Homeಚಳವಳಿಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಶಾಲೆಗಳಿಗೆ ನುಗ್ಗಿ, ಅಪ್ರಾಪ್ತ ಮಕ್ಕಳ ವಿಡಿಯೋ ಮಾಡಿ, ಪ್ರಶ್ನೆ ಕೇಳಿ, ವಿಡಿಯೋ ಮಾಡಲು ಓಡಿಸಿಕೊಂಡು ಹೋಗುತ್ತಿರುವ ವರದಿಗಾರರು ಮತ್ತು ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಂಧನೂರಿನ ಮಕ್ಕಳ ಹಕ್ಕುಗಳ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ.

ಇಂದು ಸಿಂಧನೂರಿನ ತಹಶೀಲ್ದಾರ್ ಕಚೇರಿ ಎದರು ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ ವ್ಯಕ್ತಿ, ಅಧಿಕಾರಿಗಳು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಆವರಣ ಹಾಗೂ ಕೊಠಡಿಗಳಿಗೆ ಅಕ್ರಮ ಮತ್ತು ದುರುದ್ದೇಶಪೂರ್ವಕವಾಗಿ ನುಗ್ಗಿ ಮಕ್ಕಳಿಂದ ಬಲವಂತವಾಗಿ ಹೇಳಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಿದ್ದಲ್ಲದೇ, ಅವರನ್ನು ಬೆನ್ನಟ್ಟಿ ಪೀಡಿಸಿದ ಘಟನೆಗಳು ನಡೆದಿವೆ. ಇದು ಮಕ್ಕಳ ಮನೋವಿಶ್ವಾಸ ಕುಗ್ಗಿಸಿ ಅವರನ್ನು ಶಾಲೆಯಿಂದ ಹೊರಗುಳಿಯುವಂತೆ ಮಾಡುವ ದುರುದ್ದೇಶವಾಗಿದ್ದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು AICCTU ಸಂಚಾಲಕಾದ ನಾಗರಾಜ್ ಪೂಜಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಸಮುದಾಯಕ್ಕೆ ಸೇರಿದ ಮಕ್ಕಳು ಎನ್ನುವ ಕಾರಣಕ್ಕೆ, ಕಳೆದ ಮೂರ‍್ನಾಲ್ಕು ದಿನಗಳಿಂದ ಹಾಡಹಗಲಲ್ಲೇ ಶಾಲೆಗೆ ಬರುವ ಮಕ್ಕಳನ್ನು ಹೆದರಿಸುವ, ಬೆದರಿಸುವ, ಅವರಿಗೆ ಮುಜುಗರ ಉಂಟುಮಾಡುವ, ಮಾನಸಿಕ ಸ್ಥೈರ್ಯ ಕುಗ್ಗಿಸುವ, ಕಿರುಕುಳ ನೀಡುವ, ಶಾಲೆಗೆ ಹೊರಗುಳಿಯುವಂತೆ ಮಾಡುವ ದುರುದ್ದೇಶದ ಘಟನೆಗಳು ನಡೆದಾಗ್ಯೂ ಮಕ್ಕಳ ಹಕ್ಕುಗಳ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡಿ, ಜನರ ತೆರಿಗೆ ದುಡ್ಡಿನಲ್ಲಿ ಅಭಿಯಾನ ಮಾಡುವ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗದಿರುವುದು ಸಂವಿಧಾನಬಾಹಿರ ಮತ್ತು ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ವಿವಾದ ಶುರುವಾಗುತ್ತಿದ್ದಂತೆ ಕಳೆದ ಕೆಲವು ದಿನಗಳಿಂದ ಮಕ್ಕಳ ಹಿತಾಸಕ್ತಿಯನ್ನೇ ಮರೆತು, ಮಕ್ಕಳ ಇಚ್ಛೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು, ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಡಲಾಗಿದೆ. ಅಲ್ಲದೇ ಏನೂ ತಿಳಿಯದ ಮುಗ್ದ ಮುಕ್ಕಳನ್ನು ದುರ್ಬಳಕೆ ಮಾಡಿಕೊಂಡು ಪ್ರಚೋದನಕಾರಿಯಾದ ಮಾತುಗಳನ್ನು ಹೇಳಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದ್ದು ಇದು ಆಯಾ ಜಿಲ್ಲಾಡಳಿತಗಳ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಮಹಿಳಾ ಒಕ್ಕೂಟದ ವಿರುಪಮ್ಮ, ಹೇಳಿದ್ದಾರೆ.

ಈ ಎಲ್ಲಾ ಕೃತ್ಯಗಳು ಬಾಲನ್ಯಾಯ ಕಾಯ್ದೆ 2015ರ ಉಲ್ಲಂಘನೆಯಾಗಿದೆ. ಭಾರತ ಸಂವಿಧಾನ ಮತ್ತು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಬೆಂಬಲ ನೀಡುವುದಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಅಂದರೆ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂದು ಖಚಿತಪಡಿಸುವುದು ಆಯೋಗದ ಕರ್ತವ್ಯವಾಗಿದೆ. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಅಡೆ-ತಡೆ ಉಂಟುಮಾಡುತ್ತಿರುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಯೋಗ ಮುಂದಾಗಬೇಕೆಂದು ಆಗ್ರಹಿಸಲಾಯಿತು.

ಕಳೆದ ಕೆಲವು ದಿನಗಳಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗಿವೆ ಎಂಬ ಬಗ್ಗೆ ವರದಿ ತರಿಸಿಕೊಂಡು, ಶಾಲೆಗಳಲ್ಲಿ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೇ ವಿದ್ಯಾರ್ಥಿಗಳ ಘನತೆ ಎತ್ತಿ ಹಿಡಿದು ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಪ್ರತಿಭಟನಾಕರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಈರಮ್ಮ, ರಂಗಮ್ಮ, ಮಾಳಮ್ಮ, ಇಂದ್ರಮ್ಮ, ಅಮರಮ್ಮ, ಗ್ಯಾನಮ್ಮ, ದೇವಮ್ಮ, ಮರಿಯಮ್ಮ, ದಲಿತ ಮುಖಂಡ ಮಹಾದೇವ ಧುಮತಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಕ.ಕೊ.ಸೌ.ವೇದಿಕೆಯ ಸಮ್ಮದ್ ಚೌದ್ರಿ, ಬಸವರಾಜ ಬೆಳಗುರ್ಕಿ, ಬಸಯ್ಯ ಬಡಿಗೇರ, ಶ್ರೀನಿವಾಸ ಬುಕ್ಕನಹಟ್ಟಿ, ಮಲ್ಲಿಕಾರ್ಜುನ ಕುರುಗೋಡು, ಆರ್.ಎಚ್.ಕಲಮಂಗಿ ಸೇರಿದಂತೆ ಇನ್ನಿತರರಿದ್ದರು.


ಇದನ್ನೂ ಓದಿ: ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...