Homeಮುಖಪುಟಗಾಝಾ ವಿಷಯದಲ್ಲಿ ಯುಎಸ್‌ ನಿಲುವು ಖಂಡಿಸಿ ಪಿಹೆಚ್‌ಡಿ, ಎಂಎಸ್ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್...

ಗಾಝಾ ವಿಷಯದಲ್ಲಿ ಯುಎಸ್‌ ನಿಲುವು ಖಂಡಿಸಿ ಪಿಹೆಚ್‌ಡಿ, ಎಂಎಸ್ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಬೆಂಬಲಿಸುತ್ತಿರುವ ಯುಎಸ್‌ನ ನಡೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ತಮ್ಮ ಪಿಹೆಚ್‌ಡಿ ಪದವಿಯನ್ನು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಅಧಿಕೃತವಾಗಿ ಹಿಂದಿರುಗಿಸಿದ್ದಾರೆ.

ಗಾಝಾ ಮೇಲಿನ ಆಕ್ರಮಣಕ್ಕೆ ಬೆಂಬಲ ನೀಡುತ್ತಿರುವ ಯುಎಸ್‌ನ ವಿರುದ್ದ ಪ್ರತಿಭಟನೆಯ ಸಂಕೇತವಾಗಿ 2002 ರಲ್ಲಿ ನೀಡಲಾದ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ಪಾಂಡೆ ಅವರು ಜನವರಿಯಲ್ಲಿ ಘೋಷಿಸಿದ್ದರು. ಸಂದೀಪ್ ಪಾಂಡೆ ತಮ್ಮ ಎರಡು ಎಂಎಸ್ಸಿ ಪದವಿಗಳನ್ನೂ ಸಿರಾಕ್ಯೂಸ್ ವಿಶ್ವವಿದ್ಯಾಲಯಕ್ಕೆ ಹಿಂದಿರುಗಿಸಿದ್ದಾರೆ.

ಈ ವಿಶ್ವವಿದ್ಯಾನಿಲಯಗಳಿಗೆ ಸಂದೀಪ್ ಪಾಂಡೆ ಎರಡು ಪತ್ರಗಳನ್ನು ಬರೆದಿದ್ದು, ಅದರ ಪ್ರತಿಯನ್ನು ಪಿಟಿಐ ಹಂಚಿಕೊಂಡಿದೆ. ಆ ಪತ್ರಗಳಲ್ಲಿ “ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಯುದ್ಧದಲ್ಲಿ ಯುಎಸ್ ಪಾತ್ರ ಖೇದಕರ ಎಂದು ಬರೆದಿದ್ದಾರೆ.

“ಯುದ್ಧವನ್ನು ಅಂತ್ಯಗೊಳಿಸಲು ಯುಎಸ್ ಮಧ್ಯವರ್ತಿಯ ಪಾತ್ರ ನಿರ್ವಹಿಸಬಹುದು ಎಂದು ನಾನು ಅಂದುಕೊಂಡಿದ್ದೇನೆ. ಪ್ಯಾಲೆಸ್ತೀನ್‌ಗೆ ಸ್ವತಂತ್ರ ರಾಷ್ಟ್ರದ ಸ್ಥಾನಮಾನ ನೀಡುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕಬಹುದು. ಆದರೆ, ಯುಎಸ್ ಮಿಲಿಟರಿ ಮೂಲಕ ಇಸ್ರೇಲ್ ಅನ್ನು ಕುರುಡಾಗಿ ಬೆಂಬಲಿಸುವುದನ್ನು ಮುಂದುವರೆಸಿದೆ. ಇದು ಮಕ್ಕಳು ಸೇರಿದಂತೆ ಸಾವಿರಾರು ಅಮಾಯಕ ಪ್ಯಾಲೆಸ್ತೀನಿಯರ ಹತ್ಯೆಗೆ ಕಾರಣವಾಗಿದೆ. ಯುಎಸ್ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಪರವಾಗಿ ನಿಂತಿದೆ ಎಂದು ನಂಬುವುದು ಕಷ್ಟ” ಎಂದಿದ್ದಾರೆ.

ಪಾಂಡೆ ಅವರು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಎಲ್ಲಾ ದಾಖಲೆಗಳಿಂದ ತಮ್ಮ ಹೆಸರನ್ನು ತೆಗೆದು ಹಾಕಲು ವಿನಂತಿಸಿದ್ದಾರೆ. ತಮ್ಮ ಎರಡು ಎಂಎಸ್ಸಿ ಪದವಿಗಳನ್ನು ಹಿಂದಿರುಗಿಸಿದ ಸಿರಾಕ್ಯೂಸ್ ವಿಶ್ವವಿದ್ಯಾಲಯಕ್ಕೂ ಇದೇ ರೀತಿಯ ಮನವಿ ಮಾಡಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್ ಆಕ್ರಮಣದಿಂದ ಇದುವರೆಗೆ ಗಾಝಾದ 32,000 ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ.

ಕಳೆದ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದೆ. ಯುಎಸ್ ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ನಿರ್ಣಯ ಅಂಗೀಕಾರಕ್ಕೆ ಅನುವು ಮಾಡಿ ಕೊಟ್ಟಿದೆ. ಯುಎಸ್ ಮತದಾನಕ್ಕೆ ಗೈರಾಗಿತ್ತು.

ಇದನ್ನೂ ಓದಿ : ಬೋಗಸ್ ದಾಖಲೆ ಬಳಸಿ ಮೋದಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಸೃಷ್ಟಿಸುತ್ತಿರುವ ಬ್ಯಾಂಕ್‌ಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...