Homeಮುಖಪುಟತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

- Advertisement -
- Advertisement -

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಜಾತಿ ಮತ್ತು ಸಮುದಾಯ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ತಪ್ಪಿಸಲು ಮಾರ್ಗಸೂಚಿಗಳನ್ನು ರೂಪಿಸುವ ಸಲುವಾಗಿ ರಚಿಸಿದ್ದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿ ತನ್ನ ವರದಿಯನ್ನು ಮಂಗಳವಾರ (ಜೂನ್ 18) ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ.

ವರದಿಯಲ್ಲಿ ಸಮಿತಿಯು ಸರ್ಕಾರಕ್ಕೆ ಅನೇಕ ಶಿಫಾರಸ್ಸುಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಬಳಸುವ ಬಣ್ಣದ ರಿಸ್ಟ್‌ಬ್ಯಾಂಡ್‌ಗಳು ಸೇರಿದಂತೆ ಇತರ ಜಾತಿ ಗುರುತುಗಳನ್ನು ನಿಷೇಧಿಸುವುದು ಮತ್ತು ಸಾಮಾಜಿಕ ನ್ಯಾಯ ವಿದ್ಯಾರ್ಥಿಗಳ ಪಡೆ (ಎಸ್‌ಜೆಎಸ್‌ಎಫ್‌) ರಚಿಸುವುದು ಅವುಗಳಲ್ಲಿ ಸೇರಿವೆ.

ಸಮಿತಿಯು ಮಾಡಿದ ಪ್ರಮುಖ ಶಿಫಾರಸುಗಳಲ್ಲಿ ಒಂದೆಂದರೆ, ಶಾಲೆಗಳ ಹೆಸರಿನಿಂದ ಜಾತಿ ಸೂಚಕಗಳನ್ನು ತೆಗೆದು ಹಾಕುವುದು ಮತ್ತು ಶಾಲೆಗಳನ್ನು ಅವುಗಳ ಸ್ಥಳದೊಂದಿಗೆ ‘ಸರ್ಕಾರಿ ಶಾಲೆಗಳು’ ಎಂದು ಮಾತ್ರ ಕರೆಯುವುದಾಗಿದೆ.

ಸರ್ಕಾರಿ ಶಾಲೆಗಳ ಹೆಸರಿನೊಂದಿಗೆ ದಾನಿಗಳು ಅಥವಾ ಕುಟುಂಬಗಳ ಹೆಸರಿದ್ದರೆ, ಅವುಗಳಲ್ಲಿನ ಜಾತಿ ಸೂಚಕಗಳನ್ನು ತೆಗದು ಹಾಕುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹೈಯರ್ ಸೆಕೆಂಡರಿ ತರಗತಿಗಳ ವಿಜ್ಞಾನ ಕೋರ್ಸ್‌ಗಳಲ್ಲಿ ಮೀಸಲಾತಿ ನೀಡುವುದು ಇನ್ನೊಂದು ಮುಖ್ಯ ಶಿಫಾರಸು ಆಗಿದೆ. ಇದಲ್ಲದೆ, ಸಾಮಾಜಿಕ ಅನಿಷ್ಟಗಳನ್ನು ಎದುರಿಸಲು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳೊಂದಿಗೆ ಸಾಮಾಜಿಕ ನ್ಯಾಯ ವಿದ್ಯಾರ್ಥಿ ಪಡೆ (ಎಸ್‌ಜೆಎಸ್‌ಎಫ್‌) ರಚನೆಗೆ ಸಮಿತಿಯು ಶಿಫಾರಸು ಮಾಡಿದೆ. ಶಿಕ್ಷಣದ ಕೇಸರಿಕರಣ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನುಸುಳುವ, ಜಾತಿ ಮತ್ತು ಕೋಮು ಸೌಹಾರ್ದತೆಗೆ ಅಡ್ಡಿಪಡಿಸುವ ಚಟುವಟಿಕೆಗಳ ಆರೋಪಗಳ ಬಗ್ಗೆ ತನಿಖೆ ನಡೆಸಲು ಪರಿಣಿತ ಸಂಸ್ಥೆ ಅಥವಾ ಏಜೆನ್ಸಿಯನ್ನು ರಚಿಸುವಂತೆಯೂ ಸೂಚಿಸಲಾಗಿದೆ.

ಇದಲ್ಲದೆ, ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಸಾಮಾನ್ಯ ನೀತಿ ಸಂಹಿತೆ ಜಾರಿಗೊಳಿಸಬೇಕು. ನೇಮಕಾತಿಗೂ ಮುನ್ನ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗೆಗಿನ ಅವರ ಮನೋಭಾವವನ್ನು ಶಿಕ್ಷಕರ ನೇಮಕಾತಿ ಮಂಡಳಿ (ಟಿಆರ್‌ಬಿ) ಖಚಿತಪಡಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಾಮಾಜಿಕ ಸಮಸ್ಯೆಗಳು, ಜಾತಿ ತಾರತಮ್ಯ, ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ದ್ರವ್ಯಗಳು, ರ‍್ಯಾಗಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳು ಮತ್ತು ಅವುಗಳ ಉಲ್ಲಂಘಣೆಯ ಪರಿಣಾಮಗಳ ಬಗ್ಗೆ ತಿಳಿಸಬೇಕು ಎಂದು ಹೇಳಿವೆ.

ಪ್ರತಿ ವಿಭಾಗಕ್ಕೆ ಒಬ್ಬ ಸಮಾಲೋಚಕರನ್ನು ನೇಮಿಸಬೇಕು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಪ್ರತಿ ಪ್ರೌಢ ಶಾಲೆಗೆ ಶಾಲಾ ಕಲ್ಯಾಣಾಧಿಕಾರಿ (ಎಸ್‌ಡಬ್ಲ್ಯುಒ) ಹುದ್ದೆಯನ್ನು ರಚಿಸಬೇಕು. ಕಲ್ಯಾಣಾಧಿಕಾರಿ ರ‍್ಯಾಗಿಂಗ್, ಡ್ರಗ್ಸ್ ಬೆದರಿಕೆ, ಲೈಂಗಿಕ ದೌರ್ಜನ್ಯ ಮತ್ತು ಜಾತಿ ತಾರತಮ್ಯಕ್ಕೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಬಗ್ಗೆ ಶಾಲೆಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಬೇಕು. ಕಾನೂನು ಪ್ರಕಾರ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಶಾಲಾ ಆಡಳಿತದ ವಿರುದ್ಧ ದೂರುಗಳಿದ್ದಲ್ಲಿ ಕಲ್ಯಾಣಾಧಿಕಾರಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಎಸ್‌ಸಿಪಿಸಿಆರ್‌) ದೂರು ಸಲ್ಲಿಸಬೇಕು. ಜಾತಿ ತಾರತಮ್ಯ ಮತ್ತು ಇತರ ಅನ್ಯಾಯದ ಆಚರಣೆಗಳ ಬಗ್ಗೆ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

2023ರ ಆಗಸ್ಟ್‌ನಲ್ಲಿ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಈ ಹಿಂದೆ, ತಮಿಳುನಾಡಿನ ಜೆಜೆ ಕಾಯಿದೆಯಡಿಯ ಕೇಂದ್ರಗಳ ಕಾರ್ಯಗಳನ್ನು ಪರಿಶೀಲಿಸಲು ಮತ್ತು ಅವುಗಳ ದಕ್ಷತೆಯನ್ನು ಸುಧಾರಿಸುವ ಮಾರ್ಗಗಳನ್ನು ಸೂಚಿಸಲು ಸರ್ಕಾರವು ನಿವೃತ್ತ ನ್ಯಾಯಮೂರ್ತಿಗೆ ಜವಬ್ದಾರಿ ನೀಡಿತ್ತು. ಅದರ ವರದಿಯನ್ನು ನವೆಂಬರ್ 15, 2023 ರಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ : ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...