆ-ತಡೆ ಉಂಟುಮಾಡುತ್ತಿರುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಯೋಗ ಮುಂದಾಗಬೇಕೆಂದು ಆಗ್ರಹಿಸಲಾಯಿತು.

ಕಳೆದ ಕೆಲವು ದಿನಗಳಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗಿವೆ ಎಂಬ ಬಗ್ಗೆ ವರದಿ ತರಿಸಿಕೊಂಡು, ಶಾಲೆಗಳಲ್ಲಿ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೇ ವಿದ್ಯಾರ್ಥಿಗಳ ಘನತೆ ಎತ್ತಿ ಹಿಡಿದು ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಪ್ರತಿಭಟನಾಕರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಈರಮ್ಮ, ರಂಗಮ್ಮ, ಮಾಳಮ್ಮ, ಇಂದ್ರಮ್ಮ, ಅಮರಮ್ಮ, ಗ್ಯಾನಮ್ಮ, ದೇವಮ್ಮ, ಮರಿಯಮ್ಮ, ದಲಿತ ಮುಖಂಡ ಮಹಾದೇವ ಧುಮತಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಕ.ಕೊ.ಸೌ.ವೇದಿಕೆಯ ಸಮ್ಮದ್ ಚೌದ್ರಿ, ಬಸವರಾಜ ಬೆಳಗುರ್ಕಿ, ಬಸಯ್ಯ ಬಡಿಗೇರ, ಶ್ರೀನಿವಾಸ ಬುಕ್ಕನಹಟ್ಟಿ, ಮಲ್ಲಿಕಾರ್ಜುನ ಕುರುಗೋಡು, ಆರ್.ಎಚ್.ಕಲಮಂಗಿ ಸೇರಿದಂತೆ ಇನ್ನಿತರರಿದ್ದರು.


ಇದನ್ನೂ ಓದಿ: ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....