Homeಮುಖಪುಟಸಂಸತ್ತಿನಲ್ಲಿ ಸಕ್ರಿಯವಾಗಿ, ಜನರಿಗೆ ಹತ್ತಿರವಾಗಬೇಕು; ರಾಹುಲ್ ಗಾಂಧಿಗೆ ದಿಗ್ವಿಜಯ್ ಸಿಂಗ್ ಸಲಹೆ

ಸಂಸತ್ತಿನಲ್ಲಿ ಸಕ್ರಿಯವಾಗಿ, ಜನರಿಗೆ ಹತ್ತಿರವಾಗಬೇಕು; ರಾಹುಲ್ ಗಾಂಧಿಗೆ ದಿಗ್ವಿಜಯ್ ಸಿಂಗ್ ಸಲಹೆ

ಕಾಂಗ್ರೆಸ್ಸಿನ ಹಲವಾರು ನಾಯಕರು ತಮ್ಮದೇ ಆದ ಬೇಡಿಕೆಯೊಂದಿಗೆ ಮನವಿ ಮಾಡಿದರು.

- Advertisement -
- Advertisement -

ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥರಾಗಿ ಮರಳಿ ಅಧಿಕಾರ ವಹಿಸಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಖಂಡರು ಇಂದು, ಅವರ ಕುಟುಂಬ ಹಿನ್ನೆಲೆಯುಳ್ಳ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದರೊಂದಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ಸಿನ ಹಲವಾರು ನಾಯಕರು ತಮ್ಮದೇ ಆದ ಬೇಡಿಕೆಯೊಂದಿಗೆ ಮನವಿ ಮಾಡಿದರು. ಅವರಲ್ಲಿ ಗಾಂಧಿ ಕುಟುಂಬ ನಿಷ್ಠಾವಂತ ಮತ್ತು ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ 2018 ರಲ್ಲಿ ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳುವ ಮೊದಲು ಪಕ್ಷದ ಮುಖ್ಯಸ್ಥರ ಹುದ್ದೆಗೆ ಒಂದಕ್ಕಿಂತ ಹೆಚ್ಚು ಬಾರಿ ಅವರನ್ನು ಆಯ್ಕೆ ಮಾಡಿದ್ದರು.

ಸಂಸತ್ತಿನಲ್ಲಿ ಹೆಚ್ಚು ಸಕ್ರಿಯ ವಾಗಿರಬೇಕು ಎಂದು ರಾಹುಲ್ ಗಾಂಧಿಗೆ ಹೇಳಿದರು. ಅವರು ಜನರಿಗೆ ಹೆಚ್ಚು ಹತ್ತಿರವಾಗಬೇಕು ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರ ಸಾಮೂಹಿಕ ಸಂಪರ್ಕದ ಕೊರತೆಯ ಟೀಕೆಗಳನ್ನು ಮೌನವಾಗಿ ಒಪ್ಪಿ, ಸಲಹೆ ನಿಡಿದ್ದಾರೆ.

ಈ ಮೂಲಕ ಶರದ್ ಪವಾರ್ ರಾಹುಲ್ ಗಾಂಧಿಗೆ ನೀಡಿದ ಸಲಹೆಯನ್ನು ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

“ರಾಹುಲ್ ರಾಜಕೀಯವನ್ನು ವಿಭಿನ್ನವಾಗಿ ಮಾಡಲು ಬಯಸುತ್ತಾನೆ. ನಾವು ಅವನಿಗೆ ಹಾಗೆ ಮಾಡಲು ಅವಕಾಶ ನೀಡಬೇಕು. ಆದರೆ ನಂತರ ಆತ ಸಂಸತ್ತಿನಲ್ಲಿ ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಜನರಿಗೆ ಹೆಚ್ಚು ಹತ್ತಿರವಾಬೇಕೆಂದು ನಾವು ಬಯಸುತ್ತೇವೆ. ಶರದ್ ಪವಾರ್ ಅವರ ಸಲಹೆಯಂತೆ ಅವರು ಭಾರತದಾದ್ಯಂತ ಯಾತ್ರೆ ಹೋಗಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗುರುವಾರ, ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥರಾಗಿ ಮರಳಬೇಕೆಂದು ಕರೆ ನೀಡಿ, ಕಳೆದ ಯುಪಿಎ ಸರ್ಕಾರದ ಭಾಗವಾಗಿದ್ದವರು ಪಕ್ಷದ ಶೀಘ್ರ ಕುಸಿತಕ್ಕೆ ಕಾರಣವೆಂದು ಕಿರಿಯ ನಾಯಕರು ವಾದಿಸಿದರು.

ಹತ್ತು ವರ್ಷ ಆಡಳಿತ ನಡೆಸಿದ್ದ ಯುಪಿಎ 2014ರಲ್ಲಿ ಅಧಿಕಾರವನ್ನು ಕಳೆದುಕೊಂಡಿತ್ತು. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸಹ ತೀರಾ ಕಡಿಮೆ ಸಂಖ್ಯೆಯ ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಹುಲ್ ಗಾಂಧಿ ಕೂಡ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು.

ನಂತರ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಪಕ್ಷದ ಆಂತರಿಕ ಸಭೆಯಲ್ಲಿ ಹಲವಾರು ಭಿನ್ನ ಅಭಿಪ್ರಾಯಗಳು ಹೊರ ಬಂದವು.

2014ರ ಚುನಾವಣೆಯ ಸೋಲು, 2019ರ ಸೋಲು, ನಾಯಕತ್ವ, ಹಿರಿಯರು-ಕಿರಿಯರ ನಡುವಿನ ಭಿನ್ನಾಭಿಪ್ರಾಯ, ಮನಮೋಹನ್ ಸಿಂಗ್, ಕೊರೊನಾ ಪರಿಸ್ಥಿತಿಯಲ್ಲಿ  ಪಕ್ಷದ ಕೆಲಸ, ಬಿಜೆಪಿ ವಿರುದ್ಧದ ದಾಳಿ ಮುಂತಾದ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ.

ಆದರೆ ಈಗ ನಾವು ಬಿಜೆಪಿ, ಆರ್ ಎಸ್ ಎಸ್, ಮೋದಿ-ಶಾ ವಿರುದ್ದ ಹೋರಾಡುವಲ್ಲಿ ಒಂದಾಗಬೇಕು. ಇದಕ್ಕಾಗಿ ಒಮ್ಮತದ ಅಭಿಪ್ರಾಯ ಇರಬೇಕು ಎಂದು ತಮಿಳುನಾಡಿನ ಕಿರಿಯ ಕಾಂಗ್ರೇಸ್ ನಾಯಕ ಮಾಣಿಕ್ಕಂ ಠಾಗೋರ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: BCG ಲಸಿಕೆ ಕೊರೊನಾ ಹರಡುವಿಕೆಯನ್ನು ನಿಧಾನಗೊಳಿಸಬಹುದು: ವಿಜ್ಞಾನಿಗಳ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...