Homeಅಂಕಣಗಳುಜನಪರ ಹೋರಾಟಗಾರರ ಅಕ್ರಮ ಬಂಧನ

ಜನಪರ ಹೋರಾಟಗಾರರ ಅಕ್ರಮ ಬಂಧನ

- Advertisement -
- Advertisement -

| ಗೌರಿ ಲಂಕೇಶ್
ಜೂನ್ 3, 2009 (ಸಂಪಾದಕೀಯದಿಂದ) |

ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ ನೀಡಬೇಕೆನಿಸುತ್ತಿದೆ.
ಮೊದಲನೆಯದು ಇಬ್ಬರು ಖ್ಯಾತ ಅಮೆರಿಕನ್ನರ ನಡುವೆ ಸಂಭವಿಸಿದ್ದು.
ಮೆಕ್ಸಿಕೋ ದೇಶದ ಮೇಲೆ ಅಮೆರಿಕ ದಾಳಿ ಮಾಡಿದಾಗ ಖ್ಯಾತ ನಿಸರ್ಗವಾದಿ ಹೆನ್ರಿ ಥೋರೊ ಅದನ್ನು ಪ್ರತಿಭಟಿಸಿದರಲ್ಲದೆ, ತಮ್ಮ ಸರ್ಕಾರದ ನಿಲುವಿನ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ತೆರಿಗೆಗಳನ್ನು ಕಟ್ಟಲು ನಿರಾಕರಿಸಿದ್ದರು. ಆಗ ಅಮೆರಿಕನ್ ಸರ್ಕಾರ ಥೋರೊ ಅವರನ್ನು ಬಂಧಿಸಿ ಜೈಲಿಗಟ್ಟಿತು.
ಥೋರೊ ಅವರ ಸ್ನೇಹಿತ ಮತ್ತು ಹಿತೈಷಿಯಾಗಿದ್ದ ಹಾರ್ವರ್ಡ್ ವಿಶ್ವವಿದ್ಯಾಲಯದ ಖ್ಯಾತ ಬರಹಗಾರ ರಾಲ್ಫನಾಲ್ವ ಎಮರ್ಸನ್ ಥೋರೊರನ್ನು ನೋಡಲು ಜೈಲಿಗೆ ಬಂದರು. ಜೈಲಿನ ಸರಳುಗಳ ಹಿಂದಿದ್ದ ಥೋರೊ ಅವರನ್ನು ಕಂಡು ಎಮರ್ಸನ್ ಅವರು “ನೀನು ಇದರೊಳಗೆ ಏನು ಮಾಡುತ್ತಿದ್ದೀಯಾ?” ಎಂದು ಕೇಳಿದರು. ಆಗ ಥೋರೊ “ನೀನು ಹೊರಗಡೆ ಏನು ಮಾಡುತ್ತಿದ್ದೀಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಉತ್ತರಿಸಿದರು. ಅದನ್ನು ಕೇಳಿ ಎಮರ್ಸನ್‍ರವರ ಮುಖ ನಾಚಿಕೆಯಿಂದ ಕೆಂಪೇರಿತು.
ಅಂದರೆ, ತನ್ನಂಥವರನ್ನೇ ಸರ್ಕಾರ ಬಂಧಿಸಿರುವಾಗ ಎಮರ್ಸನ್ ಥರದ ಜನ ಹೊರಗಡೆ ಏನು ಮಾಡುತ್ತಿದ್ದಾರೆ ಎಂಬುದೇ ಥೋರೊ ಅವರ ಪ್ರಶ್ನೆಯಾಗಿತ್ತು.
ಎರಡನೆ ಸಂಗತಿ ಎರಡು ರೀತಿಯ ಜನರ ಪಟ್ಟಿಗಳಿಗೆ ಸಂಬಂಧಪಟ್ಟಿದ್ದು.
ಮೊದಲನೆ ಪಟ್ಟಿಯಲ್ಲಿ ಸಾಕ್ರೆಟೀಸ್, ನೆಲ್ಸನ್ ಮಂಡೇಲ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಜಯಪ್ರಕಾಶ್ ನಾರಾಯಣ್, ಫೈಜ್ ಅಹಮ್ಮದ್ ಫೈಜ್, ಬಿನಾಯಕ್ ಸೇನ್, ಇರೋಮ್ ಶರ್ಮಿಳಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಹೆನ್ರಿ ಥೋರೊ ಮತ್ತು ಫ್ರೆಡೋರ್ ದಸ್ತೋವಸ್ಕಿ ತರಹದ ಜನ ಇದ್ದಾರೆ. ಅವರೆಲ್ಲರ ನಡುವೆ ಒಂದು ಸಾಮ್ಯತೆ ಇದೆ. ಆ ಸಾಮ್ಯತೆ ಏನು?
ಎರಡನೆ ಪಟ್ಟಿಯಲ್ಲಿ ಒಸಾಮಾ ಬಿನ್ ಲಾಡನ್, ಜಗದೀಶ್ ಟೈಟ್ಲರ್, ಸಜ್ಜನ ಕುಮಾರ್, ನರೇಂದ್ರ ಮೋದಿ, ಜ್ಯೋತಿ ಬಸು, ಬಾಳಾ ಠಾಕ್ರೆ, ಜಾರ್ಜ್ ಬುಷ್, ಟೋನಿ ಬ್ಲೇರ್, ಡೊನಾಲ್ಡ್ ರಮ್ಸ್‍ಫೆಲ್ಟ್, ಡಿಕ್ ಚೆನಿ, ಹಿಟ್ಲರ್ ಮತ್ತು ಜೋಸೆಫ್ ಸ್ಟಾಲಿನ್ ಥರದವರಿದ್ದಾರೆ. ಇವರೆಲ್ಲರ ನಡುವೆಯೂ ಒಂದು ರೀತಿಯ ಸಾಮ್ಯತೆ ಇದೆ. ಈ ಸಾಮ್ಯತೆ ಏನು?
ಮೊದಲನೆ ಪಟ್ಟಿಯಲ್ಲಿರುವವರೆಲ್ಲರೂ ಸರ್ಕಾರ ನಡೆಸುತ್ತಿದ್ದ ಅನ್ಯಾಯಗಳನ್ನು ಪ್ರತಿಭಟಿಸಿದ್ದಕ್ಕೆ ಜೈಲಿಗೆ ದೂಡಲ್ಪಟ್ಟವರು. ಎರಡನೇ ಪಟ್ಟಿಯಲ್ಲಿರುವವರು ಸಾಮೂಹಿಕ ಮಾರಣಹೋಮಕ್ಕೆ ಕಾರಣೀಭೂತರಾಗಿದ್ದರೂ, ಎಂದೂ ಶಿಕ್ಷೆಗೆ ಗುರಿಯಾಗದೆ ಸಮಾಜದಲ್ಲಿ ಮೆರೆದವರು.
ಶ್ರೀವಾಸ್ತವ ಅವರ ಲೇಖನದಲ್ಲಿನ ಮೂರನೆ ಸಂಗತಿ ದಾಮೋದರ್ ರಥ್ ಎಂಬಾತನನ್ನು ಕುರಿತದ್ದು, ಒರಿಸ್ಸಾದ ಭಿನ್ನಮತೀಯರಾದ ರಥ್ ಅವರು ಕೆಲ ವರ್ಷಗಳ ಹಿಂದೆ ಒಂದು ಜೈಲಿನ ಬಾಗಿಲಲ್ಲಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರ ಬೇಡಿಕೆ ಏನಾಗಿತ್ತೆಂದರೆ ಒರಿಸ್ಸಾ ಸರ್ಕಾರ ತನ್ನ ಪೆದ್ದುತನದಿಂದಾಗಿ ಹಲವಾರು ಅಮಾಯಕ ಜನರನ್ನು ಅಕ್ರಮಬಾಗಿ ಜೈಲಿನಲ್ಲಿಟ್ಟಿದ್ದರಿಂದ ತನ್ನನ್ನೂ ಜೈಲಿನಲ್ಲಿ ಬಂಧಿಸಬೇಕೆಂಬುದೇ ಆಗಿತ್ತು.
ರಥ್‍ರವರು ಹೀಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಹತ್ತು ದಿನಗಳ ಕಾಲ ಮುಂದುವರೆಸಿದಾಗ ಕೊನೆಗೂ ಜೈಲಧಿಕಾರಿಯೊಬ್ಬ ಬಂದು “ನೀನು ಯಾಕೆ ಇಷ್ಟು ಕಷ್ಟ ಅನುಭವಿಸುತ್ತಿದ್ದೀಯಾ?” ಎಂದು ಕೇಳಿದ. ಆಗ ರಥ್ “ಜೈಲಿನ ಹೊರಗಡೆಗಿಂತ ಜೈಲಿನೊಳಗೇ ಉತ್ತಮ ಜನರಿದ್ದಾರೆ. ಅದಕ್ಕೆ” ಎಂದು ಉತ್ತರಿಸಿದರು. ಮರುಕ್ಷಣವೇ ರಥ್‍ರವರ ಮಿತ್ರರನ್ನು ಬಂಧಮುಕ್ತರನ್ನಾಗಿಸಲಾಯಿತು.
ಶ್ರೀವಾಸ್ತವ ಅವರ ಲೇಖನದ ಸಾರಾಂಶ ಇವತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ನೆಪದಲ್ಲಿ ಸರ್ಕಾರಗಳು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ತೊಡಗಿದೆ. ಆದರೆ ನಾವು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದ್ದರೆ ಸರ್ಕಾರವೇ ಭಯೋತ್ಪಾದಕನಂತೆ ವರ್ತಿಸುವುದನ್ನು ನಾವೆಲ್ಲರೂ ಜೊತೆಗೂಡಿ ತಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...