Homeಮುಖಪುಟಸಂಸತ್ತಿನಲ್ಲಿ ಸಕ್ರಿಯವಾಗಿ, ಜನರಿಗೆ ಹತ್ತಿರವಾಗಬೇಕು; ರಾಹುಲ್ ಗಾಂಧಿಗೆ ದಿಗ್ವಿಜಯ್ ಸಿಂಗ್ ಸಲಹೆ

ಸಂಸತ್ತಿನಲ್ಲಿ ಸಕ್ರಿಯವಾಗಿ, ಜನರಿಗೆ ಹತ್ತಿರವಾಗಬೇಕು; ರಾಹುಲ್ ಗಾಂಧಿಗೆ ದಿಗ್ವಿಜಯ್ ಸಿಂಗ್ ಸಲಹೆ

ಕಾಂಗ್ರೆಸ್ಸಿನ ಹಲವಾರು ನಾಯಕರು ತಮ್ಮದೇ ಆದ ಬೇಡಿಕೆಯೊಂದಿಗೆ ಮನವಿ ಮಾಡಿದರು.

- Advertisement -
- Advertisement -

ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥರಾಗಿ ಮರಳಿ ಅಧಿಕಾರ ವಹಿಸಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಖಂಡರು ಇಂದು, ಅವರ ಕುಟುಂಬ ಹಿನ್ನೆಲೆಯುಳ್ಳ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದರೊಂದಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ಸಿನ ಹಲವಾರು ನಾಯಕರು ತಮ್ಮದೇ ಆದ ಬೇಡಿಕೆಯೊಂದಿಗೆ ಮನವಿ ಮಾಡಿದರು. ಅವರಲ್ಲಿ ಗಾಂಧಿ ಕುಟುಂಬ ನಿಷ್ಠಾವಂತ ಮತ್ತು ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ 2018 ರಲ್ಲಿ ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳುವ ಮೊದಲು ಪಕ್ಷದ ಮುಖ್ಯಸ್ಥರ ಹುದ್ದೆಗೆ ಒಂದಕ್ಕಿಂತ ಹೆಚ್ಚು ಬಾರಿ ಅವರನ್ನು ಆಯ್ಕೆ ಮಾಡಿದ್ದರು.

ಸಂಸತ್ತಿನಲ್ಲಿ ಹೆಚ್ಚು ಸಕ್ರಿಯ ವಾಗಿರಬೇಕು ಎಂದು ರಾಹುಲ್ ಗಾಂಧಿಗೆ ಹೇಳಿದರು. ಅವರು ಜನರಿಗೆ ಹೆಚ್ಚು ಹತ್ತಿರವಾಗಬೇಕು ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರ ಸಾಮೂಹಿಕ ಸಂಪರ್ಕದ ಕೊರತೆಯ ಟೀಕೆಗಳನ್ನು ಮೌನವಾಗಿ ಒಪ್ಪಿ, ಸಲಹೆ ನಿಡಿದ್ದಾರೆ.

ಈ ಮೂಲಕ ಶರದ್ ಪವಾರ್ ರಾಹುಲ್ ಗಾಂಧಿಗೆ ನೀಡಿದ ಸಲಹೆಯನ್ನು ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

“ರಾಹುಲ್ ರಾಜಕೀಯವನ್ನು ವಿಭಿನ್ನವಾಗಿ ಮಾಡಲು ಬಯಸುತ್ತಾನೆ. ನಾವು ಅವನಿಗೆ ಹಾಗೆ ಮಾಡಲು ಅವಕಾಶ ನೀಡಬೇಕು. ಆದರೆ ನಂತರ ಆತ ಸಂಸತ್ತಿನಲ್ಲಿ ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಜನರಿಗೆ ಹೆಚ್ಚು ಹತ್ತಿರವಾಬೇಕೆಂದು ನಾವು ಬಯಸುತ್ತೇವೆ. ಶರದ್ ಪವಾರ್ ಅವರ ಸಲಹೆಯಂತೆ ಅವರು ಭಾರತದಾದ್ಯಂತ ಯಾತ್ರೆ ಹೋಗಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗುರುವಾರ, ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥರಾಗಿ ಮರಳಬೇಕೆಂದು ಕರೆ ನೀಡಿ, ಕಳೆದ ಯುಪಿಎ ಸರ್ಕಾರದ ಭಾಗವಾಗಿದ್ದವರು ಪಕ್ಷದ ಶೀಘ್ರ ಕುಸಿತಕ್ಕೆ ಕಾರಣವೆಂದು ಕಿರಿಯ ನಾಯಕರು ವಾದಿಸಿದರು.

ಹತ್ತು ವರ್ಷ ಆಡಳಿತ ನಡೆಸಿದ್ದ ಯುಪಿಎ 2014ರಲ್ಲಿ ಅಧಿಕಾರವನ್ನು ಕಳೆದುಕೊಂಡಿತ್ತು. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸಹ ತೀರಾ ಕಡಿಮೆ ಸಂಖ್ಯೆಯ ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಹುಲ್ ಗಾಂಧಿ ಕೂಡ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು.

ನಂತರ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಪಕ್ಷದ ಆಂತರಿಕ ಸಭೆಯಲ್ಲಿ ಹಲವಾರು ಭಿನ್ನ ಅಭಿಪ್ರಾಯಗಳು ಹೊರ ಬಂದವು.

2014ರ ಚುನಾವಣೆಯ ಸೋಲು, 2019ರ ಸೋಲು, ನಾಯಕತ್ವ, ಹಿರಿಯರು-ಕಿರಿಯರ ನಡುವಿನ ಭಿನ್ನಾಭಿಪ್ರಾಯ, ಮನಮೋಹನ್ ಸಿಂಗ್, ಕೊರೊನಾ ಪರಿಸ್ಥಿತಿಯಲ್ಲಿ  ಪಕ್ಷದ ಕೆಲಸ, ಬಿಜೆಪಿ ವಿರುದ್ಧದ ದಾಳಿ ಮುಂತಾದ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ.

ಆದರೆ ಈಗ ನಾವು ಬಿಜೆಪಿ, ಆರ್ ಎಸ್ ಎಸ್, ಮೋದಿ-ಶಾ ವಿರುದ್ದ ಹೋರಾಡುವಲ್ಲಿ ಒಂದಾಗಬೇಕು. ಇದಕ್ಕಾಗಿ ಒಮ್ಮತದ ಅಭಿಪ್ರಾಯ ಇರಬೇಕು ಎಂದು ತಮಿಳುನಾಡಿನ ಕಿರಿಯ ಕಾಂಗ್ರೇಸ್ ನಾಯಕ ಮಾಣಿಕ್ಕಂ ಠಾಗೋರ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: BCG ಲಸಿಕೆ ಕೊರೊನಾ ಹರಡುವಿಕೆಯನ್ನು ನಿಧಾನಗೊಳಿಸಬಹುದು: ವಿಜ್ಞಾನಿಗಳ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...