Homeಮುಖಪುಟತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

- Advertisement -
- Advertisement -

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಜಾತಿ ಮತ್ತು ಸಮುದಾಯ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ತಪ್ಪಿಸಲು ಮಾರ್ಗಸೂಚಿಗಳನ್ನು ರೂಪಿಸುವ ಸಲುವಾಗಿ ರಚಿಸಿದ್ದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿ ತನ್ನ ವರದಿಯನ್ನು ಮಂಗಳವಾರ (ಜೂನ್ 18) ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ.

ವರದಿಯಲ್ಲಿ ಸಮಿತಿಯು ಸರ್ಕಾರಕ್ಕೆ ಅನೇಕ ಶಿಫಾರಸ್ಸುಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಬಳಸುವ ಬಣ್ಣದ ರಿಸ್ಟ್‌ಬ್ಯಾಂಡ್‌ಗಳು ಸೇರಿದಂತೆ ಇತರ ಜಾತಿ ಗುರುತುಗಳನ್ನು ನಿಷೇಧಿಸುವುದು ಮತ್ತು ಸಾಮಾಜಿಕ ನ್ಯಾಯ ವಿದ್ಯಾರ್ಥಿಗಳ ಪಡೆ (ಎಸ್‌ಜೆಎಸ್‌ಎಫ್‌) ರಚಿಸುವುದು ಅವುಗಳಲ್ಲಿ ಸೇರಿವೆ.

ಸಮಿತಿಯು ಮಾಡಿದ ಪ್ರಮುಖ ಶಿಫಾರಸುಗಳಲ್ಲಿ ಒಂದೆಂದರೆ, ಶಾಲೆಗಳ ಹೆಸರಿನಿಂದ ಜಾತಿ ಸೂಚಕಗಳನ್ನು ತೆಗೆದು ಹಾಕುವುದು ಮತ್ತು ಶಾಲೆಗಳನ್ನು ಅವುಗಳ ಸ್ಥಳದೊಂದಿಗೆ ‘ಸರ್ಕಾರಿ ಶಾಲೆಗಳು’ ಎಂದು ಮಾತ್ರ ಕರೆಯುವುದಾಗಿದೆ.

ಸರ್ಕಾರಿ ಶಾಲೆಗಳ ಹೆಸರಿನೊಂದಿಗೆ ದಾನಿಗಳು ಅಥವಾ ಕುಟುಂಬಗಳ ಹೆಸರಿದ್ದರೆ, ಅವುಗಳಲ್ಲಿನ ಜಾತಿ ಸೂಚಕಗಳನ್ನು ತೆಗದು ಹಾಕುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹೈಯರ್ ಸೆಕೆಂಡರಿ ತರಗತಿಗಳ ವಿಜ್ಞಾನ ಕೋರ್ಸ್‌ಗಳಲ್ಲಿ ಮೀಸಲಾತಿ ನೀಡುವುದು ಇನ್ನೊಂದು ಮುಖ್ಯ ಶಿಫಾರಸು ಆಗಿದೆ. ಇದಲ್ಲದೆ, ಸಾಮಾಜಿಕ ಅನಿಷ್ಟಗಳನ್ನು ಎದುರಿಸಲು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳೊಂದಿಗೆ ಸಾಮಾಜಿಕ ನ್ಯಾಯ ವಿದ್ಯಾರ್ಥಿ ಪಡೆ (ಎಸ್‌ಜೆಎಸ್‌ಎಫ್‌) ರಚನೆಗೆ ಸಮಿತಿಯು ಶಿಫಾರಸು ಮಾಡಿದೆ. ಶಿಕ್ಷಣದ ಕೇಸರಿಕರಣ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನುಸುಳುವ, ಜಾತಿ ಮತ್ತು ಕೋಮು ಸೌಹಾರ್ದತೆಗೆ ಅಡ್ಡಿಪಡಿಸುವ ಚಟುವಟಿಕೆಗಳ ಆರೋಪಗಳ ಬಗ್ಗೆ ತನಿಖೆ ನಡೆಸಲು ಪರಿಣಿತ ಸಂಸ್ಥೆ ಅಥವಾ ಏಜೆನ್ಸಿಯನ್ನು ರಚಿಸುವಂತೆಯೂ ಸೂಚಿಸಲಾಗಿದೆ.

ಇದಲ್ಲದೆ, ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಸಾಮಾನ್ಯ ನೀತಿ ಸಂಹಿತೆ ಜಾರಿಗೊಳಿಸಬೇಕು. ನೇಮಕಾತಿಗೂ ಮುನ್ನ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗೆಗಿನ ಅವರ ಮನೋಭಾವವನ್ನು ಶಿಕ್ಷಕರ ನೇಮಕಾತಿ ಮಂಡಳಿ (ಟಿಆರ್‌ಬಿ) ಖಚಿತಪಡಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಾಮಾಜಿಕ ಸಮಸ್ಯೆಗಳು, ಜಾತಿ ತಾರತಮ್ಯ, ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ದ್ರವ್ಯಗಳು, ರ‍್ಯಾಗಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳು ಮತ್ತು ಅವುಗಳ ಉಲ್ಲಂಘಣೆಯ ಪರಿಣಾಮಗಳ ಬಗ್ಗೆ ತಿಳಿಸಬೇಕು ಎಂದು ಹೇಳಿವೆ.

ಪ್ರತಿ ವಿಭಾಗಕ್ಕೆ ಒಬ್ಬ ಸಮಾಲೋಚಕರನ್ನು ನೇಮಿಸಬೇಕು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಪ್ರತಿ ಪ್ರೌಢ ಶಾಲೆಗೆ ಶಾಲಾ ಕಲ್ಯಾಣಾಧಿಕಾರಿ (ಎಸ್‌ಡಬ್ಲ್ಯುಒ) ಹುದ್ದೆಯನ್ನು ರಚಿಸಬೇಕು. ಕಲ್ಯಾಣಾಧಿಕಾರಿ ರ‍್ಯಾಗಿಂಗ್, ಡ್ರಗ್ಸ್ ಬೆದರಿಕೆ, ಲೈಂಗಿಕ ದೌರ್ಜನ್ಯ ಮತ್ತು ಜಾತಿ ತಾರತಮ್ಯಕ್ಕೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಬಗ್ಗೆ ಶಾಲೆಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಬೇಕು. ಕಾನೂನು ಪ್ರಕಾರ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಶಾಲಾ ಆಡಳಿತದ ವಿರುದ್ಧ ದೂರುಗಳಿದ್ದಲ್ಲಿ ಕಲ್ಯಾಣಾಧಿಕಾರಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಎಸ್‌ಸಿಪಿಸಿಆರ್‌) ದೂರು ಸಲ್ಲಿಸಬೇಕು. ಜಾತಿ ತಾರತಮ್ಯ ಮತ್ತು ಇತರ ಅನ್ಯಾಯದ ಆಚರಣೆಗಳ ಬಗ್ಗೆ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

2023ರ ಆಗಸ್ಟ್‌ನಲ್ಲಿ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಈ ಹಿಂದೆ, ತಮಿಳುನಾಡಿನ ಜೆಜೆ ಕಾಯಿದೆಯಡಿಯ ಕೇಂದ್ರಗಳ ಕಾರ್ಯಗಳನ್ನು ಪರಿಶೀಲಿಸಲು ಮತ್ತು ಅವುಗಳ ದಕ್ಷತೆಯನ್ನು ಸುಧಾರಿಸುವ ಮಾರ್ಗಗಳನ್ನು ಸೂಚಿಸಲು ಸರ್ಕಾರವು ನಿವೃತ್ತ ನ್ಯಾಯಮೂರ್ತಿಗೆ ಜವಬ್ದಾರಿ ನೀಡಿತ್ತು. ಅದರ ವರದಿಯನ್ನು ನವೆಂಬರ್ 15, 2023 ರಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ : ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...