Homeಮುಖಪುಟಗಾಝಾ ವಿಷಯದಲ್ಲಿ ಯುಎಸ್‌ ನಿಲುವು ಖಂಡಿಸಿ ಪಿಹೆಚ್‌ಡಿ, ಎಂಎಸ್ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್...

ಗಾಝಾ ವಿಷಯದಲ್ಲಿ ಯುಎಸ್‌ ನಿಲುವು ಖಂಡಿಸಿ ಪಿಹೆಚ್‌ಡಿ, ಎಂಎಸ್ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಬೆಂಬಲಿಸುತ್ತಿರುವ ಯುಎಸ್‌ನ ನಡೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ತಮ್ಮ ಪಿಹೆಚ್‌ಡಿ ಪದವಿಯನ್ನು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಅಧಿಕೃತವಾಗಿ ಹಿಂದಿರುಗಿಸಿದ್ದಾರೆ.

ಗಾಝಾ ಮೇಲಿನ ಆಕ್ರಮಣಕ್ಕೆ ಬೆಂಬಲ ನೀಡುತ್ತಿರುವ ಯುಎಸ್‌ನ ವಿರುದ್ದ ಪ್ರತಿಭಟನೆಯ ಸಂಕೇತವಾಗಿ 2002 ರಲ್ಲಿ ನೀಡಲಾದ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ಪಾಂಡೆ ಅವರು ಜನವರಿಯಲ್ಲಿ ಘೋಷಿಸಿದ್ದರು. ಸಂದೀಪ್ ಪಾಂಡೆ ತಮ್ಮ ಎರಡು ಎಂಎಸ್ಸಿ ಪದವಿಗಳನ್ನೂ ಸಿರಾಕ್ಯೂಸ್ ವಿಶ್ವವಿದ್ಯಾಲಯಕ್ಕೆ ಹಿಂದಿರುಗಿಸಿದ್ದಾರೆ.

ಈ ವಿಶ್ವವಿದ್ಯಾನಿಲಯಗಳಿಗೆ ಸಂದೀಪ್ ಪಾಂಡೆ ಎರಡು ಪತ್ರಗಳನ್ನು ಬರೆದಿದ್ದು, ಅದರ ಪ್ರತಿಯನ್ನು ಪಿಟಿಐ ಹಂಚಿಕೊಂಡಿದೆ. ಆ ಪತ್ರಗಳಲ್ಲಿ “ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಯುದ್ಧದಲ್ಲಿ ಯುಎಸ್ ಪಾತ್ರ ಖೇದಕರ ಎಂದು ಬರೆದಿದ್ದಾರೆ.

“ಯುದ್ಧವನ್ನು ಅಂತ್ಯಗೊಳಿಸಲು ಯುಎಸ್ ಮಧ್ಯವರ್ತಿಯ ಪಾತ್ರ ನಿರ್ವಹಿಸಬಹುದು ಎಂದು ನಾನು ಅಂದುಕೊಂಡಿದ್ದೇನೆ. ಪ್ಯಾಲೆಸ್ತೀನ್‌ಗೆ ಸ್ವತಂತ್ರ ರಾಷ್ಟ್ರದ ಸ್ಥಾನಮಾನ ನೀಡುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕಬಹುದು. ಆದರೆ, ಯುಎಸ್ ಮಿಲಿಟರಿ ಮೂಲಕ ಇಸ್ರೇಲ್ ಅನ್ನು ಕುರುಡಾಗಿ ಬೆಂಬಲಿಸುವುದನ್ನು ಮುಂದುವರೆಸಿದೆ. ಇದು ಮಕ್ಕಳು ಸೇರಿದಂತೆ ಸಾವಿರಾರು ಅಮಾಯಕ ಪ್ಯಾಲೆಸ್ತೀನಿಯರ ಹತ್ಯೆಗೆ ಕಾರಣವಾಗಿದೆ. ಯುಎಸ್ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಪರವಾಗಿ ನಿಂತಿದೆ ಎಂದು ನಂಬುವುದು ಕಷ್ಟ” ಎಂದಿದ್ದಾರೆ.

ಪಾಂಡೆ ಅವರು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಎಲ್ಲಾ ದಾಖಲೆಗಳಿಂದ ತಮ್ಮ ಹೆಸರನ್ನು ತೆಗೆದು ಹಾಕಲು ವಿನಂತಿಸಿದ್ದಾರೆ. ತಮ್ಮ ಎರಡು ಎಂಎಸ್ಸಿ ಪದವಿಗಳನ್ನು ಹಿಂದಿರುಗಿಸಿದ ಸಿರಾಕ್ಯೂಸ್ ವಿಶ್ವವಿದ್ಯಾಲಯಕ್ಕೂ ಇದೇ ರೀತಿಯ ಮನವಿ ಮಾಡಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್ ಆಕ್ರಮಣದಿಂದ ಇದುವರೆಗೆ ಗಾಝಾದ 32,000 ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ.

ಕಳೆದ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದೆ. ಯುಎಸ್ ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ನಿರ್ಣಯ ಅಂಗೀಕಾರಕ್ಕೆ ಅನುವು ಮಾಡಿ ಕೊಟ್ಟಿದೆ. ಯುಎಸ್ ಮತದಾನಕ್ಕೆ ಗೈರಾಗಿತ್ತು.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...