Homeಮುಖಪುಟಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ

ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್ ಬಂಧನ

- Advertisement -
- Advertisement -

ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ (ಎಲ್‌-ಜಿ) ವಿ.ಕೆ ಸಕ್ಸೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ‘ನರ್ಮದಾ ಬಚಾವೋ ಆಂದೋಲನ’ದ ನಾಯಕಿ, ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಪೊಲೀಸರು ಶುಕ್ರವಾರ (ಏ.25) ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿ.ಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಮೇ 24, 2023ರಂದು, ದೆಹಲಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪಾಟ್ಕರ್ ಅವರ ಹೇಳಿಕೆಗಳನ್ನು ಮಾನನಷ್ಟಕರವೆಂದು ಪರಿಗಣಿಸಿ ಜುಲೈ 1ರಂದು ಅವರಿಗೆ ಐದು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದಾಗ್ಯೂ, ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಅವರು ಕಳೆದ ವರ್ಷ ಜುಲೈ 29ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಮೇಧಾ ಪಾಟ್ಕರ್ ಅವರಿಗೆ ಜಾಮೀನು ನೀಡಿದ್ದರು.

ನಂತರ, 1 ಲಕ್ಷ ರೂ. ದಂಡವನ್ನು ಪಾವತಿಸುವ ಷರತ್ತಿನೊಂದಿಗೆ ಮೇಧಾ ಪಾಟ್ಕರ್ ಉತ್ತಮ ನಡವಳಿಕೆಯ ಪ್ರೊಬೇಷನ್ ಅನ್ನು ಪಡೆದರು. ಸಾಕೇತ್ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಸಿಂಗ್ ಅವರ ನೇತೃತ್ವದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 8, 2025 ರಂದು ಈ ಸಡಿಲಿಕೆಯನ್ನು ನೀಡಿತ್ತು.

ಈ ರಿಯಾಯಿತಿಯ ಹೊರತಾಗಿಯೂ, ಏಪ್ರಿಲ್ 23 ರಂದು ಪ್ರೊಬೇಷನ್ ಬಾಂಡ್‌ಗಳನ್ನು ಔಪಚಾರಿಕವಾಗಿ ಸಲ್ಲಿಸಲು ಮತ್ತು ದಂಡವನ್ನು ಪಾವತಿಸುವ ಸಲುವಾಗಿ ನ್ಯಾಯಾಲಯಕ್ಕೆ ಹಾಜರಾಗಲು ಪಾಟ್ಕರ್ ವಿಫಲರಾಗಿದ್ದರು. ಅವರ ಗೈರುಹಾಜರಿ ಮತ್ತು ನಿಯಮ ಪಾಲಿಸದ ಕಾರಣ ನ್ಯಾಯಾಲಯವು ದೆಹಲಿ ಪೊಲೀಸ್ ಆಯುಕ್ತರ ಮೂಲಕ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್ ಜಾರಿಗೊಳಿಸುವ ಪ್ರಕ್ರಿಯೆಗೆ ಎರಡು ವಾರಗಳ ತಡೆ ನೀಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತಿರಸ್ಕರಿಸಿತ್ತು.

“ಪ್ರೊಬೇಷನ್ ಬಾಂಡ್ ಜಾರಿ ತಡೆಯುವಂತೆ ಕೋರಿರುವ ಮೇಧಾ ಪಾಟ್ಕರ್ ಅರ್ಜಿಯು ನ್ಯಾಯಾಲಯವನ್ನು ಮೋಸಗೊಳಿಸುವ ಉದ್ದೇಶದಿಂದ ಕೂಡಿದೆ” ಎಂದು ಎಎಸ್‌ಜೆ ವಿಶಾಲ್ ಸಿಂಗ್ ಹೇಳಿದ್ದರು.

“ಮುಂದಿನ ದಿನಾಂಕದಂದು, ಅಪರಾಧಿಯು 08/04/2025ರ ಶಿಕ್ಷೆಯ ಆದೇಶದ ನಿಯಮಗಳನ್ನು ಪಾಲಿಸಲು ವಿಫಲವಾದರೆ, ನ್ಯಾಯಾಲಯವು ದಯಾಪರ ಶಿಕ್ಷೆಯನ್ನು ಮರುಪರಿಶೀಲಿಸಬೇಕಾಗುತ್ತದೆ ಮತ್ತು ಶಿಕ್ಷೆಯ ಮೇಲಿನ ಆದೇಶವನ್ನು ಬದಲಾಯಿಸಬೇಕಾಗುತ್ತದೆ” ಎಂದು ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಏಪ್ರಿಲ್ 23ರ ತಮ್ಮ ಆದೇಶದಲ್ಲಿ ಹೇಳಿದ್ದರು.

“ಬಲವಂತದ ಆದೇಶದ ಮೂಲಕ ಅಪರಾಧಿ ಮೇಧಾ ಪಾಟ್ಕರ್ ಅವರನ್ನು ಹಾಜರುಪಡಿಸುವುದನ್ನು ಜಾರಿಗೊಳಿಸುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಬೇರೆ ದಾರಿಯಿಲ್ಲ” ಎಂದು ನ್ಯಾಯಾಧೀಶ ಸಿಂಗ್ ಹೇಳಿದ್ದರು. ಮುಂದಿನ ದಿನಾಂಕಕ್ಕೆ ದೆಹಲಿ ಪೊಲೀಸ್ ಆಯುಕ್ತರ ಕಚೇರಿಯ ಮೂಲಕ ಅಪರಾಧಿ ಮೇಧಾ ಪಾಟ್ಕರ್ ವಿರುದ್ಧ ಜಾಮೀನುರಹಿತ ಆದೇಶ ಹೊರಡಿಸಿ” ಎಂದಿದ್ದರು.

ನ್ಯಾಯಾಲಯದ ಆದೇಶದಂತೆ ಮೇಧಾ ಪಾಟ್ಕರ್ ವಿರುದ್ಧ ಪೊಲೀಸರು ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿದ್ದರು. ಇಂದು ಅವರ ಬಂಧನವಾಗಿದೆ.

ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...