Homeಚಳವಳಿಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

ಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

- Advertisement -
- Advertisement -

ಜನವರಿ 5 ರಂದು ಬುಧವಾರ ಸಾಮಾಜಿಕ ಹೋರಾಟಗಾರ್ತಿ ಬಿಂದು ಅಮ್ಮಿನಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಮೋಹನ್‌ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಶಬರಿಮಲೆಗೆ ಪ್ರವೇಶ ಮಾಡಿದ್ದ 10 ರಿಂದ 50 ವರ್ಷದೊಳಗಿನ ಮೊದಲ ಮಹಿಳೆಯರಲ್ಲಿ ಬಿಂದು ಅಮ್ಮಿನಿ ಕೂಡ ಒಬ್ಬರು.

ಆರೋಪಿ ಕೋಝಿಕ್ಕೋಡ್‌ನ ಥೋಡಿಯಿಲ್‌ನವರು. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಗುರುವಾರ ಕೋಝಿಕೋಡ್ ಜಿಲ್ಲೆಯ ವೆಲ್ಲಾಯಿಲ್ ಪೊಲೀಸರು ತಿಳಿಸಿದ್ದಾರೆ.

ಜನವರಿ 5 ರಂದು ಕೋಝಿಕ್ಕೋಡ್‌ನಲ್ಲಿ ಬಿಂಧು ಅಮ್ಮಿನಿ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದರು. ಈ ಹಲ್ಲೆಯ ವೀಡಿಯೊಗಳು ಮತ್ತು ಚಿತ್ರಗಳು ಸಾಕಷ್ಟು ವೈರಲ್ ಆಗಿದ್ದು, ದೃಶ್ಯದಲ್ಲಿ ಆರೋಪಿ ಬಿಂದು ಅವರ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ.

ಹೋರಾಟಗಾರ್ತಿ ಬಿಂದು ಅವರ ಮೇಲೆ ದಾಳಿಯಾಗುತ್ತಿರುವುದು ಇದು ಮೊದಲೇನಲ್ಲ. ಕಳೆದ ಡಿಸೆಂಬರ್‌ನಲ್ಲಿಯೂ ಆಕೆಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿತ್ತು. ಬಳಿಕ ಬಿಂದು ಕೊಯಿಲಾಂಡಿ ಪೊಲೀಸರಿಗೆ ದೂರು ನೀಡಿ, ತಾನು ಶಬರಿಮಲೆ ಅಭಿಯಾನ ನಡೆಸುತ್ತಿದ್ದ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಕೇರಳ: ತಂದೆ ಜೊತೆ ಶಬರಿಮಲೆಗೆ ತೆರಳಲು 9 ವರ್ಷದ ಬಾಲಕಿಗೆ ಹೈಕೋರ್ಟ್ ಅನುಮತಿ

“ನಾನು ಇನ್ನು ಮುಂದೆ ಇಲ್ಲಿ ಸುರಕ್ಷಿತವಾಗಿರಲಾರೆ, ದೇಶವನ್ನು ತೊರೆದು ಬೇರೆಡೆ ಆಶ್ರಯ ಪಡೆಯುವುದು ಒಂದೇ ನನ್ನ ಮುಂದಿನ ಆಯ್ಕೆಯಾಗಿದೆ” ಎಂದು ನೋವಿನಿಂದ ಬಿಂದು ಅಮ್ಮಿನಿ ಹೇಳಿದ್ದಾರೆ.

“ನಾನು ಶಬರಿಮಲೆಗೆ ಹೋಗಿ ಬಂದ ಬಳಿಕ ಇಂತಹ ದಾಳಿಗಳಿಗೆ ಒಳಗಾಗಿದ್ದೇನೆ. ನಿನ್ನೆಯ (ಜ.5) ಘಟನೆ ಕೂಡ ಪಿತೂರಿಯಿಂದ ಕೂಡಿದೆ. ಏಕೆಂದರೆ ನನ್ನನ್ನು ಎಲ್ಲಿ ನೋಡಿದರು ದಾಳಿ ಮಾಡುವಂತೆ ಎಲ್ಲಾ ಸಣ್ಣ ಮತ್ತು ದೊಡ್ಡ ಬಲಪಂಥೀಯ ಗುಂಪುಗಳಿಗೆ ಆದೇಶ ನೀಡಲಾಗಿದೆ. ನನ್ನ ಮೇಲೆ ದಾಳಿ ಮಾಡುವುದರಿಂದ ಅವರಿಗೆ ಬಹುಮಾನ ಮತ್ತು ಗೌರವ ಸಿಗುತ್ತದೆ” ಎಂದು ಬಿಂದು ಅಮ್ಮಿನಿ ಹೇಳಿದ್ದಾರೆ.

ಇದಲ್ಲದೆ, ’ರಾಜ್ಯದಲ್ಲಿ ಪೊಲೀಸರು ಸಂಘ ಪರಿವಾರದ ಪರವಾಗಿ ನಿಂತಿದ್ದಾರೆ. ತನ್ನ ಮೇಲಿನ ಯಾವುದೇ ದಾಳಿಯ ಬಗ್ಗೆ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ’ ಎಂದು ಬಿಂದು ಅಮ್ಮಿನಿ ಆರೋಪಿಸಿದ್ದಾರೆ.

ಸೆಪ್ಟೆಂಬರ್ 2018 ರಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ಮಾಡಲು ಅನುಮತಿಸಿದ ನಂತರ, ಜನವರಿ 2, 2019 ರಂದು ಬಿಂದು ಮತ್ತು ಕನಕ ದುರ್ಗೆ ಎಂಬ ಇಬ್ಬರು ಮಹಿಳೆಯರು ಶಬರಿಮಲೆ ದೇಗುಲಕ್ಕೆ ತೆರಳುವ ಮೂಲಕ ಇತಿಹಾಸ ನಿರ್ಮಿಸಿದ್ದರು.


ಇದನ್ನೂ ಓದಿ: ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...