Homeಚಳವಳಿಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

ಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

- Advertisement -
- Advertisement -

ಜನವರಿ 5 ರಂದು ಬುಧವಾರ ಸಾಮಾಜಿಕ ಹೋರಾಟಗಾರ್ತಿ ಬಿಂದು ಅಮ್ಮಿನಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಮೋಹನ್‌ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಶಬರಿಮಲೆಗೆ ಪ್ರವೇಶ ಮಾಡಿದ್ದ 10 ರಿಂದ 50 ವರ್ಷದೊಳಗಿನ ಮೊದಲ ಮಹಿಳೆಯರಲ್ಲಿ ಬಿಂದು ಅಮ್ಮಿನಿ ಕೂಡ ಒಬ್ಬರು.

ಆರೋಪಿ ಕೋಝಿಕ್ಕೋಡ್‌ನ ಥೋಡಿಯಿಲ್‌ನವರು. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಗುರುವಾರ ಕೋಝಿಕೋಡ್ ಜಿಲ್ಲೆಯ ವೆಲ್ಲಾಯಿಲ್ ಪೊಲೀಸರು ತಿಳಿಸಿದ್ದಾರೆ.

ಜನವರಿ 5 ರಂದು ಕೋಝಿಕ್ಕೋಡ್‌ನಲ್ಲಿ ಬಿಂಧು ಅಮ್ಮಿನಿ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದರು. ಈ ಹಲ್ಲೆಯ ವೀಡಿಯೊಗಳು ಮತ್ತು ಚಿತ್ರಗಳು ಸಾಕಷ್ಟು ವೈರಲ್ ಆಗಿದ್ದು, ದೃಶ್ಯದಲ್ಲಿ ಆರೋಪಿ ಬಿಂದು ಅವರ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ.

ಹೋರಾಟಗಾರ್ತಿ ಬಿಂದು ಅವರ ಮೇಲೆ ದಾಳಿಯಾಗುತ್ತಿರುವುದು ಇದು ಮೊದಲೇನಲ್ಲ. ಕಳೆದ ಡಿಸೆಂಬರ್‌ನಲ್ಲಿಯೂ ಆಕೆಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿತ್ತು. ಬಳಿಕ ಬಿಂದು ಕೊಯಿಲಾಂಡಿ ಪೊಲೀಸರಿಗೆ ದೂರು ನೀಡಿ, ತಾನು ಶಬರಿಮಲೆ ಅಭಿಯಾನ ನಡೆಸುತ್ತಿದ್ದ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಕೇರಳ: ತಂದೆ ಜೊತೆ ಶಬರಿಮಲೆಗೆ ತೆರಳಲು 9 ವರ್ಷದ ಬಾಲಕಿಗೆ ಹೈಕೋರ್ಟ್ ಅನುಮತಿ

“ನಾನು ಇನ್ನು ಮುಂದೆ ಇಲ್ಲಿ ಸುರಕ್ಷಿತವಾಗಿರಲಾರೆ, ದೇಶವನ್ನು ತೊರೆದು ಬೇರೆಡೆ ಆಶ್ರಯ ಪಡೆಯುವುದು ಒಂದೇ ನನ್ನ ಮುಂದಿನ ಆಯ್ಕೆಯಾಗಿದೆ” ಎಂದು ನೋವಿನಿಂದ ಬಿಂದು ಅಮ್ಮಿನಿ ಹೇಳಿದ್ದಾರೆ.

“ನಾನು ಶಬರಿಮಲೆಗೆ ಹೋಗಿ ಬಂದ ಬಳಿಕ ಇಂತಹ ದಾಳಿಗಳಿಗೆ ಒಳಗಾಗಿದ್ದೇನೆ. ನಿನ್ನೆಯ (ಜ.5) ಘಟನೆ ಕೂಡ ಪಿತೂರಿಯಿಂದ ಕೂಡಿದೆ. ಏಕೆಂದರೆ ನನ್ನನ್ನು ಎಲ್ಲಿ ನೋಡಿದರು ದಾಳಿ ಮಾಡುವಂತೆ ಎಲ್ಲಾ ಸಣ್ಣ ಮತ್ತು ದೊಡ್ಡ ಬಲಪಂಥೀಯ ಗುಂಪುಗಳಿಗೆ ಆದೇಶ ನೀಡಲಾಗಿದೆ. ನನ್ನ ಮೇಲೆ ದಾಳಿ ಮಾಡುವುದರಿಂದ ಅವರಿಗೆ ಬಹುಮಾನ ಮತ್ತು ಗೌರವ ಸಿಗುತ್ತದೆ” ಎಂದು ಬಿಂದು ಅಮ್ಮಿನಿ ಹೇಳಿದ್ದಾರೆ.

ಇದಲ್ಲದೆ, ’ರಾಜ್ಯದಲ್ಲಿ ಪೊಲೀಸರು ಸಂಘ ಪರಿವಾರದ ಪರವಾಗಿ ನಿಂತಿದ್ದಾರೆ. ತನ್ನ ಮೇಲಿನ ಯಾವುದೇ ದಾಳಿಯ ಬಗ್ಗೆ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ’ ಎಂದು ಬಿಂದು ಅಮ್ಮಿನಿ ಆರೋಪಿಸಿದ್ದಾರೆ.

ಸೆಪ್ಟೆಂಬರ್ 2018 ರಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ಮಾಡಲು ಅನುಮತಿಸಿದ ನಂತರ, ಜನವರಿ 2, 2019 ರಂದು ಬಿಂದು ಮತ್ತು ಕನಕ ದುರ್ಗೆ ಎಂಬ ಇಬ್ಬರು ಮಹಿಳೆಯರು ಶಬರಿಮಲೆ ದೇಗುಲಕ್ಕೆ ತೆರಳುವ ಮೂಲಕ ಇತಿಹಾಸ ನಿರ್ಮಿಸಿದ್ದರು.


ಇದನ್ನೂ ಓದಿ: ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...