Homeಕರ್ನಾಟಕಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು: ಪೊಲೀಸರಿಗೆ ಸಿಎಂ ಸೂಚನೆ

ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು: ಪೊಲೀಸರಿಗೆ ಸಿಎಂ ಸೂಚನೆ

- Advertisement -
- Advertisement -

ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಇಂದು ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದ ಅವರು, ”ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜೊತೆಜೊತೆಗೆ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು” ಎಂದು ಸೂಚನೆ ನೀಡಿದರು.

”ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆʼ ಎಂದರು.

ʼಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ GDP ಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಹುತಾತ್ಮ ಪೊಲೀಸರ ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.

”ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ನಡುವೆ ನೇರ ಸಂಬಂಧವಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ” ಎಂದು ಹೇಳಿದರು.

”ಇದು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಪರಿಣಾಮವಾಗಿ, ದೇಶದ ಜನರ ತಲಾ ಆದಾಯವೂ ಹೆಚ್ಚಾಗುತ್ತದೆ. ದೇಶದ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾಪಾಡಬೇಕು” ಎಂದು ಕರೆ ನೀಡಿದರು.

”ತಂತ್ರಜ್ಞಾನದ ಪ್ರಗತಿಯಿಂದ ಪೊಲೀಸ್ ಇಲಾಖೆಗೆ ಹೊಸ ಸವಾಲುಗಳು ಎದುರಾಗುತ್ತಿದ್ದು, ಸೈಬರ್ ತಂತ್ರಜ್ಞಾನದ ಜತೆಗೆ ಸೈಬರ್ ಅಪರಾಧಗಳೂ ಹೆಚ್ಚುತ್ತಿವೆ, ಇದನ್ನು ಪರಿಣಾಮಕಾರಿಯಾಗಿ ತಡೆಯಬೇಕು” ಎಂದು ಸೂಚನೆ ನೀಡಿದರು.

ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.

ಇದನ್ನೂ ಓದಿ: ದೇವೇಗೌಡರಂತಹ ಪಳಗಿದ ರಾಜಕಾರಣಿ ಆಧಾರರಹಿತ ಸುಳ್ಳು ಹೇಳಿರುವುದು ನಾಚಿಕೆಗೇಡು: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...