Homeಮುಖಪುಟದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

- Advertisement -
- Advertisement -

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಏಪ್ರಿಲ್ 2006ರಲ್ಲಿ ಟಿವಿ ಕಾರ್ಯಕ್ರಮವೊಂದರಲ್ಲಿ ಪಾಟ್ಕರ್ ತಮ್ಮ ಬಗ್ಗೆ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಸಕ್ಸೇನಾ ವಿಫಲರಾಗಿದ್ದಾರೆ ಎಂದು ಸಾಕೇತ್ ನ್ಯಾಯಾಲಯಗಳ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಹೇಳಿದ್ದಾರೆ.

ಸಕ್ಸೇನಾ ಅವರು ಅಹಮದಾಬಾದ್ ಮೂಲದ ಸರ್ಕಾರೇತರ ಸಂಸ್ಥೆಯಾದ (ಎನ್‌ಜಿಒ) ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದಾಗ ಈ ಪ್ರಕರಣ ದಾಖಲಾಗಿತ್ತು. ಪಾಟ್ಕರ್ ಅವರು ಎನ್‌ಜಿಒ ಸಿವಿಲ್ ಕಾಂಟ್ರಾಕ್ಟ್ ಪಡೆದಿರುವ ಬಗ್ಗೆ ಮಾನನಷ್ಟಕರ ಆರೋಪಗಳನ್ನು ಮಾಡಿದ್ದಾರೆ ಎಂದು ಸಕ್ಸೇನಾ ಆರೋಪಿಸಿದ್ದರು, ಆದರೆ ಪಾಟ್ಕರ್ ಅದನ್ನು ನಿರಾಕರಿಸಿದ್ದರು.

ಪಾಟ್ಕರ್ ಅವರು ಪ್ರಶ್ನಾರ್ಹ ಕಾರ್ಯಕ್ರಮದಲ್ಲಿ ಪ್ಯಾನೆಲಿಸ್ಟ್ ಆಗಿರಲಿಲ್ಲ, ಅವರ ಪ್ರಿ-ರೆಕಾರ್ಡ್ ಮಾಡಿದ ವೀಡಿಯೊ ಕ್ಲಿಪ್ ಅನ್ನು ಮಾತ್ರ ಪ್ರಸಾರ ಮಾಡಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ ಎಂದು ಪಿಟಿಐ ವರದಿ ಮಾಡಿದೆ.

“ವಾಸ್ತವವಾಗಿ ಆಡಿಯೋ-ವಿಡಿಯೋ ರೆಕಾರ್ಡ್ ಮಾಡಿದ ವರದಿಗಾರರನ್ನಾಗಲಿ ಅಥವಾ ಆರೋಪಿಯು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದನ್ನು ನೋಡಿದ ಯಾವುದೇ ವ್ಯಕ್ತಿಯನ್ನಾಗಲಿ ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಲಾಗಿಲ್ಲ ಎಂಬುದನ್ನು ಗಮನಿಸುವುದು ಮುಖ್ಯ” ಎಂದು ನ್ಯಾಯಾಧೀಶರು ಹೇಳಿರುವುದಾಗಿ ವರದಿ ತಿಳಿಸಿದೆ.

ಪ್ರಸಾರದ ಸಮಯದಲ್ಲಿ ಪ್ಲೇ ಮಾಡಲಾದ ವೀಡಿಯೊ ಪಾಟ್ಕರ್ ನಡೆಸಿದ ಸಂದರ್ಶನ ಅಥವಾ ಪತ್ರಿಕಾಗೋಷ್ಠಿಯ ಭಾಗದಂತೆ ಕಂಡುಬಂದಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ನ್ಯಾಯಾಲಯವು ಏನನ್ನಾದರೂ ಸ್ಥಾಪಿಸಲು ಅಥವಾ ದೃಢೀಕರಿಸಲು ಪತ್ರಿಕಾಗೋಷ್ಠಿಯ ಸಂಪೂರ್ಣ ವೀಡಿಯೊ ಮತ್ತು ಆಡಿಯೊವನ್ನು ಸಲ್ಲಿಸುವುದು ಅತ್ಯಗತ್ಯ ಎಂದಿದ್ದಾರೆ.

ಸಕ್ಸೇನಾ ಅವರು ಮೂಲ ವೀಡಿಯೊ ತುಣುಕನ್ನು ಅಥವಾ ಮಾನಹಾನಿಕರ ಹೇಳಿಕೆಗಳನ್ನು ರೆಕಾರ್ಡ್ ಮಾಡಿದ ರೆಕಾರ್ಡಿಂಗ್ ಸಾಧನವನ್ನು ಸಲ್ಲಿಸಲು ವಿಫಲರಾಗಿದ್ದಾರೆ. ಪರಿಣಾಮವಾಗಿ, ಆರೋಪಗಳನ್ನು ಸ್ಥಾಪಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

2001ರಲ್ಲಿ ಸಕ್ಸೇನಾ ದಾಖಲಿಸಿದ್ದ ಮತ್ತೊಂದು ಮಾನನಷ್ಟ ಮೊಕದ್ದಮೆಯಲ್ಲಿ ಪಾಟ್ಕರ್ ಅವರ ಶಿಕ್ಷೆಯನ್ನು 2025ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. 2000ನೇ ಇಸವಿಯ ನವೆಂಬರ್‌ನಲ್ಲಿ ಪಾಟ್ಕರ್ “ದೇಶಭಕ್ತನ ನಿಜವಾದ ಮುಖ” ಎಂಬ ಶೀರ್ಷಿಕೆಯ ಪತ್ರಿಕಾ ಪ್ರಕಟಣೆಯಲ್ಲಿ ತನ್ನ ಮಾನಹಾನಿ ಮಾಡಿದ್ದಾರೆ ಎಂದು ಈ ಪ್ರಕರಣದಲ್ಲಿ ಸಕ್ಸೇನಾ ಆರೋಪಿಸಿದ್ದರು.

ಮೇ 2024ರಲ್ಲಿ, ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಈ ಪ್ರಕರಣದಲ್ಲಿ ಪಾಟ್ಕರ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದರು. ಎರಡು ವರ್ಷಗಳ ಜೈಲು ಶಿಕ್ಷೆ, ದಂಡ ವಿಧಿಸಿದ್ದರು.

“ಗುಜರಾತ್ ಜನರು ಮತ್ತು ಅವರ ಸಂಪನ್ಮೂಲಗಳನ್ನು ವಿದೇಶಿ ಹಿತಾಸಕ್ತಿಗಳಿಗೆ ಅಡಮಾನ ಇಟ್ಟಿದ್ದಾರೆ” ಎಂದು ಪಾಟ್ಕರ್ ಸಕ್ಸೇನಾ ವಿರುದ್ಧ ಆರೋಪಿಸಿದ್ದಾರೆ. ಈ ಆರೋಪ ಸಕ್ಸೇನಾ ಅವರ ಸಮಗ್ರತೆ ಮತ್ತು ಸಾರ್ವಜನಿಕ ಸೇವೆಯ ಮೇಲಿನ ನೇರ ದಾಳಿ ಎಂದು ಅಭಿಪ್ರಾಯಪಟ್ಟಿದ್ದರು.

ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ಆದರೆ, ಪಾಟ್ಕರ್ ಅವರಿಗೆ ವಿಧಿಸಲಾಗಿದ್ದ ಪರೋಲ್ (ಪ್ರೊಬೇಷನ್) ನಿಯಮವನ್ನು ಸ್ವಲ್ಪ ಮಾರ್ಪಡಿಸಿದೆ. ಮೊದಲು ಪಾಟ್ಕರ್ ಅವರು ಪ್ರತಿ ನಿಗದಿತ ಕಾಲಾವಧಿಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ (ಟ್ರಯಲ್ ಕೋರ್ಟ್‌ಗೆ) ಹಾಜರಾಗುವಂತೆ ಆದೇಶಿಸಲಾಗಿತ್ತು. ಆದರೆ, ಈಗ ಆ ನಿಯಮವನ್ನು ಬದಲಾಯಿಸಿ, ಅವರು ಬಾಂಡ್‌ಗಳನ್ನು (ಸಾಕ್ಷಿಗಳೊಂದಿಗೆ ಖಾತರಿ ಪತ್ರಗಳು ಅಥವಾ ಬಾಂಡ್‌ಗಳು) ಸಲ್ಲಿಸುವಂತೆ ಅನುಮತಿಸಲಾಗಿದೆ. ಹೀಗೆ ಮಾಡುವ ಮೂಲಕ ಅವರು ಆಗಾಗ್ಗೆ ನ್ಯಾಯಾಲಯಕ್ಕೆ ಹೋಗುವ ತೊಂದರೆಯನ್ನು ಕಡಿಮೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...