Homeಚಳವಳಿಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ: ಸೈನ್ಯದ ವಿರುದ್ಧ ಟ್ವೀಟ್ ಮಾಡಿದ ಆರೋಪ

ಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ: ಸೈನ್ಯದ ವಿರುದ್ಧ ಟ್ವೀಟ್ ಮಾಡಿದ ಆರೋಪ

- Advertisement -
- Advertisement -

ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ನ ಯುವ ಕಾರ್ಯಕರ್ತೆ ಶೆಹ್ಲಾ ರಶೀದ್ ಮೇಲೆ ಪೊಲೀಸರು ಎಫ್.ಐ.ಆರ್ ಹಾಕಿ ದೇಶ ದ್ರೋಹದ ಪ್ರಕರಣ ದಾಖಲಿಸಿದ್ದಾರೆ. ಸೈನ್ಯದ ವಿರುದ್ಧ ಶೆಹ್ಲಾ ಟ್ವೀಟ್ ಮಾಡಿದ್ದರು ಎಂದು ಪೊಲೀಸರು ಆರೋಪಿಸಿದರೆ, ಕಾಶ್ಮೀರದಲ್ಲಿ ಮನೆಗೆ ನುಗ್ಗಿ ಸೇನಾ ಶಿಬಿರಕ್ಕೆ ನಾಲ್ವರನ್ನು ಕರೆದುಕೊಂಡು ಹೋಗಿ, ವಿಚಾರಣೆ ನಡೆಸಿ ಹಿಂಸೆ ನೀಡಲಾಗಿದೆ ಎಂದು ಶೆಹ್ಲಾ ರಶೀದ್ ಹೇಳಿಕೊಂಡಿದ್ದರು.

ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಸಾಮಾನ್ಯ ಜನರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು.

ತಮ್ಮನ್ನು ಸೋಫಿಯನ್ ಎಂಬಲ್ಲಿ ಸೇನಾ ಶಿಬಿರಕ್ಕೆ ವಿಚಾರಣೆಗೆಂದು ಕರೆಸಿಕೊಂಡು ವಿಚಾರಣೆಯ ನೆಪದಲ್ಲಿ ಒಬ್ಬ ಮನಷ್ಯ ತೀರಾ ಹತ್ತಿರಕ್ಕೆ ಬಂದು ತೊಂದರೆ ಕೊಟ್ಟಿದ್ದರು. ಮೈಕ್ ನಲ್ಲಿ ಅದೆಲ್ಲಾ ಮುದ್ರಿತಗೊಂಡಿದೆ ಎಂದು ಆರೋಪಿಸಿದ್ದರು.

ಇದಾದ ನಂತರ ವಕೀಲ್ ಅಲಾಕ್ ಅಲೋಕ್ ಶ್ರೀವತ್ಸ ಎಂಬುವವರ ದೆಹಲಿ ಪೊಲೀಸರ ಬಳಿ ದೂರೊಂದನ್ನು ನೀಡಿದ್ದು “ಶೆಹ್ಲಾ ಸುಳ್ಲು ಸುದ್ದಿಗಳನ್ನು ಹರಡುತ್ತಿದ್ದಾರೆ, ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ, ಅವರ ಬಳಿ ಯಾವುದೇ ದಾಖಲೆಗಳಿಲ್ಲ” ಎಂದು ದೂರಿದ್ದರು.

ಈ ರೀತಿ ಉದ್ದೇಶಪೂರ್ವಕವಾಗಿ ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ಸೈನ್ಯದ ಮೇಲೆ ಕೆಟ್ಟ ಹೆಸರು ಬರಲೆಂದು ಅವರು ಸುಳ್ಲು ಆರೋಪಗಳನ್ನು ಮಾಡಿದ್ದಾರೆ ಎಂದು ಶ್ರೀವತ್ಸ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೆಪ್ಟೆಂಬರ್ 3 ರಂದು ಸಲ್ಲಿಸಿದ ಎಫ್‌ಐಆರ್‌ನಲ್ಲಿ, ರಶೀದ್ ವಿರುದ್ಧ 124 ಎ (ದೇಶದ್ರೋಹ), 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಅಪೇಕ್ಷಿತವಾಗಿ ಪ್ರಚೋದನೆಯನ್ನು ನೀಡುವ ಉದ್ದೇಶದಿಂದ ಪ್ರಚೋದಿಸಿ ಗಲಭೆಗೆ ಕಾರಣ), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಭಾರತೀಯ ದಂಡ ಸಂಹಿತೆಯ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಲಾಗಿದೆ.

ದೆಹಲಿ ಪೊಲೀಸರ ವಿಶೇಷ ಸೆಲ್ ಪ್ರಕರಣದ ವಿಚಾರಣೆ ನಡೆಸಿತ್ತಿದೆ. ಇದೇ ಪೊಲೀಸರು ರಶೀದ್ ಅವರ ಬ್ಯಾಚ್‌ಮೇಟ್ ಮತ್ತು ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧದ ದೇಶದ್ರೋಹ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ.

ಸಂಸತ್ತಿನ ದಾಳಿಯ ಮಾಸ್ಟರ್ ಮೈಂಡ್ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನೆನಪಿಗಾಗಿ 2016 ರ ಫೆಬ್ರವರಿ 9 ರಂದು ಜೆಎನ್‌ಯುನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕುಮಾರ್ ಮತ್ತು ಇತರ ಒಂಬತ್ತು ಜನರ ವಿರುದ್ಧ ದೆಹಲಿ ಪೊಲೀಸರು ಈ ವರ್ಷದ ಜನವರಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆಗಿನ ಜೆಎನ್‌ಯುಎಸ್‌ಯು ಉಪಾಧ್ಯಕ್ಷೆ ಶೆಹ್ಲಾ ರಶೀದ್ ಮತ್ತು ಇತರ 35 ಮಂದಿಯನ್ನು ಚಾರ್ಜ್‌ಶೀಟ್‌ನ 12 ನೇ ಕಾಲಂನಲ್ಲಿ ಹೆಸರಿಸಲಾಗಿದೆ. ಆದರೆ ಇಂದು ದೆಹಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದು ಘೋಷಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...