Homeಮುಖಪುಟಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

- Advertisement -
- Advertisement -

ಚೀನಾ ದೇಶವು ನೆರೆಯ ಭಾರತ ದೇಶದಿಂದ ಎಷ್ಟು ಭೂಮಿ ವಶಪಡಿಸಿಕೊಂಡಿದೆ ಎಂಬುದನ್ನು ಬಹಿರಂಗಪಡಿಸಲು ಲಡಾಕ್‌ನಿಂದ ಸುಮಾರು 10,000 ಜನರು ಈ ತಿಂಗಳು ಚೀನಾದ ಗಡಿ ಉದ್ದಕ್ಕೂ  ಮೆರವಣಿಗೆ ನಡೆಸಲಿದ್ದಾರೆ ಎಂದು ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.

ವಾಂಗ್ಚುಕ್ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆಗಳ ಬೇಡಿಕೆಯ ಮುಂದಿಟ್ಟು ಕಳೆದ 14 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಾಂಗ್ಚುಕ್ ಉಪ್ಪು ನೀರು ಕುಡಿದು ಲೇಹ್‌ನಲ್ಲಿ ಶೂನ್ಯ ತಾಪಮಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾವು ಯಾವಾಗಲೂ ಹೋಗುತ್ತಿದ್ದ ಸ್ಥಳಗಳಿಗೆ ಹೋಗಲು ಈಗ ನಮಗೆ ಅನುಮತಿಸಲಾಗುತ್ತಿಲ್ಲ. ನಿರ್ದಿಷ್ಟ ಪ್ರದೇಶಗಳಲ್ಲಿ,ನಾವು ಹಿಂದೆ ಹೋಗುತ್ತಿದ್ದ ಸ್ಥಳ ತಲುಪುವ ಕಿಲೋಮೀಟರ್‌ಗಳ ಮೊದಲು ನಮ್ಮನ್ನು ತಡೆಯಲಾಗುತ್ತಿದೆ. ನಾವು ಅಲ್ಲಿಗೆ ಹೋಗಿ ಭೂಮಿ ನಮ್ಮಿಂದ ಕಳೆದುಹೋಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸುತ್ತೇವೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಇತರ ಪ್ರತಿಭಟನಾಕಾರರೊಂದಿಗೆ ನೆಲದ ವಾಸ್ತವವನ್ನು ಹೊರಗಿನ ಪ್ರಪಂಚಕ್ಕೆ ಎತ್ತಿ ತೋರಿಸಲು ಶೀಘ್ರದಲ್ಲೇ ಗಡಿಗೆ ಮೆರವಣಿಗೆಯನ್ನು ಆಯೋಜಿಸುತ್ತೇವೆ, ನಮ್ಮ ಅಲೆಮಾರಿಗಳು ದಕ್ಷಿಣಕ್ಕೆ ಬೃಹತ್ ಭಾರತೀಯ ಕೈಗಾರಿಕಾ ಸ್ಥಾವರಗಳಿಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಉತ್ತರಕ್ಕೆ ಚೀನಾದ ಅತಿಕ್ರಮಣದಿಂದ ಪ್ರಧಾನ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸ್ಥಾವರಗಳಿಂದ ಅಲೆಮಾರಿಗಳು 1,50,000 ಚದರ ಕಿಲೋಮೀಟರ್ ಅವಿಭಾಜ್ಯ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತೊಂದೆಡೆ ಅವರು ಉತ್ತರದಿಂದ ಚೀನಾ ಅತಿಕ್ರಮಣದಿಂದ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಚೀನೀಯರು ಕಳೆದ ಕೆಲವು ವರ್ಷಗಳಲ್ಲಿ ದೊಡ್ಡ ಪ್ರಮಾಣದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಈ ನೆಲದ ವಾಸ್ತವತೆಯನ್ನು ತೋರಿಸಲು ನಾವು ಶೀಘ್ರದಲ್ಲೇ ರೈತರು ಸೇರಿದಂತೆ 10,000 ಜನರು ಗಡಿಗೆ ಮೆರವಣಿಗೆ ತೆರಳಲಿದ್ದೇವೆ. ಡೆಮ್‌ಚೋಕ್, ಚುಶುಲ್ ಸೇರಿದಂತೆ ಚೀನಾದೊಂದಿಗಿನ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಮೆರವಣಿಗೆಯನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಜೂನ್ 15, 2020ರಂದು ಗಾಲ್ವಾನ್‌ನಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಘಟನೆಯ ನಂತರ ಎರಡು ಸೇನೆಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ ಮತ್ತು ಬಫರ್ ವಲಯಗಳು ಅಥವಾ ನಿಷೇಧಿತ ಪ್ರದೇಶಗಳ ರಚನೆಗೆ ಕಾರಣವಾಗಿವೆ.

ಮಾರ್ಚ್ 4ರಂದು ಲಡಾಖ್ ನಾಗರಿಕ ಸಮಾಜದ ಮುಖಂಡರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಮಾತುಕತೆಯ ವಿಫಲತೆಯ ನಂತರ ಸ್ಥಳೀಯರು ವಾಂಗ್ಚುಕ್ ಅವರ ಪ್ರತಿಭಟನೆಗೆ ಭಾರೀ ಬೆಂಬಲವನ್ನು ಸೂಚಿಸಿದ್ದಾರೆ. ಲಡಾಖ್‌ನಲ್ಲಿ ಬೌದ್ಧ ಬಹುಸಂಖ್ಯಾತ ಮತ್ತು ಶಿಯಾ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳನ್ನು ಪ್ರತಿನಿಧಿಸುವ ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಸದಸ್ಯರು ಜಂಟಿಯಾಗಿ ಲಡಾಖ್‌ಗೆ ರಾಜ್ಯ ಸ್ಥಾನಕ್ಕಾಗಿ ಪ್ರತಿಭಟಿಸುತ್ತಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...