Homeಅಂಕಣಗಳುಜನಪರ ಹೋರಾಟಗಾರರ ಅಕ್ರಮ ಬಂಧನ

ಜನಪರ ಹೋರಾಟಗಾರರ ಅಕ್ರಮ ಬಂಧನ

- Advertisement -
- Advertisement -

| ಗೌರಿ ಲಂಕೇಶ್
ಜೂನ್ 3, 2009 (ಸಂಪಾದಕೀಯದಿಂದ) |

ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ ನೀಡಬೇಕೆನಿಸುತ್ತಿದೆ.
ಮೊದಲನೆಯದು ಇಬ್ಬರು ಖ್ಯಾತ ಅಮೆರಿಕನ್ನರ ನಡುವೆ ಸಂಭವಿಸಿದ್ದು.
ಮೆಕ್ಸಿಕೋ ದೇಶದ ಮೇಲೆ ಅಮೆರಿಕ ದಾಳಿ ಮಾಡಿದಾಗ ಖ್ಯಾತ ನಿಸರ್ಗವಾದಿ ಹೆನ್ರಿ ಥೋರೊ ಅದನ್ನು ಪ್ರತಿಭಟಿಸಿದರಲ್ಲದೆ, ತಮ್ಮ ಸರ್ಕಾರದ ನಿಲುವಿನ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ತೆರಿಗೆಗಳನ್ನು ಕಟ್ಟಲು ನಿರಾಕರಿಸಿದ್ದರು. ಆಗ ಅಮೆರಿಕನ್ ಸರ್ಕಾರ ಥೋರೊ ಅವರನ್ನು ಬಂಧಿಸಿ ಜೈಲಿಗಟ್ಟಿತು.
ಥೋರೊ ಅವರ ಸ್ನೇಹಿತ ಮತ್ತು ಹಿತೈಷಿಯಾಗಿದ್ದ ಹಾರ್ವರ್ಡ್ ವಿಶ್ವವಿದ್ಯಾಲಯದ ಖ್ಯಾತ ಬರಹಗಾರ ರಾಲ್ಫನಾಲ್ವ ಎಮರ್ಸನ್ ಥೋರೊರನ್ನು ನೋಡಲು ಜೈಲಿಗೆ ಬಂದರು. ಜೈಲಿನ ಸರಳುಗಳ ಹಿಂದಿದ್ದ ಥೋರೊ ಅವರನ್ನು ಕಂಡು ಎಮರ್ಸನ್ ಅವರು “ನೀನು ಇದರೊಳಗೆ ಏನು ಮಾಡುತ್ತಿದ್ದೀಯಾ?” ಎಂದು ಕೇಳಿದರು. ಆಗ ಥೋರೊ “ನೀನು ಹೊರಗಡೆ ಏನು ಮಾಡುತ್ತಿದ್ದೀಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಉತ್ತರಿಸಿದರು. ಅದನ್ನು ಕೇಳಿ ಎಮರ್ಸನ್‍ರವರ ಮುಖ ನಾಚಿಕೆಯಿಂದ ಕೆಂಪೇರಿತು.
ಅಂದರೆ, ತನ್ನಂಥವರನ್ನೇ ಸರ್ಕಾರ ಬಂಧಿಸಿರುವಾಗ ಎಮರ್ಸನ್ ಥರದ ಜನ ಹೊರಗಡೆ ಏನು ಮಾಡುತ್ತಿದ್ದಾರೆ ಎಂಬುದೇ ಥೋರೊ ಅವರ ಪ್ರಶ್ನೆಯಾಗಿತ್ತು.
ಎರಡನೆ ಸಂಗತಿ ಎರಡು ರೀತಿಯ ಜನರ ಪಟ್ಟಿಗಳಿಗೆ ಸಂಬಂಧಪಟ್ಟಿದ್ದು.
ಮೊದಲನೆ ಪಟ್ಟಿಯಲ್ಲಿ ಸಾಕ್ರೆಟೀಸ್, ನೆಲ್ಸನ್ ಮಂಡೇಲ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಜಯಪ್ರಕಾಶ್ ನಾರಾಯಣ್, ಫೈಜ್ ಅಹಮ್ಮದ್ ಫೈಜ್, ಬಿನಾಯಕ್ ಸೇನ್, ಇರೋಮ್ ಶರ್ಮಿಳಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಹೆನ್ರಿ ಥೋರೊ ಮತ್ತು ಫ್ರೆಡೋರ್ ದಸ್ತೋವಸ್ಕಿ ತರಹದ ಜನ ಇದ್ದಾರೆ. ಅವರೆಲ್ಲರ ನಡುವೆ ಒಂದು ಸಾಮ್ಯತೆ ಇದೆ. ಆ ಸಾಮ್ಯತೆ ಏನು?
ಎರಡನೆ ಪಟ್ಟಿಯಲ್ಲಿ ಒಸಾಮಾ ಬಿನ್ ಲಾಡನ್, ಜಗದೀಶ್ ಟೈಟ್ಲರ್, ಸಜ್ಜನ ಕುಮಾರ್, ನರೇಂದ್ರ ಮೋದಿ, ಜ್ಯೋತಿ ಬಸು, ಬಾಳಾ ಠಾಕ್ರೆ, ಜಾರ್ಜ್ ಬುಷ್, ಟೋನಿ ಬ್ಲೇರ್, ಡೊನಾಲ್ಡ್ ರಮ್ಸ್‍ಫೆಲ್ಟ್, ಡಿಕ್ ಚೆನಿ, ಹಿಟ್ಲರ್ ಮತ್ತು ಜೋಸೆಫ್ ಸ್ಟಾಲಿನ್ ಥರದವರಿದ್ದಾರೆ. ಇವರೆಲ್ಲರ ನಡುವೆಯೂ ಒಂದು ರೀತಿಯ ಸಾಮ್ಯತೆ ಇದೆ. ಈ ಸಾಮ್ಯತೆ ಏನು?
ಮೊದಲನೆ ಪಟ್ಟಿಯಲ್ಲಿರುವವರೆಲ್ಲರೂ ಸರ್ಕಾರ ನಡೆಸುತ್ತಿದ್ದ ಅನ್ಯಾಯಗಳನ್ನು ಪ್ರತಿಭಟಿಸಿದ್ದಕ್ಕೆ ಜೈಲಿಗೆ ದೂಡಲ್ಪಟ್ಟವರು. ಎರಡನೇ ಪಟ್ಟಿಯಲ್ಲಿರುವವರು ಸಾಮೂಹಿಕ ಮಾರಣಹೋಮಕ್ಕೆ ಕಾರಣೀಭೂತರಾಗಿದ್ದರೂ, ಎಂದೂ ಶಿಕ್ಷೆಗೆ ಗುರಿಯಾಗದೆ ಸಮಾಜದಲ್ಲಿ ಮೆರೆದವರು.
ಶ್ರೀವಾಸ್ತವ ಅವರ ಲೇಖನದಲ್ಲಿನ ಮೂರನೆ ಸಂಗತಿ ದಾಮೋದರ್ ರಥ್ ಎಂಬಾತನನ್ನು ಕುರಿತದ್ದು, ಒರಿಸ್ಸಾದ ಭಿನ್ನಮತೀಯರಾದ ರಥ್ ಅವರು ಕೆಲ ವರ್ಷಗಳ ಹಿಂದೆ ಒಂದು ಜೈಲಿನ ಬಾಗಿಲಲ್ಲಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರ ಬೇಡಿಕೆ ಏನಾಗಿತ್ತೆಂದರೆ ಒರಿಸ್ಸಾ ಸರ್ಕಾರ ತನ್ನ ಪೆದ್ದುತನದಿಂದಾಗಿ ಹಲವಾರು ಅಮಾಯಕ ಜನರನ್ನು ಅಕ್ರಮಬಾಗಿ ಜೈಲಿನಲ್ಲಿಟ್ಟಿದ್ದರಿಂದ ತನ್ನನ್ನೂ ಜೈಲಿನಲ್ಲಿ ಬಂಧಿಸಬೇಕೆಂಬುದೇ ಆಗಿತ್ತು.
ರಥ್‍ರವರು ಹೀಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಹತ್ತು ದಿನಗಳ ಕಾಲ ಮುಂದುವರೆಸಿದಾಗ ಕೊನೆಗೂ ಜೈಲಧಿಕಾರಿಯೊಬ್ಬ ಬಂದು “ನೀನು ಯಾಕೆ ಇಷ್ಟು ಕಷ್ಟ ಅನುಭವಿಸುತ್ತಿದ್ದೀಯಾ?” ಎಂದು ಕೇಳಿದ. ಆಗ ರಥ್ “ಜೈಲಿನ ಹೊರಗಡೆಗಿಂತ ಜೈಲಿನೊಳಗೇ ಉತ್ತಮ ಜನರಿದ್ದಾರೆ. ಅದಕ್ಕೆ” ಎಂದು ಉತ್ತರಿಸಿದರು. ಮರುಕ್ಷಣವೇ ರಥ್‍ರವರ ಮಿತ್ರರನ್ನು ಬಂಧಮುಕ್ತರನ್ನಾಗಿಸಲಾಯಿತು.
ಶ್ರೀವಾಸ್ತವ ಅವರ ಲೇಖನದ ಸಾರಾಂಶ ಇವತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ನೆಪದಲ್ಲಿ ಸರ್ಕಾರಗಳು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ತೊಡಗಿದೆ. ಆದರೆ ನಾವು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದ್ದರೆ ಸರ್ಕಾರವೇ ಭಯೋತ್ಪಾದಕನಂತೆ ವರ್ತಿಸುವುದನ್ನು ನಾವೆಲ್ಲರೂ ಜೊತೆಗೂಡಿ ತಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...