Homeಚಳವಳಿಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ: ಸೈನ್ಯದ ವಿರುದ್ಧ ಟ್ವೀಟ್ ಮಾಡಿದ ಆರೋಪ

ಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ: ಸೈನ್ಯದ ವಿರುದ್ಧ ಟ್ವೀಟ್ ಮಾಡಿದ ಆರೋಪ

- Advertisement -
- Advertisement -

ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ನ ಯುವ ಕಾರ್ಯಕರ್ತೆ ಶೆಹ್ಲಾ ರಶೀದ್ ಮೇಲೆ ಪೊಲೀಸರು ಎಫ್.ಐ.ಆರ್ ಹಾಕಿ ದೇಶ ದ್ರೋಹದ ಪ್ರಕರಣ ದಾಖಲಿಸಿದ್ದಾರೆ. ಸೈನ್ಯದ ವಿರುದ್ಧ ಶೆಹ್ಲಾ ಟ್ವೀಟ್ ಮಾಡಿದ್ದರು ಎಂದು ಪೊಲೀಸರು ಆರೋಪಿಸಿದರೆ, ಕಾಶ್ಮೀರದಲ್ಲಿ ಮನೆಗೆ ನುಗ್ಗಿ ಸೇನಾ ಶಿಬಿರಕ್ಕೆ ನಾಲ್ವರನ್ನು ಕರೆದುಕೊಂಡು ಹೋಗಿ, ವಿಚಾರಣೆ ನಡೆಸಿ ಹಿಂಸೆ ನೀಡಲಾಗಿದೆ ಎಂದು ಶೆಹ್ಲಾ ರಶೀದ್ ಹೇಳಿಕೊಂಡಿದ್ದರು.

ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಸಾಮಾನ್ಯ ಜನರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು.

ತಮ್ಮನ್ನು ಸೋಫಿಯನ್ ಎಂಬಲ್ಲಿ ಸೇನಾ ಶಿಬಿರಕ್ಕೆ ವಿಚಾರಣೆಗೆಂದು ಕರೆಸಿಕೊಂಡು ವಿಚಾರಣೆಯ ನೆಪದಲ್ಲಿ ಒಬ್ಬ ಮನಷ್ಯ ತೀರಾ ಹತ್ತಿರಕ್ಕೆ ಬಂದು ತೊಂದರೆ ಕೊಟ್ಟಿದ್ದರು. ಮೈಕ್ ನಲ್ಲಿ ಅದೆಲ್ಲಾ ಮುದ್ರಿತಗೊಂಡಿದೆ ಎಂದು ಆರೋಪಿಸಿದ್ದರು.

ಇದಾದ ನಂತರ ವಕೀಲ್ ಅಲಾಕ್ ಅಲೋಕ್ ಶ್ರೀವತ್ಸ ಎಂಬುವವರ ದೆಹಲಿ ಪೊಲೀಸರ ಬಳಿ ದೂರೊಂದನ್ನು ನೀಡಿದ್ದು “ಶೆಹ್ಲಾ ಸುಳ್ಲು ಸುದ್ದಿಗಳನ್ನು ಹರಡುತ್ತಿದ್ದಾರೆ, ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ, ಅವರ ಬಳಿ ಯಾವುದೇ ದಾಖಲೆಗಳಿಲ್ಲ” ಎಂದು ದೂರಿದ್ದರು.

ಈ ರೀತಿ ಉದ್ದೇಶಪೂರ್ವಕವಾಗಿ ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ಸೈನ್ಯದ ಮೇಲೆ ಕೆಟ್ಟ ಹೆಸರು ಬರಲೆಂದು ಅವರು ಸುಳ್ಲು ಆರೋಪಗಳನ್ನು ಮಾಡಿದ್ದಾರೆ ಎಂದು ಶ್ರೀವತ್ಸ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೆಪ್ಟೆಂಬರ್ 3 ರಂದು ಸಲ್ಲಿಸಿದ ಎಫ್‌ಐಆರ್‌ನಲ್ಲಿ, ರಶೀದ್ ವಿರುದ್ಧ 124 ಎ (ದೇಶದ್ರೋಹ), 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಅಪೇಕ್ಷಿತವಾಗಿ ಪ್ರಚೋದನೆಯನ್ನು ನೀಡುವ ಉದ್ದೇಶದಿಂದ ಪ್ರಚೋದಿಸಿ ಗಲಭೆಗೆ ಕಾರಣ), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು ಭಾರತೀಯ ದಂಡ ಸಂಹಿತೆಯ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಲಾಗಿದೆ.

ದೆಹಲಿ ಪೊಲೀಸರ ವಿಶೇಷ ಸೆಲ್ ಪ್ರಕರಣದ ವಿಚಾರಣೆ ನಡೆಸಿತ್ತಿದೆ. ಇದೇ ಪೊಲೀಸರು ರಶೀದ್ ಅವರ ಬ್ಯಾಚ್‌ಮೇಟ್ ಮತ್ತು ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧದ ದೇಶದ್ರೋಹ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ.

ಸಂಸತ್ತಿನ ದಾಳಿಯ ಮಾಸ್ಟರ್ ಮೈಂಡ್ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನೆನಪಿಗಾಗಿ 2016 ರ ಫೆಬ್ರವರಿ 9 ರಂದು ಜೆಎನ್‌ಯುನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕುಮಾರ್ ಮತ್ತು ಇತರ ಒಂಬತ್ತು ಜನರ ವಿರುದ್ಧ ದೆಹಲಿ ಪೊಲೀಸರು ಈ ವರ್ಷದ ಜನವರಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಆಗಿನ ಜೆಎನ್‌ಯುಎಸ್‌ಯು ಉಪಾಧ್ಯಕ್ಷೆ ಶೆಹ್ಲಾ ರಶೀದ್ ಮತ್ತು ಇತರ 35 ಮಂದಿಯನ್ನು ಚಾರ್ಜ್‌ಶೀಟ್‌ನ 12 ನೇ ಕಾಲಂನಲ್ಲಿ ಹೆಸರಿಸಲಾಗಿದೆ. ಆದರೆ ಇಂದು ದೆಹಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದು ಘೋಷಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...