Homeಚಳವಳಿಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಮಾಧ್ಯಮಗಳ ಮೇಲೆ ಕ್ರಮ ಕೈಗೊಳ್ಳಿ: ಸಿಂಧನೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಶಾಲೆಗಳಿಗೆ ನುಗ್ಗಿ, ಅಪ್ರಾಪ್ತ ಮಕ್ಕಳ ವಿಡಿಯೋ ಮಾಡಿ, ಪ್ರಶ್ನೆ ಕೇಳಿ, ವಿಡಿಯೋ ಮಾಡಲು ಓಡಿಸಿಕೊಂಡು ಹೋಗುತ್ತಿರುವ ವರದಿಗಾರರು ಮತ್ತು ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಂಧನೂರಿನ ಮಕ್ಕಳ ಹಕ್ಕುಗಳ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ.

ಇಂದು ಸಿಂಧನೂರಿನ ತಹಶೀಲ್ದಾರ್ ಕಚೇರಿ ಎದರು ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ ವ್ಯಕ್ತಿ, ಅಧಿಕಾರಿಗಳು, ಸಂಘ ಸಂಸ್ಥೆಗಳು ಮತ್ತು ಮಾಧ್ಯಮಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಆವರಣ ಹಾಗೂ ಕೊಠಡಿಗಳಿಗೆ ಅಕ್ರಮ ಮತ್ತು ದುರುದ್ದೇಶಪೂರ್ವಕವಾಗಿ ನುಗ್ಗಿ ಮಕ್ಕಳಿಂದ ಬಲವಂತವಾಗಿ ಹೇಳಿಕೆಯನ್ನು ವಿಡಿಯೊ ಚಿತ್ರೀಕರಣ ಮಾಡಿದ್ದಲ್ಲದೇ, ಅವರನ್ನು ಬೆನ್ನಟ್ಟಿ ಪೀಡಿಸಿದ ಘಟನೆಗಳು ನಡೆದಿವೆ. ಇದು ಮಕ್ಕಳ ಮನೋವಿಶ್ವಾಸ ಕುಗ್ಗಿಸಿ ಅವರನ್ನು ಶಾಲೆಯಿಂದ ಹೊರಗುಳಿಯುವಂತೆ ಮಾಡುವ ದುರುದ್ದೇಶವಾಗಿದ್ದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು AICCTU ಸಂಚಾಲಕಾದ ನಾಗರಾಜ್ ಪೂಜಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಸಮುದಾಯಕ್ಕೆ ಸೇರಿದ ಮಕ್ಕಳು ಎನ್ನುವ ಕಾರಣಕ್ಕೆ, ಕಳೆದ ಮೂರ‍್ನಾಲ್ಕು ದಿನಗಳಿಂದ ಹಾಡಹಗಲಲ್ಲೇ ಶಾಲೆಗೆ ಬರುವ ಮಕ್ಕಳನ್ನು ಹೆದರಿಸುವ, ಬೆದರಿಸುವ, ಅವರಿಗೆ ಮುಜುಗರ ಉಂಟುಮಾಡುವ, ಮಾನಸಿಕ ಸ್ಥೈರ್ಯ ಕುಗ್ಗಿಸುವ, ಕಿರುಕುಳ ನೀಡುವ, ಶಾಲೆಗೆ ಹೊರಗುಳಿಯುವಂತೆ ಮಾಡುವ ದುರುದ್ದೇಶದ ಘಟನೆಗಳು ನಡೆದಾಗ್ಯೂ ಮಕ್ಕಳ ಹಕ್ಕುಗಳ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡಿ, ಜನರ ತೆರಿಗೆ ದುಡ್ಡಿನಲ್ಲಿ ಅಭಿಯಾನ ಮಾಡುವ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗದಿರುವುದು ಸಂವಿಧಾನಬಾಹಿರ ಮತ್ತು ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ವಿವಾದ ಶುರುವಾಗುತ್ತಿದ್ದಂತೆ ಕಳೆದ ಕೆಲವು ದಿನಗಳಿಂದ ಮಕ್ಕಳ ಹಿತಾಸಕ್ತಿಯನ್ನೇ ಮರೆತು, ಮಕ್ಕಳ ಇಚ್ಛೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು, ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಡಲಾಗಿದೆ. ಅಲ್ಲದೇ ಏನೂ ತಿಳಿಯದ ಮುಗ್ದ ಮುಕ್ಕಳನ್ನು ದುರ್ಬಳಕೆ ಮಾಡಿಕೊಂಡು ಪ್ರಚೋದನಕಾರಿಯಾದ ಮಾತುಗಳನ್ನು ಹೇಳಿಸುವ ಮೂಲಕ ಮಕ್ಕಳ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದ್ದು ಇದು ಆಯಾ ಜಿಲ್ಲಾಡಳಿತಗಳ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ರಾಜ್ಯ ಮಹಿಳಾ ಒಕ್ಕೂಟದ ವಿರುಪಮ್ಮ, ಹೇಳಿದ್ದಾರೆ.

ಈ ಎಲ್ಲಾ ಕೃತ್ಯಗಳು ಬಾಲನ್ಯಾಯ ಕಾಯ್ದೆ 2015ರ ಉಲ್ಲಂಘನೆಯಾಗಿದೆ. ಭಾರತ ಸಂವಿಧಾನ ಮತ್ತು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಬೆಂಬಲ ನೀಡುವುದಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಅಂದರೆ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂದು ಖಚಿತಪಡಿಸುವುದು ಆಯೋಗದ ಕರ್ತವ್ಯವಾಗಿದೆ. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಅಡೆ-ತಡೆ ಉಂಟುಮಾಡುತ್ತಿರುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಯೋಗ ಮುಂದಾಗಬೇಕೆಂದು ಆಗ್ರಹಿಸಲಾಯಿತು.

ಕಳೆದ ಕೆಲವು ದಿನಗಳಲ್ಲಿ ಯಾವ್ಯಾವ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗಿವೆ ಎಂಬ ಬಗ್ಗೆ ವರದಿ ತರಿಸಿಕೊಂಡು, ಶಾಲೆಗಳಲ್ಲಿ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೇ ವಿದ್ಯಾರ್ಥಿಗಳ ಘನತೆ ಎತ್ತಿ ಹಿಡಿದು ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಪ್ರತಿಭಟನಾಕರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಈರಮ್ಮ, ರಂಗಮ್ಮ, ಮಾಳಮ್ಮ, ಇಂದ್ರಮ್ಮ, ಅಮರಮ್ಮ, ಗ್ಯಾನಮ್ಮ, ದೇವಮ್ಮ, ಮರಿಯಮ್ಮ, ದಲಿತ ಮುಖಂಡ ಮಹಾದೇವ ಧುಮತಿ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಕ.ಕೊ.ಸೌ.ವೇದಿಕೆಯ ಸಮ್ಮದ್ ಚೌದ್ರಿ, ಬಸವರಾಜ ಬೆಳಗುರ್ಕಿ, ಬಸಯ್ಯ ಬಡಿಗೇರ, ಶ್ರೀನಿವಾಸ ಬುಕ್ಕನಹಟ್ಟಿ, ಮಲ್ಲಿಕಾರ್ಜುನ ಕುರುಗೋಡು, ಆರ್.ಎಚ್.ಕಲಮಂಗಿ ಸೇರಿದಂತೆ ಇನ್ನಿತರರಿದ್ದರು.


ಇದನ್ನೂ ಓದಿ: ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...