Homeಅಂಕಣಗಳುಜನಪರ ಹೋರಾಟಗಾರರ ಅಕ್ರಮ ಬಂಧನ

ಜನಪರ ಹೋರಾಟಗಾರರ ಅಕ್ರಮ ಬಂಧನ

- Advertisement -
- Advertisement -

| ಗೌರಿ ಲಂಕೇಶ್
ಜೂನ್ 3, 2009 (ಸಂಪಾದಕೀಯದಿಂದ) |

ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ ನೀಡಬೇಕೆನಿಸುತ್ತಿದೆ.
ಮೊದಲನೆಯದು ಇಬ್ಬರು ಖ್ಯಾತ ಅಮೆರಿಕನ್ನರ ನಡುವೆ ಸಂಭವಿಸಿದ್ದು.
ಮೆಕ್ಸಿಕೋ ದೇಶದ ಮೇಲೆ ಅಮೆರಿಕ ದಾಳಿ ಮಾಡಿದಾಗ ಖ್ಯಾತ ನಿಸರ್ಗವಾದಿ ಹೆನ್ರಿ ಥೋರೊ ಅದನ್ನು ಪ್ರತಿಭಟಿಸಿದರಲ್ಲದೆ, ತಮ್ಮ ಸರ್ಕಾರದ ನಿಲುವಿನ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ತೆರಿಗೆಗಳನ್ನು ಕಟ್ಟಲು ನಿರಾಕರಿಸಿದ್ದರು. ಆಗ ಅಮೆರಿಕನ್ ಸರ್ಕಾರ ಥೋರೊ ಅವರನ್ನು ಬಂಧಿಸಿ ಜೈಲಿಗಟ್ಟಿತು.
ಥೋರೊ ಅವರ ಸ್ನೇಹಿತ ಮತ್ತು ಹಿತೈಷಿಯಾಗಿದ್ದ ಹಾರ್ವರ್ಡ್ ವಿಶ್ವವಿದ್ಯಾಲಯದ ಖ್ಯಾತ ಬರಹಗಾರ ರಾಲ್ಫನಾಲ್ವ ಎಮರ್ಸನ್ ಥೋರೊರನ್ನು ನೋಡಲು ಜೈಲಿಗೆ ಬಂದರು. ಜೈಲಿನ ಸರಳುಗಳ ಹಿಂದಿದ್ದ ಥೋರೊ ಅವರನ್ನು ಕಂಡು ಎಮರ್ಸನ್ ಅವರು “ನೀನು ಇದರೊಳಗೆ ಏನು ಮಾಡುತ್ತಿದ್ದೀಯಾ?” ಎಂದು ಕೇಳಿದರು. ಆಗ ಥೋರೊ “ನೀನು ಹೊರಗಡೆ ಏನು ಮಾಡುತ್ತಿದ್ದೀಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಉತ್ತರಿಸಿದರು. ಅದನ್ನು ಕೇಳಿ ಎಮರ್ಸನ್‍ರವರ ಮುಖ ನಾಚಿಕೆಯಿಂದ ಕೆಂಪೇರಿತು.
ಅಂದರೆ, ತನ್ನಂಥವರನ್ನೇ ಸರ್ಕಾರ ಬಂಧಿಸಿರುವಾಗ ಎಮರ್ಸನ್ ಥರದ ಜನ ಹೊರಗಡೆ ಏನು ಮಾಡುತ್ತಿದ್ದಾರೆ ಎಂಬುದೇ ಥೋರೊ ಅವರ ಪ್ರಶ್ನೆಯಾಗಿತ್ತು.
ಎರಡನೆ ಸಂಗತಿ ಎರಡು ರೀತಿಯ ಜನರ ಪಟ್ಟಿಗಳಿಗೆ ಸಂಬಂಧಪಟ್ಟಿದ್ದು.
ಮೊದಲನೆ ಪಟ್ಟಿಯಲ್ಲಿ ಸಾಕ್ರೆಟೀಸ್, ನೆಲ್ಸನ್ ಮಂಡೇಲ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಜಯಪ್ರಕಾಶ್ ನಾರಾಯಣ್, ಫೈಜ್ ಅಹಮ್ಮದ್ ಫೈಜ್, ಬಿನಾಯಕ್ ಸೇನ್, ಇರೋಮ್ ಶರ್ಮಿಳಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಹೆನ್ರಿ ಥೋರೊ ಮತ್ತು ಫ್ರೆಡೋರ್ ದಸ್ತೋವಸ್ಕಿ ತರಹದ ಜನ ಇದ್ದಾರೆ. ಅವರೆಲ್ಲರ ನಡುವೆ ಒಂದು ಸಾಮ್ಯತೆ ಇದೆ. ಆ ಸಾಮ್ಯತೆ ಏನು?
ಎರಡನೆ ಪಟ್ಟಿಯಲ್ಲಿ ಒಸಾಮಾ ಬಿನ್ ಲಾಡನ್, ಜಗದೀಶ್ ಟೈಟ್ಲರ್, ಸಜ್ಜನ ಕುಮಾರ್, ನರೇಂದ್ರ ಮೋದಿ, ಜ್ಯೋತಿ ಬಸು, ಬಾಳಾ ಠಾಕ್ರೆ, ಜಾರ್ಜ್ ಬುಷ್, ಟೋನಿ ಬ್ಲೇರ್, ಡೊನಾಲ್ಡ್ ರಮ್ಸ್‍ಫೆಲ್ಟ್, ಡಿಕ್ ಚೆನಿ, ಹಿಟ್ಲರ್ ಮತ್ತು ಜೋಸೆಫ್ ಸ್ಟಾಲಿನ್ ಥರದವರಿದ್ದಾರೆ. ಇವರೆಲ್ಲರ ನಡುವೆಯೂ ಒಂದು ರೀತಿಯ ಸಾಮ್ಯತೆ ಇದೆ. ಈ ಸಾಮ್ಯತೆ ಏನು?
ಮೊದಲನೆ ಪಟ್ಟಿಯಲ್ಲಿರುವವರೆಲ್ಲರೂ ಸರ್ಕಾರ ನಡೆಸುತ್ತಿದ್ದ ಅನ್ಯಾಯಗಳನ್ನು ಪ್ರತಿಭಟಿಸಿದ್ದಕ್ಕೆ ಜೈಲಿಗೆ ದೂಡಲ್ಪಟ್ಟವರು. ಎರಡನೇ ಪಟ್ಟಿಯಲ್ಲಿರುವವರು ಸಾಮೂಹಿಕ ಮಾರಣಹೋಮಕ್ಕೆ ಕಾರಣೀಭೂತರಾಗಿದ್ದರೂ, ಎಂದೂ ಶಿಕ್ಷೆಗೆ ಗುರಿಯಾಗದೆ ಸಮಾಜದಲ್ಲಿ ಮೆರೆದವರು.
ಶ್ರೀವಾಸ್ತವ ಅವರ ಲೇಖನದಲ್ಲಿನ ಮೂರನೆ ಸಂಗತಿ ದಾಮೋದರ್ ರಥ್ ಎಂಬಾತನನ್ನು ಕುರಿತದ್ದು, ಒರಿಸ್ಸಾದ ಭಿನ್ನಮತೀಯರಾದ ರಥ್ ಅವರು ಕೆಲ ವರ್ಷಗಳ ಹಿಂದೆ ಒಂದು ಜೈಲಿನ ಬಾಗಿಲಲ್ಲಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರ ಬೇಡಿಕೆ ಏನಾಗಿತ್ತೆಂದರೆ ಒರಿಸ್ಸಾ ಸರ್ಕಾರ ತನ್ನ ಪೆದ್ದುತನದಿಂದಾಗಿ ಹಲವಾರು ಅಮಾಯಕ ಜನರನ್ನು ಅಕ್ರಮಬಾಗಿ ಜೈಲಿನಲ್ಲಿಟ್ಟಿದ್ದರಿಂದ ತನ್ನನ್ನೂ ಜೈಲಿನಲ್ಲಿ ಬಂಧಿಸಬೇಕೆಂಬುದೇ ಆಗಿತ್ತು.
ರಥ್‍ರವರು ಹೀಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಹತ್ತು ದಿನಗಳ ಕಾಲ ಮುಂದುವರೆಸಿದಾಗ ಕೊನೆಗೂ ಜೈಲಧಿಕಾರಿಯೊಬ್ಬ ಬಂದು “ನೀನು ಯಾಕೆ ಇಷ್ಟು ಕಷ್ಟ ಅನುಭವಿಸುತ್ತಿದ್ದೀಯಾ?” ಎಂದು ಕೇಳಿದ. ಆಗ ರಥ್ “ಜೈಲಿನ ಹೊರಗಡೆಗಿಂತ ಜೈಲಿನೊಳಗೇ ಉತ್ತಮ ಜನರಿದ್ದಾರೆ. ಅದಕ್ಕೆ” ಎಂದು ಉತ್ತರಿಸಿದರು. ಮರುಕ್ಷಣವೇ ರಥ್‍ರವರ ಮಿತ್ರರನ್ನು ಬಂಧಮುಕ್ತರನ್ನಾಗಿಸಲಾಯಿತು.
ಶ್ರೀವಾಸ್ತವ ಅವರ ಲೇಖನದ ಸಾರಾಂಶ ಇವತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ನೆಪದಲ್ಲಿ ಸರ್ಕಾರಗಳು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ತೊಡಗಿದೆ. ಆದರೆ ನಾವು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದ್ದರೆ ಸರ್ಕಾರವೇ ಭಯೋತ್ಪಾದಕನಂತೆ ವರ್ತಿಸುವುದನ್ನು ನಾವೆಲ್ಲರೂ ಜೊತೆಗೂಡಿ ತಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....