Homeಮುಖಪುಟತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

ತಮಿಳುನಾಡು| ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕ್ರಮ: ಸರ್ಕಾರಕ್ಕೆ ವರದಿ ಒಪ್ಪಿಸಿದ ಸಮಿತಿ

- Advertisement -
- Advertisement -

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಜಾತಿ ಮತ್ತು ಸಮುದಾಯ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ತಪ್ಪಿಸಲು ಮಾರ್ಗಸೂಚಿಗಳನ್ನು ರೂಪಿಸುವ ಸಲುವಾಗಿ ರಚಿಸಿದ್ದ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿ ತನ್ನ ವರದಿಯನ್ನು ಮಂಗಳವಾರ (ಜೂನ್ 18) ತಮಿಳುನಾಡು ಸರ್ಕಾರಕ್ಕೆ ಸಲ್ಲಿಸಿದೆ.

ವರದಿಯಲ್ಲಿ ಸಮಿತಿಯು ಸರ್ಕಾರಕ್ಕೆ ಅನೇಕ ಶಿಫಾರಸ್ಸುಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಬಳಸುವ ಬಣ್ಣದ ರಿಸ್ಟ್‌ಬ್ಯಾಂಡ್‌ಗಳು ಸೇರಿದಂತೆ ಇತರ ಜಾತಿ ಗುರುತುಗಳನ್ನು ನಿಷೇಧಿಸುವುದು ಮತ್ತು ಸಾಮಾಜಿಕ ನ್ಯಾಯ ವಿದ್ಯಾರ್ಥಿಗಳ ಪಡೆ (ಎಸ್‌ಜೆಎಸ್‌ಎಫ್‌) ರಚಿಸುವುದು ಅವುಗಳಲ್ಲಿ ಸೇರಿವೆ.

ಸಮಿತಿಯು ಮಾಡಿದ ಪ್ರಮುಖ ಶಿಫಾರಸುಗಳಲ್ಲಿ ಒಂದೆಂದರೆ, ಶಾಲೆಗಳ ಹೆಸರಿನಿಂದ ಜಾತಿ ಸೂಚಕಗಳನ್ನು ತೆಗೆದು ಹಾಕುವುದು ಮತ್ತು ಶಾಲೆಗಳನ್ನು ಅವುಗಳ ಸ್ಥಳದೊಂದಿಗೆ ‘ಸರ್ಕಾರಿ ಶಾಲೆಗಳು’ ಎಂದು ಮಾತ್ರ ಕರೆಯುವುದಾಗಿದೆ.

ಸರ್ಕಾರಿ ಶಾಲೆಗಳ ಹೆಸರಿನೊಂದಿಗೆ ದಾನಿಗಳು ಅಥವಾ ಕುಟುಂಬಗಳ ಹೆಸರಿದ್ದರೆ, ಅವುಗಳಲ್ಲಿನ ಜಾತಿ ಸೂಚಕಗಳನ್ನು ತೆಗದು ಹಾಕುವಂತೆಯೂ ಸಮಿತಿ ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹೈಯರ್ ಸೆಕೆಂಡರಿ ತರಗತಿಗಳ ವಿಜ್ಞಾನ ಕೋರ್ಸ್‌ಗಳಲ್ಲಿ ಮೀಸಲಾತಿ ನೀಡುವುದು ಇನ್ನೊಂದು ಮುಖ್ಯ ಶಿಫಾರಸು ಆಗಿದೆ. ಇದಲ್ಲದೆ, ಸಾಮಾಜಿಕ ಅನಿಷ್ಟಗಳನ್ನು ಎದುರಿಸಲು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳೊಂದಿಗೆ ಸಾಮಾಜಿಕ ನ್ಯಾಯ ವಿದ್ಯಾರ್ಥಿ ಪಡೆ (ಎಸ್‌ಜೆಎಸ್‌ಎಫ್‌) ರಚನೆಗೆ ಸಮಿತಿಯು ಶಿಫಾರಸು ಮಾಡಿದೆ. ಶಿಕ್ಷಣದ ಕೇಸರಿಕರಣ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ನುಸುಳುವ, ಜಾತಿ ಮತ್ತು ಕೋಮು ಸೌಹಾರ್ದತೆಗೆ ಅಡ್ಡಿಪಡಿಸುವ ಚಟುವಟಿಕೆಗಳ ಆರೋಪಗಳ ಬಗ್ಗೆ ತನಿಖೆ ನಡೆಸಲು ಪರಿಣಿತ ಸಂಸ್ಥೆ ಅಥವಾ ಏಜೆನ್ಸಿಯನ್ನು ರಚಿಸುವಂತೆಯೂ ಸೂಚಿಸಲಾಗಿದೆ.

ಇದಲ್ಲದೆ, ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಸಾಮಾನ್ಯ ನೀತಿ ಸಂಹಿತೆ ಜಾರಿಗೊಳಿಸಬೇಕು. ನೇಮಕಾತಿಗೂ ಮುನ್ನ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗೆಗಿನ ಅವರ ಮನೋಭಾವವನ್ನು ಶಿಕ್ಷಕರ ನೇಮಕಾತಿ ಮಂಡಳಿ (ಟಿಆರ್‌ಬಿ) ಖಚಿತಪಡಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗಕ್ಕೆ ಸಾಮಾಜಿಕ ಸಮಸ್ಯೆಗಳು, ಜಾತಿ ತಾರತಮ್ಯ, ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ದ್ರವ್ಯಗಳು, ರ‍್ಯಾಗಿಂಗ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳು ಮತ್ತು ಅವುಗಳ ಉಲ್ಲಂಘಣೆಯ ಪರಿಣಾಮಗಳ ಬಗ್ಗೆ ತಿಳಿಸಬೇಕು ಎಂದು ಹೇಳಿವೆ.

ಪ್ರತಿ ವಿಭಾಗಕ್ಕೆ ಒಬ್ಬ ಸಮಾಲೋಚಕರನ್ನು ನೇಮಿಸಬೇಕು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಪ್ರತಿ ಪ್ರೌಢ ಶಾಲೆಗೆ ಶಾಲಾ ಕಲ್ಯಾಣಾಧಿಕಾರಿ (ಎಸ್‌ಡಬ್ಲ್ಯುಒ) ಹುದ್ದೆಯನ್ನು ರಚಿಸಬೇಕು. ಕಲ್ಯಾಣಾಧಿಕಾರಿ ರ‍್ಯಾಗಿಂಗ್, ಡ್ರಗ್ಸ್ ಬೆದರಿಕೆ, ಲೈಂಗಿಕ ದೌರ್ಜನ್ಯ ಮತ್ತು ಜಾತಿ ತಾರತಮ್ಯಕ್ಕೆ ಸಂಬಂಧಿಸಿದ ಅಪರಾಧಗಳ ವಿಷಯಗಳ ಬಗ್ಗೆ ಶಾಲೆಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಬೇಕು. ಕಾನೂನು ಪ್ರಕಾರ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಶಾಲಾ ಆಡಳಿತದ ವಿರುದ್ಧ ದೂರುಗಳಿದ್ದಲ್ಲಿ ಕಲ್ಯಾಣಾಧಿಕಾರಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಎಸ್‌ಸಿಪಿಸಿಆರ್‌) ದೂರು ಸಲ್ಲಿಸಬೇಕು. ಜಾತಿ ತಾರತಮ್ಯ ಮತ್ತು ಇತರ ಅನ್ಯಾಯದ ಆಚರಣೆಗಳ ಬಗ್ಗೆ ಶಿಕ್ಷಕರು ಮತ್ತು ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

2023ರ ಆಗಸ್ಟ್‌ನಲ್ಲಿ ನಂಗುನೇರಿಯಲ್ಲಿಆರು ಮಂದಿ ಅಪ್ರಾಪ್ತರ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಇಬ್ಬರು ದಲಿತ ಮಕ್ಕಳ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಸಮಿತಿ ರಚಿಸಲಾಗಿತ್ತು.

ಚಿನ್ನದೊರೈ ಎಂಬ ದಲಿತ ಬಾಲಕ ಕಲಿಕೆಯಲ್ಲಿ ಮುಂದಿದ್ದಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲಾಗಿತ್ತು. ದಾಳಿಯ ವೇಳೆ ಚಿನ್ನದೊರೈ ಸಹಾಯಕ್ಕೆ ಹೋದ ಸಹೋದರನಿಗೆ ಗಾಯಗಳಾಗಿತ್ತು.

ಈ ಹಿಂದೆ, ತಮಿಳುನಾಡಿನ ಜೆಜೆ ಕಾಯಿದೆಯಡಿಯ ಕೇಂದ್ರಗಳ ಕಾರ್ಯಗಳನ್ನು ಪರಿಶೀಲಿಸಲು ಮತ್ತು ಅವುಗಳ ದಕ್ಷತೆಯನ್ನು ಸುಧಾರಿಸುವ ಮಾರ್ಗಗಳನ್ನು ಸೂಚಿಸಲು ಸರ್ಕಾರವು ನಿವೃತ್ತ ನ್ಯಾಯಮೂರ್ತಿಗೆ ಜವಬ್ದಾರಿ ನೀಡಿತ್ತು. ಅದರ ವರದಿಯನ್ನು ನವೆಂಬರ್ 15, 2023 ರಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ : ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...