Homeಚಳವಳಿಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

ಶಬರಿಮಲೆ ಪ್ರವೇಶಿಸಿದ್ದ ಮೊದಲ ಮಹಿಳೆ ಬಿಂದು ಅಮ್ಮಿನಿ ಮೇಲೆ ಮತ್ತೆ ಹಲ್ಲೆ: ಆರೋಪಿ ಬಂಧನ

- Advertisement -
- Advertisement -

ಜನವರಿ 5 ರಂದು ಬುಧವಾರ ಸಾಮಾಜಿಕ ಹೋರಾಟಗಾರ್ತಿ ಬಿಂದು ಅಮ್ಮಿನಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಮೋಹನ್‌ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಶಬರಿಮಲೆಗೆ ಪ್ರವೇಶ ಮಾಡಿದ್ದ 10 ರಿಂದ 50 ವರ್ಷದೊಳಗಿನ ಮೊದಲ ಮಹಿಳೆಯರಲ್ಲಿ ಬಿಂದು ಅಮ್ಮಿನಿ ಕೂಡ ಒಬ್ಬರು.

ಆರೋಪಿ ಕೋಝಿಕ್ಕೋಡ್‌ನ ಥೋಡಿಯಿಲ್‌ನವರು. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಗುರುವಾರ ಕೋಝಿಕೋಡ್ ಜಿಲ್ಲೆಯ ವೆಲ್ಲಾಯಿಲ್ ಪೊಲೀಸರು ತಿಳಿಸಿದ್ದಾರೆ.

ಜನವರಿ 5 ರಂದು ಕೋಝಿಕ್ಕೋಡ್‌ನಲ್ಲಿ ಬಿಂಧು ಅಮ್ಮಿನಿ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದರು. ಈ ಹಲ್ಲೆಯ ವೀಡಿಯೊಗಳು ಮತ್ತು ಚಿತ್ರಗಳು ಸಾಕಷ್ಟು ವೈರಲ್ ಆಗಿದ್ದು, ದೃಶ್ಯದಲ್ಲಿ ಆರೋಪಿ ಬಿಂದು ಅವರ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ.

ಹೋರಾಟಗಾರ್ತಿ ಬಿಂದು ಅವರ ಮೇಲೆ ದಾಳಿಯಾಗುತ್ತಿರುವುದು ಇದು ಮೊದಲೇನಲ್ಲ. ಕಳೆದ ಡಿಸೆಂಬರ್‌ನಲ್ಲಿಯೂ ಆಕೆಗೆ ಆಟೋರಿಕ್ಷಾ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿತ್ತು. ಬಳಿಕ ಬಿಂದು ಕೊಯಿಲಾಂಡಿ ಪೊಲೀಸರಿಗೆ ದೂರು ನೀಡಿ, ತಾನು ಶಬರಿಮಲೆ ಅಭಿಯಾನ ನಡೆಸುತ್ತಿದ್ದ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಕೇರಳ: ತಂದೆ ಜೊತೆ ಶಬರಿಮಲೆಗೆ ತೆರಳಲು 9 ವರ್ಷದ ಬಾಲಕಿಗೆ ಹೈಕೋರ್ಟ್ ಅನುಮತಿ

“ನಾನು ಇನ್ನು ಮುಂದೆ ಇಲ್ಲಿ ಸುರಕ್ಷಿತವಾಗಿರಲಾರೆ, ದೇಶವನ್ನು ತೊರೆದು ಬೇರೆಡೆ ಆಶ್ರಯ ಪಡೆಯುವುದು ಒಂದೇ ನನ್ನ ಮುಂದಿನ ಆಯ್ಕೆಯಾಗಿದೆ” ಎಂದು ನೋವಿನಿಂದ ಬಿಂದು ಅಮ್ಮಿನಿ ಹೇಳಿದ್ದಾರೆ.

“ನಾನು ಶಬರಿಮಲೆಗೆ ಹೋಗಿ ಬಂದ ಬಳಿಕ ಇಂತಹ ದಾಳಿಗಳಿಗೆ ಒಳಗಾಗಿದ್ದೇನೆ. ನಿನ್ನೆಯ (ಜ.5) ಘಟನೆ ಕೂಡ ಪಿತೂರಿಯಿಂದ ಕೂಡಿದೆ. ಏಕೆಂದರೆ ನನ್ನನ್ನು ಎಲ್ಲಿ ನೋಡಿದರು ದಾಳಿ ಮಾಡುವಂತೆ ಎಲ್ಲಾ ಸಣ್ಣ ಮತ್ತು ದೊಡ್ಡ ಬಲಪಂಥೀಯ ಗುಂಪುಗಳಿಗೆ ಆದೇಶ ನೀಡಲಾಗಿದೆ. ನನ್ನ ಮೇಲೆ ದಾಳಿ ಮಾಡುವುದರಿಂದ ಅವರಿಗೆ ಬಹುಮಾನ ಮತ್ತು ಗೌರವ ಸಿಗುತ್ತದೆ” ಎಂದು ಬಿಂದು ಅಮ್ಮಿನಿ ಹೇಳಿದ್ದಾರೆ.

ಇದಲ್ಲದೆ, ’ರಾಜ್ಯದಲ್ಲಿ ಪೊಲೀಸರು ಸಂಘ ಪರಿವಾರದ ಪರವಾಗಿ ನಿಂತಿದ್ದಾರೆ. ತನ್ನ ಮೇಲಿನ ಯಾವುದೇ ದಾಳಿಯ ಬಗ್ಗೆ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ’ ಎಂದು ಬಿಂದು ಅಮ್ಮಿನಿ ಆರೋಪಿಸಿದ್ದಾರೆ.

ಸೆಪ್ಟೆಂಬರ್ 2018 ರಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ಮಾಡಲು ಅನುಮತಿಸಿದ ನಂತರ, ಜನವರಿ 2, 2019 ರಂದು ಬಿಂದು ಮತ್ತು ಕನಕ ದುರ್ಗೆ ಎಂಬ ಇಬ್ಬರು ಮಹಿಳೆಯರು ಶಬರಿಮಲೆ ದೇಗುಲಕ್ಕೆ ತೆರಳುವ ಮೂಲಕ ಇತಿಹಾಸ ನಿರ್ಮಿಸಿದ್ದರು.


ಇದನ್ನೂ ಓದಿ: ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...