Homeಮುಖಪುಟತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

- Advertisement -
- Advertisement -

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಜಾತಿ ಮತ್ತು ಸಮುದಾಯ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ತಪ್ಪಿಸಲು ಮಾರ್ಗಸೂಚಿಗಳನ್ನು ರೂಪಿಸುವ ಸಲುವಾಗಿ ರಚಿಸಿದ್ದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿ ತನ್ನ ವರದಿಯನ್ನು ಮಂಗಳವಾರ (ಜೂನ್ 18) ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ.

ವರದಿಯಲ್ಲಿ ಸಮಿತಿಯು ಸರ್ಕಾರಕ್ಕೆ ಅನೇಕ ಶಿಫಾರಸ್ಸುಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಬಳಸುವ ಬಣ್ಣದ ರಿಸ್ಟ್‌ಬ್ಯಾಂಡ್‌ಗಳು ಸೇರಿದಂತೆ ಇತರ ಜಾತಿ ಗುರುತುಗಳನ್ನು ನಿಷೇಧಿಸುವುದು ಮತ್ತು ಸಾಮಾಜಿಕ ನ್ಯಾಯ ವಿದ್ಯಾರ್ಥಿಗಳ ಪಡೆ (ಎಸ್‌ಜೆಎಸ್‌ಎಫ್‌) ರಚಿಸುವುದು ಅವುಗಳಲ್ಲಿ ಸೇರಿವೆ.

ಸಮಿತಿಯು ಮಾಡಿದ ಪ್ರಮುಖ ಶಿಫಾರಸುಗಳಲ್ಲಿ ಒಂದೆಂದರೆ, ಶಾಲೆಗಳ ಹೆಸರಿನಿಂದ ಜಾತಿ ಸೂಚಕಗಳನ್ನು ತೆಗೆದು ಹಾಕುವುದು ಮತ್ತು ಶಾಲೆಗಳನ್ನು ಅವುಗಳ ಸ್ಥಳದೊಂದಿಗೆ ‘ಸರ್ಕಾರಿ ಶಾಲೆಗಳು’ ಎಂದು ಮಾತ್ರ ಕರೆಯುವುದಾಗಿದೆ.

ಸರ್ಕಾರಿ ಶಾಲೆಗಳ ಹೆಸರಿನೊಂದಿಗೆ ದಾನಿಗಳು ಅಥವಾ ಕುಟುಂಬಗಳ ಹೆಸರಿದ್ದರೆ, ಅವುಗಳಲ್ಲಿನ ಜಾತಿ ಸೂಚಕಗಳನ್ನು ತೆಗದು ಹಾಕುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹೈಯರ್ ಸೆಕೆಂಡರಿ ತರಗತಿಗಳ ವಿಜ್ಞಾನ ಕೋರ್ಸ್‌ಗಳಲ್ಲಿ ಮೀಸಲಾತಿ ನೀಡುವುದು ಇನ್ನೊಂದು ಮುಖ್ಯ ಶಿಫಾರಸು ಆಗಿದೆ. ಇದಲ್ಲದೆ, ಸಾಮಾಜಿಕ ಅನಿಷ್ಟಗಳನ್ನು ಎದುರಿಸಲು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳೊಂದಿಗೆ ಸಾಮಾಜಿಕ ನ್ಯಾಯ ವಿದ್ಯಾರ್ಥಿ ಪಡೆ (ಎಸ್‌ಜೆಎಸ್‌ಎಫ್‌) ರಚನೆಗೆ ಸಮಿತಿಯು ಶಿಫಾರಸು ಮಾಡಿದೆ. ಶಿಕ್ಷಣದ ಕೇಸರಿಕರಣ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನುಸುಳುವ, ಜಾತಿ ಮತ್ತು ಕೋಮು ಸೌಹಾರ್ದತೆಗೆ ಅಡ್ಡಿಪಡಿಸುವ ಚಟುವಟಿಕೆಗಳ ಆರೋಪಗಳ ಬಗ್ಗೆ ತನಿಖೆ ನಡೆಸಲು ಪರಿಣಿತ ಸಂಸ್ಥೆ ಅಥವಾ ಏಜೆನ್ಸಿಯನ್ನು ರಚಿಸುವಂತೆಯೂ ಸೂಚಿಸಲಾಗಿದೆ.

ಇದಲ್ಲದೆ, ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಸಾಮಾನ್ಯ ನೀತಿ ಸಂಹಿತೆ ಜಾರಿಗೊಳಿಸಬೇಕು. ನೇಮಕಾತಿಗೂ ಮುನ್ನ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗೆಗಿನ ಅವರ ಮನೋಭಾವವನ್ನು ಶಿಕ್ಷಕರ ನೇಮಕಾತಿ ಮಂಡಳಿ (ಟಿಆರ್‌ಬಿ) ಖಚಿತಪಡಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಾಮಾಜಿಕ ಸಮಸ್ಯೆಗಳು, ಜಾತಿ ತಾರತಮ್ಯ, ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ದ್ರವ್ಯಗಳು, ರ‍್ಯಾಗಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳು ಮತ್ತು ಅವುಗಳ ಉಲ್ಲಂಘಣೆಯ ಪರಿಣಾಮಗಳ ಬಗ್ಗೆ ತಿಳಿಸಬೇಕು ಎಂದು ಹೇಳಿವೆ.

ಪ್ರತಿ ವಿಭಾಗಕ್ಕೆ ಒಬ್ಬ ಸಮಾಲೋಚಕರನ್ನು ನೇಮಿಸಬೇಕು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಪ್ರತಿ ಪ್ರೌಢ ಶಾಲೆಗೆ ಶಾಲಾ ಕಲ್ಯಾಣಾಧಿಕಾರಿ (ಎಸ್‌ಡಬ್ಲ್ಯುಒ) ಹುದ್ದೆಯನ್ನು ರಚಿಸಬೇಕು. ಕಲ್ಯಾಣಾಧಿಕಾರಿ ರ‍್ಯಾಗಿಂಗ್, ಡ್ರಗ್ಸ್ ಬೆದರಿಕೆ, ಲೈಂಗಿಕ ದೌರ್ಜನ್ಯ ಮತ್ತು ಜಾತಿ ತಾರತಮ್ಯಕ್ಕೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಬಗ್ಗೆ ಶಾಲೆಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಬೇಕು. ಕಾನೂನು ಪ್ರಕಾರ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಶಾಲಾ ಆಡಳಿತದ ವಿರುದ್ಧ ದೂರುಗಳಿದ್ದಲ್ಲಿ ಕಲ್ಯಾಣಾಧಿಕಾರಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಎಸ್‌ಸಿಪಿಸಿಆರ್‌) ದೂರು ಸಲ್ಲಿಸಬೇಕು. ಜಾತಿ ತಾರತಮ್ಯ ಮತ್ತು ಇತರ ಅನ್ಯಾಯದ ಆಚರಣೆಗಳ ಬಗ್ಗೆ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

2023ರ ಆಗಸ್ಟ್‌ನಲ್ಲಿ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಈ ಹಿಂದೆ, ತಮಿಳುನಾಡಿನ ಜೆಜೆ ಕಾಯಿದೆಯಡಿಯ ಕೇಂದ್ರಗಳ ಕಾರ್ಯಗಳನ್ನು ಪರಿಶೀಲಿಸಲು ಮತ್ತು ಅವುಗಳ ದಕ್ಷತೆಯನ್ನು ಸುಧಾರಿಸುವ ಮಾರ್ಗಗಳನ್ನು ಸೂಚಿಸಲು ಸರ್ಕಾರವು ನಿವೃತ್ತ ನ್ಯಾಯಮೂರ್ತಿಗೆ ಜವಬ್ದಾರಿ ನೀಡಿತ್ತು. ಅದರ ವರದಿಯನ್ನು ನವೆಂಬರ್ 15, 2023 ರಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ : ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...